Homeಎಕಾನಮಿಜಿಎಸ್‌ಟಿ ಪರಿಹಾರ: ಕೇಂದ್ರದ ಸಾಲದ ಆಯ್ಕೆಯನ್ನು ಒಪ್ಪಿಕೊಂಡ 13 ರಾಜ್ಯಗಳು

ಜಿಎಸ್‌ಟಿ ಪರಿಹಾರ: ಕೇಂದ್ರದ ಸಾಲದ ಆಯ್ಕೆಯನ್ನು ಒಪ್ಪಿಕೊಂಡ 13 ರಾಜ್ಯಗಳು

ಆದರೆ, ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಜಿಎಸ್‌ಟಿ ಪರಿಹಾರ ಹಣವನ್ನು ನೀಡಲು ಸಾದ್ಯವಿಲ್ಲ ಎಂದು, ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದ್ದ ಸಾಲದ ಆಯ್ಕೆಯನ್ನು ದೇಶದ 13 ರಾಜ್ಯಗಳು ಒಪ್ಪಿಕೊಂಡಿವೆ.

ಆಂಧ್ರಪ್ರದೇಶ, ಬಿಹಾರ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮೇಘಾಲಯ, ಸಿಕ್ಕಿಂ, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾ ರಾಜ್ಯಗಳು ಕೇಂದ್ರ ಸರ್ಕಾರದ ಸಾಲ ಪಡೆಯುವಿಕೆಯ 1ನೇ ಆಯ್ಕೆಯ ಪ್ರಸ್ತಾವವನ್ನು ಒಪ್ಪೊಕೊಂಡಿವೆ. ಆದರೆ ಮಣಿಪುರ ಮಾತ್ರ ಆಯ್ಕೆ 2 ಅನ್ನು ಆರಿಸಿದೆ.

ಇನ್ನೂ ಆರು ರಾಜ್ಯಗಳಾದ, ಗೋವಾ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಹಿಮಾಚಲ ಪ್ರದೇಶ – ಒಂದು ಅಥವಾ ಎರಡು ದಿನಗಳಲ್ಲಿ ತಮ್ಮ ಆಯ್ಕೆಯನ್ನು ನೀಡಲಿವೆ ಎಂಬುದನ್ನು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಸಬೇಕೆಂದು ಕೇಂದ್ರ ಹೇಳಿದೆ.

ಕೆಲವು ರಾಜ್ಯಗಳು ತಮ್ಮ ಅಭಿಪ್ರಾಯಗಳನ್ನು ಜಿಎಸ್‌ಟಿ ಕೌನ್ಸಿಲ್ ಅಧ್ಯಕ್ಷರಿಗೆ ಸಲ್ಲಿಸಿದ್ದು, ಆಯ್ಕೆಗಳ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಆಗಸ್ಟ್ 27 ರಂದು ನಡೆದ ಸಭೆಯಲ್ಲಿ ಜಿಎಸ್‌ಟಿ ಕೌನ್ಸಿಲ್ ಈ ಎರಡು ಆಯ್ಕೆಗಳನ್ನು ನಿರ್ಧರಿಸಿತ್ತು.

ಆದರೆ, ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಎಸ್‌‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದು ಸಲಹೆ ನೀಡಿದ್ದರು.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಈಗಾಗಲೇ ಹಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಜಾರ್ಖಂಡ್ ಸಿಎಂ ಕೂಡ ಅವರ ಸಾಲಿಗೆ ಸೇರಿದ್ದಾರೆ. “ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಂಜರುಗೊಳಿಸಿದೆ ಎಂದು ತಮ್ಮ ಪತ್ರದಲ್ಲಿ ಸೊರೆನ್ ತಿಳಿಸಿದ್ದರು. ಕೇಂದ್ರ ಸಂಸತ್ತಿನಲ್ಲಿ ನಡೆದ ಎಲ್ಲಾ ಕೌನ್ಸಿಲ್ ಸಭೆಗಳಲ್ಲೂ ರಾಜ್ಯಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿ ನಡೆಯುವ ಕೇಂದ್ರ ಸರ್ಕಾರದ ನಡೆ ದೇಶದ ಸಾರ್ವಭೌಮಕ್ಕೆ ದಕ್ಕೆ ತರುತ್ತದೆ ಎಂದಿದ್ದರು.”

ತಮ್ಮ ಹಕ್ಕುಗಳಿಗಾಗಿ, ಕೇಂದ್ರದಿಂದ ಬರಬೇಕಾದ ಬಿಎಸ್‌ಟಿ ಪರಿಹಾರಕ್ಕಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಮಾತ್ರ ಕೇಂದ್ರ ನೀಡಿದ ಮೊದಲ ಆಯ್ಕೆ ತೆಗೆದುಕೊಂಡಿದ್ದು, ಸಾಲ ಪಡೆಯಲು ಸಿದ್ಧವಾಗಿದೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...