Homeಮುಖಪುಟಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ - ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ.

- Advertisement -
- Advertisement -

ಜಿಎಸ್‌ಟಿ ಪರಿಹಾರದ ಬಗ್ಗೆ ಕೇಂದ್ರ ಮತ್ತು ರಾಜ್ಯಗಳ ನಡುವೆ ಕ್ಷೀಣಿಸುತ್ತಿರುವ ನಂಬಿಕೆಯನ್ನ ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬಲಪಡಿಸಲು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಸೊರೆನ್ ಮನವಿ ಮಾಡಿದ್ದಾರೆ.

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಈಗಾಗಲೇ ಹಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈಗ ಜಾರ್ಖಂಡ್ ಸಿಎಂ ಕೂಡ ಅವರ ಸಾಲಿಗೆ ಸೇರಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಂಜರುಗೊಳಿಸಿದೆ ಎಂದು ತಮ್ಮ ಪತ್ರದಲ್ಲಿ ಸೊರೆನ್ ತಿಳಿಸಿದ್ದಾರೆ. ಕೇಂದ್ರ ಸಂಸತ್ತಿನಲ್ಲಿ ನಡೆದ ಎಲ್ಲಾ ಕೌನ್ಸಿಲ್ ಸಭೆಗಳಲ್ಲೂ ರಾಜ್ಯಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿ ನಡೆಯುವ ಕೇಂದ್ರ ಸರ್ಕಾರದ ನಡೆ ದೇಶದ ಸಾರ್ವಭೌಮಕ್ಕೆ ದಕ್ಕೆ ತರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

2017ರ ಜಿಎಸ್‌ಟಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣವನ್ನು ನೆನೆಸಿಕೊಳ್ಳುವ ಹೇಮಂತ್ ಸೊರೆನ್ ನೀವು ಒಕ್ಕೂಟ ವ್ಯವಸ್ಥೆಯಿಂದ ಭಾರತ ಬೆಳೆಯಲು ಸಾಧ್ಯ  ಎಂದಿದ್ದಿರಿ. ಆದರೆ ಈಗ ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

ಇನ್ನು ಖನಿಜ ವಲಯದಿಂದಲೇ ಜಾರ್ಖಂಡ್ ಸುಮಾರು 5,000 ಕೋಟಿ ರೂ. ಪರಿಹಾರ ನಿಧಿಗೆ ಕೊಡುಗೆ ನೀಡುತ್ತದೆ, ಆದರೆ ಪ್ರತಿಯಾಗಿ ಪಡೆಯುವುದು ಮಾಸಿಕ ಪರಿಹಾರವಾಗಿ ಕೇವಲ 150 ಕೋಟಿ ರೂಪಾಯಿಗಳ ಅಲ್ಪ ಮೊತ್ತವಾಗಿದೆ. ಈಗ ಸರ್ಕಾರಿ ನೌಕರರ ವೇತನವನ್ನು ಪೂರೈಸಲು ರಾಜ್ಯಕ್ಕೆ ಕಷ್ಟವಾಗಿರುವ ಸಮಯದಲ್ಲಿ ಸಾಲ ಪಡೆಯಲು ಹೇಳಲಾಗುತ್ತಿದೆ. ಕೊರೊನಾ ಸಮಯದಲ್ಲಿ ನೀವು  ಪರಿಹಾರಕ್ಕಿಂತ ಹೆಚ್ಚಿನದನ್ನು ನೀಡಬೇಕೆಂದು ನಾವು ಸ್ವಾಭಾವಿಕವಾಗಿ ನಿರೀಕ್ಷಿಸಿದ್ದೇವೆ” ಎಂದು ಸೊರೆನ್ ಹೇಳಿದರು.

2020-21 ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಪರಿಹಾರದಲ್ಲಿ 2.35 ಲಕ್ಷ ಕೋಟಿ ರೂ.ಗಳ ಕೊರತೆಯನ್ನು ಪೂರೈಸಲು ಆಗಸ್ಟ್ 29 ರಂದು ಕೇಂದ್ರ ಹಣಕಾಸು ಸಚಿವಾಲಯ ರಾಜ್ಯಗಳ ಮುಂದೆ ಎರಡು ಆಯ್ಕೆಗಳನ್ನು ಇಟ್ಟಿತ್ತು.  ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022 ರ ನಂತರ ಕೇಂದ್ರ ಸರ್ಕಾರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ಪರಿಹಾರ ಕೋರಿ ಸೆಪ್ಟೆಂಬರ್ 2 ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿಗೆ ಪತ್ರ ಬರೆದು, ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ ಪರಿಹಾರವನ್ನು ನಿರಾಕರಿಸುವುದು ನಮ್ಮ ರಾಷ್ಟ್ರದ ಫೆಡರಲಿಸ್ಟ್ ನೀತಿಗೆ ಅಸಹನೀಯ ಹೊಡೆತ ಎಂದಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

ಕೇರಳ ಮತ್ತು ಛತ್ತೀಸ್‌ಘಡ ಸರ್ಕಾರಗಳು ಕೇಂದ್ರವೇ ಸಾಲ ಪಡೆದು ಜಿಎಸ್‌ಟಿ ನೀಡಲು ಕೇಂದ್ರವನ್ನು ಕೇಳಿಕೊಂಡಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದು ಈ ಸಮಯದಲ್ಲಿ ಕಾನೂನುಬದ್ಧವಾದ ಮತ್ತು ಸುಸ್ಥಿರ ಆಯ್ಕೆಗಳನ್ನು ಪರಿಗಣಿಸುವಂತೆ ತಿಳಿಸಿದ್ದರು.. ಅಂತೆಯೇ, ಆದಾಯ ನಷ್ಟಕ್ಕೆ ರಾಜ್ಯಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಬದ್ಧವಾಗಿದೆ ಎಂದು ಪುದುಚೇರಿ ಮುಖ್ಯಮಂತ್ರಿ ಹೇಳಿದ್ದಾರೆ.

ತಮ್ಮ ಹಕ್ಕುಗಳಿಗಾಗಿ, ಕೇಂದ್ರದಿಂದ ಬರಬೇಕಾದ ಬಿಎಸ್‌ಟಿ ಪರಿಹಾರಕ್ಕಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಮಾತ್ರ ಕೇಂದ್ರ ನೀಡಿದ ಮೊದಲ ಆಯ್ಕೆ ತೆಗೆದುಕೊಂಡಿದ್ದು, ಸಾಲ ಪಡೆಯಲು ಸಿದ್ಧವಾಗಿದೆ.


ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...