Homeಮುಖಪುಟಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಜಿಎಸ್‌ಟಿ ಪರಿಹಾರ ಸಾಲ ಪಡೆಯಲು ಸಿದ್ಧ ಎಂದು ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಎಸ್‌‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಈ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹ 2.35 ಲಕ್ಷ ಕೋಟಿ ಕೊರತೆ ಬೀಳುವ ಕಾರಣ ರಾಜ್ಯಗಳಿಗೆ ಪಾಲು ನೀಡಲು ಹಣದ ಕೊರತೆಯಾಗಿದೆ ಎಂದು ಕೇಂದ್ರ ಸರ್ಕಾರದ ಕಂದಾಯ ಕಾರ್ಯದರ್ಶಿ ಎ.ಬಿ.‌ ಪಾಂಡೆ ತಿಳಿಸಿದ್ದರು.

ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ ಪರಿಹಾರವನ್ನು ನಿರಾಕರಿಸುವುದು ನಮ್ಮ ರಾಷ್ಟ್ರದ ಒಕ್ಕೂಟ ನೀತಿಗೆ ಅಸಹನೀಯ ಹೊಡೆತ ಎಂದು ತಮ್ಮ ಪತ್ರದಲ್ಲಿ ಅವರು ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜಿಎಸ್‌ಟಿ ಕೊರತೆಗೆ ರಾಜ್ಯಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯಲ್ಲ ಎಂದಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಅಭಿಪ್ರಾಯವನ್ನು ಪತ್ರದಲ್ಲಿ ಟೀಕಿಸಿದ್ದಾರೆ. ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದಿದ್ದ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಬೇಡಿಕೆಗೆ ಮಮತಾ ಬ್ಯಾನರ್ಜಿ ಕೂಡ ಸೇರಿಕೊಂಡಿದ್ದಾರೆ.

41 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೊರೊನಾದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ, ಕೊರೊನಾ ದೇವರ ಕಾರ್ಯ ಎನ್ನುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಸಹಾಯಕತೆ ಪ್ರದರ್ಶಿಸಿದ್ದರು. 2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ ಒಟ್ಟು 1.65 ಲಕ್ಷ ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ನೀಡಲಾಗಿದೆ. ಆದರೆ ಜಿಎಸ್‌ಟಿ ಪರಿಹಾರಕ್ಕಾಗಿನ ಸೆಸ್ ಸಂಗ್ರಹ ಕೇವಲ 95,444 ಕೋಟಿ ರೂ. ಗೆ ಕುಸಿದಿದೆ ಎಂದು ಹಣಕಾಸು ಸಚಿವೆ ತಿಳಿಸಿದ್ದರು.

ಇದನ್ನೂ ಓದಿ: ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ

ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿರುವ ಆಯ್ಕೆಗಳು ಏಕಪಕ್ಷೀಯವಾದವು ಎಂದು ಮಮತ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022 ರ ನಂತರ ಕೇಂದ್ರ ಸರ್ಕಾರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಿದ್ದರು. ಆದರೆ ಕೇಂದ್ರ ಸರ್ಕಾರವೇ ರಾಜ್ಯಗಳ ಬಳಿ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

“ಸರಕು ಮತ್ತು ಸೇವಾ ತೆರಿಗೆ ಅಸ್ತವ್ಯಸ್ತವಾಗಿರುವುದು ನನಗೆ ತೀವ್ರ ದುಃಖವಾಗಿದೆ. ಇದು ರಾಜ್ಯ ಸರ್ಕಾರಗಳ ಬಗ್ಗೆ ಭಾರತ ಸರ್ಕಾರದ ನಂಬಿಕೆ ಮತ್ತು ನೈತಿಕ ಹೊಣೆಗಾರಿಕೆಯನ್ನು ದ್ರೋಹಕ್ಕೆ ಸಮನಾಗಿರುತ್ತದೆ, ಇದರಿಂದ ಒಕ್ಕೂಟ ವ್ಯವಸ್ಥೆಯ ನಂಬಿಕೆಯನ್ನು ಹೊಡೆದುಹಾಕಿದೆ” ಎಂದು ಮಮತ ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ರಾಜ್ಯಗಳು ಕೇಂದ್ರಕ್ಕೆ ಸಂಪೂರ್ಣ ವ್ಯಾಟ್ ವಿಧಿಸುವ ಅಧಿಕಾರವನ್ನು ಒಳಗೊಂಡಂತೆ ಶೇಕಡಾ 70 ರಷ್ಟು ಅಧಿಕಾರವನ್ನು ಬಿಟ್ಟುಕೊಟ್ಟಿವೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಅತ್ಯುತ್ತಮ ಉದಾಹರಣೆಯೆಂದು ಜಾಗತಿಕವಾಗಿ ಪ್ರಶಂಸಿಸಲ್ಪಟ್ಟ ಜಿಎಸ್ಟಿ ವಿಷಯಗಳ ಬಗ್ಗೆ ರಾಜ್ಯಗಳು ಮತ್ತು ಕೇಂದ್ರದ ನಡುವಿನ ನಂಬಿಕೆಯನ್ನು ನಂಬಬೇಡಿ ಎಂದು ನಾನು ನಿಮ್ಮನ್ನು ಪ್ರಾಮಾಣಿಕವಾಗಿ ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯಗಳಿಗೆ ಪರಿಹಾರ ನೀಡುವುದು ಕೇಂದ್ರವು ಕರ್ತವ್ಯವಾಗಿದೆ. ಹೀಗಾಗಿ ಕೊರತೆಯನ್ನು ಪೂರೈಸಲು ಕೇಂದ್ರ ಸಾಲ ಪಡೆಯಬೇಕು. ಇದಲ್ಲದೆ, ಭಾರತ ಸರ್ಕಾರವು ತನ್ನ ಸಾಲವನ್ನು ಪೂರೈಸಲು ಸಂಪನ್ಮೂಲಗಳನ್ನು ಸಂಗ್ರಹಿಸಬಹುದು, ಆದರೆ ರಾಜ್ಯಗಳು ತಮ್ಮ ಹಣಕಾಸು ಕುಸಿತದ ಅಂಚಿನಲ್ಲಿರುವಾಗ ಹೆಚ್ಚಿನ ಹೆಚ್ಚುವರಿ ಸಾಲಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ಇತ್ತ ಕೇರಳ ಮತ್ತು ಛತ್ತೀಸ್‌ಗಢ ಸರ್ಕಾರಗಳು ಕೇಂದ್ರ ಸರ್ಕಾರ ಸಾಲ ಪಡೆದು ಬಾಕಿ ನೀಡುವಂತೆ ಒತ್ತಾಯಿಸಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದು ಈ ಸಮಯದಲ್ಲಿ ಕಾನೂನುಬದ್ಧವಾದ ಮತ್ತು ಸುಸ್ಥಿರ ಆಯ್ಕೆಗಳನ್ನು ಪರಿಗಣಿಸುವಂತೆ ತಿಳಿಸಿದ್ದಾರೆ.

ಸಾಲ ಪಡೆಯಲು ಕರ್ನಾಟಕ ಸಿದ್ಧ

ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ನೀಡಿರುವ ಎರಡು ಆಯ್ಕೆಗಳಲ್ಲಿ ಮೊದಲನೆಯದನ್ನು ಆಯ್ಕೆ ಮಾಡಿಕೊಂಡಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಪ್ರಕಾರ ಒಟ್ಟು 18,289 ಕೋಟಿ ರೂ. ಪರಿಹಾರ ಪಡೆಯಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಆದಾಯ ಹೆಚ್ಚಳಕ್ಕೆ ಇದು ಸಹಕಾರಿಯಾಗಲಿದೆ ಎಂದು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ತಮ್ಮ ಜಿಎಸ್‌ಟಿ ಹಕ್ಕುಗಳಿಗಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿ ಮೋದಿಗೆ ಪತ್ರ ಬರೆದು ಪ್ರತಿರೋಧ ತೋರಿಸುತ್ತಿವೆ. ಆದರೆ ಬಿಜೆಪಿ ಆಡಳಿತವಿರುವ ಸರ್ಕಾರಗಳು ಕೇಂದ್ರ ಸರ್ಕಾರದಿಂದ ಸಾಲ ಪಡೆಯಲು ನಿರ್ಧರಿಸುತ್ತಿದ್ದು, ಅದರಲ್ಲಿ ಕರ್ನಾಟಕ ಮೊದಲನೆಯದ್ದಾಗಿದೆ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...