Homeಮುಖಪುಟಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಜಿಎಸ್‌ಟಿ ಪರಿಹಾರ ಸಾಲ ಪಡೆಯಲು ಸಿದ್ಧ ಎಂದು ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಎಸ್‌‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಈ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹ 2.35 ಲಕ್ಷ ಕೋಟಿ ಕೊರತೆ ಬೀಳುವ ಕಾರಣ ರಾಜ್ಯಗಳಿಗೆ ಪಾಲು ನೀಡಲು ಹಣದ ಕೊರತೆಯಾಗಿದೆ ಎಂದು ಕೇಂದ್ರ ಸರ್ಕಾರದ ಕಂದಾಯ ಕಾರ್ಯದರ್ಶಿ ಎ.ಬಿ.‌ ಪಾಂಡೆ ತಿಳಿಸಿದ್ದರು.

ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ ಪರಿಹಾರವನ್ನು ನಿರಾಕರಿಸುವುದು ನಮ್ಮ ರಾಷ್ಟ್ರದ ಒಕ್ಕೂಟ ನೀತಿಗೆ ಅಸಹನೀಯ ಹೊಡೆತ ಎಂದು ತಮ್ಮ ಪತ್ರದಲ್ಲಿ ಅವರು ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜಿಎಸ್‌ಟಿ ಕೊರತೆಗೆ ರಾಜ್ಯಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯಲ್ಲ ಎಂದಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಅಭಿಪ್ರಾಯವನ್ನು ಪತ್ರದಲ್ಲಿ ಟೀಕಿಸಿದ್ದಾರೆ. ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದಿದ್ದ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಬೇಡಿಕೆಗೆ ಮಮತಾ ಬ್ಯಾನರ್ಜಿ ಕೂಡ ಸೇರಿಕೊಂಡಿದ್ದಾರೆ.

41 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೊರೊನಾದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ, ಕೊರೊನಾ ದೇವರ ಕಾರ್ಯ ಎನ್ನುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಸಹಾಯಕತೆ ಪ್ರದರ್ಶಿಸಿದ್ದರು. 2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ ಒಟ್ಟು 1.65 ಲಕ್ಷ ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ನೀಡಲಾಗಿದೆ. ಆದರೆ ಜಿಎಸ್‌ಟಿ ಪರಿಹಾರಕ್ಕಾಗಿನ ಸೆಸ್ ಸಂಗ್ರಹ ಕೇವಲ 95,444 ಕೋಟಿ ರೂ. ಗೆ ಕುಸಿದಿದೆ ಎಂದು ಹಣಕಾಸು ಸಚಿವೆ ತಿಳಿಸಿದ್ದರು.

ಇದನ್ನೂ ಓದಿ: ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ

ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿರುವ ಆಯ್ಕೆಗಳು ಏಕಪಕ್ಷೀಯವಾದವು ಎಂದು ಮಮತ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022 ರ ನಂತರ ಕೇಂದ್ರ ಸರ್ಕಾರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಿದ್ದರು. ಆದರೆ ಕೇಂದ್ರ ಸರ್ಕಾರವೇ ರಾಜ್ಯಗಳ ಬಳಿ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

“ಸರಕು ಮತ್ತು ಸೇವಾ ತೆರಿಗೆ ಅಸ್ತವ್ಯಸ್ತವಾಗಿರುವುದು ನನಗೆ ತೀವ್ರ ದುಃಖವಾಗಿದೆ. ಇದು ರಾಜ್ಯ ಸರ್ಕಾರಗಳ ಬಗ್ಗೆ ಭಾರತ ಸರ್ಕಾರದ ನಂಬಿಕೆ ಮತ್ತು ನೈತಿಕ ಹೊಣೆಗಾರಿಕೆಯನ್ನು ದ್ರೋಹಕ್ಕೆ ಸಮನಾಗಿರುತ್ತದೆ, ಇದರಿಂದ ಒಕ್ಕೂಟ ವ್ಯವಸ್ಥೆಯ ನಂಬಿಕೆಯನ್ನು ಹೊಡೆದುಹಾಕಿದೆ” ಎಂದು ಮಮತ ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ರಾಜ್ಯಗಳು ಕೇಂದ್ರಕ್ಕೆ ಸಂಪೂರ್ಣ ವ್ಯಾಟ್ ವಿಧಿಸುವ ಅಧಿಕಾರವನ್ನು ಒಳಗೊಂಡಂತೆ ಶೇಕಡಾ 70 ರಷ್ಟು ಅಧಿಕಾರವನ್ನು ಬಿಟ್ಟುಕೊಟ್ಟಿವೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಅತ್ಯುತ್ತಮ ಉದಾಹರಣೆಯೆಂದು ಜಾಗತಿಕವಾಗಿ ಪ್ರಶಂಸಿಸಲ್ಪಟ್ಟ ಜಿಎಸ್ಟಿ ವಿಷಯಗಳ ಬಗ್ಗೆ ರಾಜ್ಯಗಳು ಮತ್ತು ಕೇಂದ್ರದ ನಡುವಿನ ನಂಬಿಕೆಯನ್ನು ನಂಬಬೇಡಿ ಎಂದು ನಾನು ನಿಮ್ಮನ್ನು ಪ್ರಾಮಾಣಿಕವಾಗಿ ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯಗಳಿಗೆ ಪರಿಹಾರ ನೀಡುವುದು ಕೇಂದ್ರವು ಕರ್ತವ್ಯವಾಗಿದೆ. ಹೀಗಾಗಿ ಕೊರತೆಯನ್ನು ಪೂರೈಸಲು ಕೇಂದ್ರ ಸಾಲ ಪಡೆಯಬೇಕು. ಇದಲ್ಲದೆ, ಭಾರತ ಸರ್ಕಾರವು ತನ್ನ ಸಾಲವನ್ನು ಪೂರೈಸಲು ಸಂಪನ್ಮೂಲಗಳನ್ನು ಸಂಗ್ರಹಿಸಬಹುದು, ಆದರೆ ರಾಜ್ಯಗಳು ತಮ್ಮ ಹಣಕಾಸು ಕುಸಿತದ ಅಂಚಿನಲ್ಲಿರುವಾಗ ಹೆಚ್ಚಿನ ಹೆಚ್ಚುವರಿ ಸಾಲಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ಇತ್ತ ಕೇರಳ ಮತ್ತು ಛತ್ತೀಸ್‌ಗಢ ಸರ್ಕಾರಗಳು ಕೇಂದ್ರ ಸರ್ಕಾರ ಸಾಲ ಪಡೆದು ಬಾಕಿ ನೀಡುವಂತೆ ಒತ್ತಾಯಿಸಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದು ಈ ಸಮಯದಲ್ಲಿ ಕಾನೂನುಬದ್ಧವಾದ ಮತ್ತು ಸುಸ್ಥಿರ ಆಯ್ಕೆಗಳನ್ನು ಪರಿಗಣಿಸುವಂತೆ ತಿಳಿಸಿದ್ದಾರೆ.

ಸಾಲ ಪಡೆಯಲು ಕರ್ನಾಟಕ ಸಿದ್ಧ

ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ನೀಡಿರುವ ಎರಡು ಆಯ್ಕೆಗಳಲ್ಲಿ ಮೊದಲನೆಯದನ್ನು ಆಯ್ಕೆ ಮಾಡಿಕೊಂಡಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಪ್ರಕಾರ ಒಟ್ಟು 18,289 ಕೋಟಿ ರೂ. ಪರಿಹಾರ ಪಡೆಯಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಆದಾಯ ಹೆಚ್ಚಳಕ್ಕೆ ಇದು ಸಹಕಾರಿಯಾಗಲಿದೆ ಎಂದು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ತಮ್ಮ ಜಿಎಸ್‌ಟಿ ಹಕ್ಕುಗಳಿಗಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿ ಮೋದಿಗೆ ಪತ್ರ ಬರೆದು ಪ್ರತಿರೋಧ ತೋರಿಸುತ್ತಿವೆ. ಆದರೆ ಬಿಜೆಪಿ ಆಡಳಿತವಿರುವ ಸರ್ಕಾರಗಳು ಕೇಂದ್ರ ಸರ್ಕಾರದಿಂದ ಸಾಲ ಪಡೆಯಲು ನಿರ್ಧರಿಸುತ್ತಿದ್ದು, ಅದರಲ್ಲಿ ಕರ್ನಾಟಕ ಮೊದಲನೆಯದ್ದಾಗಿದೆ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....