Homeಮುಖಪುಟಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ - ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ.

- Advertisement -
- Advertisement -

ಜಿಎಸ್‌ಟಿ ಪರಿಹಾರದ ಬಗ್ಗೆ ಕೇಂದ್ರ ಮತ್ತು ರಾಜ್ಯಗಳ ನಡುವೆ ಕ್ಷೀಣಿಸುತ್ತಿರುವ ನಂಬಿಕೆಯನ್ನ ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬಲಪಡಿಸಲು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಸೊರೆನ್ ಮನವಿ ಮಾಡಿದ್ದಾರೆ.

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಈಗಾಗಲೇ ಹಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈಗ ಜಾರ್ಖಂಡ್ ಸಿಎಂ ಕೂಡ ಅವರ ಸಾಲಿಗೆ ಸೇರಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಂಜರುಗೊಳಿಸಿದೆ ಎಂದು ತಮ್ಮ ಪತ್ರದಲ್ಲಿ ಸೊರೆನ್ ತಿಳಿಸಿದ್ದಾರೆ. ಕೇಂದ್ರ ಸಂಸತ್ತಿನಲ್ಲಿ ನಡೆದ ಎಲ್ಲಾ ಕೌನ್ಸಿಲ್ ಸಭೆಗಳಲ್ಲೂ ರಾಜ್ಯಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿ ನಡೆಯುವ ಕೇಂದ್ರ ಸರ್ಕಾರದ ನಡೆ ದೇಶದ ಸಾರ್ವಭೌಮಕ್ಕೆ ದಕ್ಕೆ ತರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

2017ರ ಜಿಎಸ್‌ಟಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣವನ್ನು ನೆನೆಸಿಕೊಳ್ಳುವ ಹೇಮಂತ್ ಸೊರೆನ್ ನೀವು ಒಕ್ಕೂಟ ವ್ಯವಸ್ಥೆಯಿಂದ ಭಾರತ ಬೆಳೆಯಲು ಸಾಧ್ಯ  ಎಂದಿದ್ದಿರಿ. ಆದರೆ ಈಗ ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

ಇನ್ನು ಖನಿಜ ವಲಯದಿಂದಲೇ ಜಾರ್ಖಂಡ್ ಸುಮಾರು 5,000 ಕೋಟಿ ರೂ. ಪರಿಹಾರ ನಿಧಿಗೆ ಕೊಡುಗೆ ನೀಡುತ್ತದೆ, ಆದರೆ ಪ್ರತಿಯಾಗಿ ಪಡೆಯುವುದು ಮಾಸಿಕ ಪರಿಹಾರವಾಗಿ ಕೇವಲ 150 ಕೋಟಿ ರೂಪಾಯಿಗಳ ಅಲ್ಪ ಮೊತ್ತವಾಗಿದೆ. ಈಗ ಸರ್ಕಾರಿ ನೌಕರರ ವೇತನವನ್ನು ಪೂರೈಸಲು ರಾಜ್ಯಕ್ಕೆ ಕಷ್ಟವಾಗಿರುವ ಸಮಯದಲ್ಲಿ ಸಾಲ ಪಡೆಯಲು ಹೇಳಲಾಗುತ್ತಿದೆ. ಕೊರೊನಾ ಸಮಯದಲ್ಲಿ ನೀವು  ಪರಿಹಾರಕ್ಕಿಂತ ಹೆಚ್ಚಿನದನ್ನು ನೀಡಬೇಕೆಂದು ನಾವು ಸ್ವಾಭಾವಿಕವಾಗಿ ನಿರೀಕ್ಷಿಸಿದ್ದೇವೆ” ಎಂದು ಸೊರೆನ್ ಹೇಳಿದರು.

2020-21 ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಪರಿಹಾರದಲ್ಲಿ 2.35 ಲಕ್ಷ ಕೋಟಿ ರೂ.ಗಳ ಕೊರತೆಯನ್ನು ಪೂರೈಸಲು ಆಗಸ್ಟ್ 29 ರಂದು ಕೇಂದ್ರ ಹಣಕಾಸು ಸಚಿವಾಲಯ ರಾಜ್ಯಗಳ ಮುಂದೆ ಎರಡು ಆಯ್ಕೆಗಳನ್ನು ಇಟ್ಟಿತ್ತು.  ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022 ರ ನಂತರ ಕೇಂದ್ರ ಸರ್ಕಾರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ಪರಿಹಾರ ಕೋರಿ ಸೆಪ್ಟೆಂಬರ್ 2 ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿಗೆ ಪತ್ರ ಬರೆದು, ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ ಪರಿಹಾರವನ್ನು ನಿರಾಕರಿಸುವುದು ನಮ್ಮ ರಾಷ್ಟ್ರದ ಫೆಡರಲಿಸ್ಟ್ ನೀತಿಗೆ ಅಸಹನೀಯ ಹೊಡೆತ ಎಂದಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

ಕೇರಳ ಮತ್ತು ಛತ್ತೀಸ್‌ಘಡ ಸರ್ಕಾರಗಳು ಕೇಂದ್ರವೇ ಸಾಲ ಪಡೆದು ಜಿಎಸ್‌ಟಿ ನೀಡಲು ಕೇಂದ್ರವನ್ನು ಕೇಳಿಕೊಂಡಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದು ಈ ಸಮಯದಲ್ಲಿ ಕಾನೂನುಬದ್ಧವಾದ ಮತ್ತು ಸುಸ್ಥಿರ ಆಯ್ಕೆಗಳನ್ನು ಪರಿಗಣಿಸುವಂತೆ ತಿಳಿಸಿದ್ದರು.. ಅಂತೆಯೇ, ಆದಾಯ ನಷ್ಟಕ್ಕೆ ರಾಜ್ಯಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಬದ್ಧವಾಗಿದೆ ಎಂದು ಪುದುಚೇರಿ ಮುಖ್ಯಮಂತ್ರಿ ಹೇಳಿದ್ದಾರೆ.

ತಮ್ಮ ಹಕ್ಕುಗಳಿಗಾಗಿ, ಕೇಂದ್ರದಿಂದ ಬರಬೇಕಾದ ಬಿಎಸ್‌ಟಿ ಪರಿಹಾರಕ್ಕಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಮಾತ್ರ ಕೇಂದ್ರ ನೀಡಿದ ಮೊದಲ ಆಯ್ಕೆ ತೆಗೆದುಕೊಂಡಿದ್ದು, ಸಾಲ ಪಡೆಯಲು ಸಿದ್ಧವಾಗಿದೆ.


ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....