Homeಮುಖಪುಟಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ - ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ.

- Advertisement -
- Advertisement -

ಜಿಎಸ್‌ಟಿ ಪರಿಹಾರದ ಬಗ್ಗೆ ಕೇಂದ್ರ ಮತ್ತು ರಾಜ್ಯಗಳ ನಡುವೆ ಕ್ಷೀಣಿಸುತ್ತಿರುವ ನಂಬಿಕೆಯನ್ನ ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬಲಪಡಿಸಲು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಸೊರೆನ್ ಮನವಿ ಮಾಡಿದ್ದಾರೆ.

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಈಗಾಗಲೇ ಹಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈಗ ಜಾರ್ಖಂಡ್ ಸಿಎಂ ಕೂಡ ಅವರ ಸಾಲಿಗೆ ಸೇರಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಂಜರುಗೊಳಿಸಿದೆ ಎಂದು ತಮ್ಮ ಪತ್ರದಲ್ಲಿ ಸೊರೆನ್ ತಿಳಿಸಿದ್ದಾರೆ. ಕೇಂದ್ರ ಸಂಸತ್ತಿನಲ್ಲಿ ನಡೆದ ಎಲ್ಲಾ ಕೌನ್ಸಿಲ್ ಸಭೆಗಳಲ್ಲೂ ರಾಜ್ಯಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿ ನಡೆಯುವ ಕೇಂದ್ರ ಸರ್ಕಾರದ ನಡೆ ದೇಶದ ಸಾರ್ವಭೌಮಕ್ಕೆ ದಕ್ಕೆ ತರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

2017ರ ಜಿಎಸ್‌ಟಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣವನ್ನು ನೆನೆಸಿಕೊಳ್ಳುವ ಹೇಮಂತ್ ಸೊರೆನ್ ನೀವು ಒಕ್ಕೂಟ ವ್ಯವಸ್ಥೆಯಿಂದ ಭಾರತ ಬೆಳೆಯಲು ಸಾಧ್ಯ  ಎಂದಿದ್ದಿರಿ. ಆದರೆ ಈಗ ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

ಇನ್ನು ಖನಿಜ ವಲಯದಿಂದಲೇ ಜಾರ್ಖಂಡ್ ಸುಮಾರು 5,000 ಕೋಟಿ ರೂ. ಪರಿಹಾರ ನಿಧಿಗೆ ಕೊಡುಗೆ ನೀಡುತ್ತದೆ, ಆದರೆ ಪ್ರತಿಯಾಗಿ ಪಡೆಯುವುದು ಮಾಸಿಕ ಪರಿಹಾರವಾಗಿ ಕೇವಲ 150 ಕೋಟಿ ರೂಪಾಯಿಗಳ ಅಲ್ಪ ಮೊತ್ತವಾಗಿದೆ. ಈಗ ಸರ್ಕಾರಿ ನೌಕರರ ವೇತನವನ್ನು ಪೂರೈಸಲು ರಾಜ್ಯಕ್ಕೆ ಕಷ್ಟವಾಗಿರುವ ಸಮಯದಲ್ಲಿ ಸಾಲ ಪಡೆಯಲು ಹೇಳಲಾಗುತ್ತಿದೆ. ಕೊರೊನಾ ಸಮಯದಲ್ಲಿ ನೀವು  ಪರಿಹಾರಕ್ಕಿಂತ ಹೆಚ್ಚಿನದನ್ನು ನೀಡಬೇಕೆಂದು ನಾವು ಸ್ವಾಭಾವಿಕವಾಗಿ ನಿರೀಕ್ಷಿಸಿದ್ದೇವೆ” ಎಂದು ಸೊರೆನ್ ಹೇಳಿದರು.

2020-21 ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಪರಿಹಾರದಲ್ಲಿ 2.35 ಲಕ್ಷ ಕೋಟಿ ರೂ.ಗಳ ಕೊರತೆಯನ್ನು ಪೂರೈಸಲು ಆಗಸ್ಟ್ 29 ರಂದು ಕೇಂದ್ರ ಹಣಕಾಸು ಸಚಿವಾಲಯ ರಾಜ್ಯಗಳ ಮುಂದೆ ಎರಡು ಆಯ್ಕೆಗಳನ್ನು ಇಟ್ಟಿತ್ತು.  ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022 ರ ನಂತರ ಕೇಂದ್ರ ಸರ್ಕಾರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ಪರಿಹಾರ ಕೋರಿ ಸೆಪ್ಟೆಂಬರ್ 2 ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿಗೆ ಪತ್ರ ಬರೆದು, ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ ಪರಿಹಾರವನ್ನು ನಿರಾಕರಿಸುವುದು ನಮ್ಮ ರಾಷ್ಟ್ರದ ಫೆಡರಲಿಸ್ಟ್ ನೀತಿಗೆ ಅಸಹನೀಯ ಹೊಡೆತ ಎಂದಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

ಕೇರಳ ಮತ್ತು ಛತ್ತೀಸ್‌ಘಡ ಸರ್ಕಾರಗಳು ಕೇಂದ್ರವೇ ಸಾಲ ಪಡೆದು ಜಿಎಸ್‌ಟಿ ನೀಡಲು ಕೇಂದ್ರವನ್ನು ಕೇಳಿಕೊಂಡಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದು ಈ ಸಮಯದಲ್ಲಿ ಕಾನೂನುಬದ್ಧವಾದ ಮತ್ತು ಸುಸ್ಥಿರ ಆಯ್ಕೆಗಳನ್ನು ಪರಿಗಣಿಸುವಂತೆ ತಿಳಿಸಿದ್ದರು.. ಅಂತೆಯೇ, ಆದಾಯ ನಷ್ಟಕ್ಕೆ ರಾಜ್ಯಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಬದ್ಧವಾಗಿದೆ ಎಂದು ಪುದುಚೇರಿ ಮುಖ್ಯಮಂತ್ರಿ ಹೇಳಿದ್ದಾರೆ.

ತಮ್ಮ ಹಕ್ಕುಗಳಿಗಾಗಿ, ಕೇಂದ್ರದಿಂದ ಬರಬೇಕಾದ ಬಿಎಸ್‌ಟಿ ಪರಿಹಾರಕ್ಕಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಮಾತ್ರ ಕೇಂದ್ರ ನೀಡಿದ ಮೊದಲ ಆಯ್ಕೆ ತೆಗೆದುಕೊಂಡಿದ್ದು, ಸಾಲ ಪಡೆಯಲು ಸಿದ್ಧವಾಗಿದೆ.


ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...