Homeಕರ್ನಾಟಕವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; 'ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ': ರಾಜ್ಯದ ಮಕ್ಕಳಿಗೆ ಸಿಎಂ...

ವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; ‘ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ’: ರಾಜ್ಯದ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಕಳೆದ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರವು ರೋಹಿತ್‌ ಚಕ್ರತೀರ್ಥ ಅವರ ಸಮಿತಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು, ಸಾಕಷ್ಟು ವಿವಾದಕ್ಕೀಡಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕದಲ್ಲಿನ ವಿವಾದಿತ ಪಾಠಗಳನ್ನು ಕೈಬಿಡಲು ದೃಢ ನಿರ್ಧಾರ ಮಾಡಿದ್ದು, ಪರಿಷ್ಕರಣೆಗಾಗಿ ತಜ್ಞರ ಸಮಿತಿಯನ್ನು ನೇಮಿಸಲೂ ತೀರ್ಮಾನಿಸಿದೆ.

ರೋಹಿತ್ ಚಕ್ರತೀರ್ಥ ಎನ್ನುವವರ ಮುಂದಾಳತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ಪಠ್ಯದಲ್ಲಿ ಅನೇಕ ಮುಖ್ಯವಾದ ವಿಚಾರಗಳನ್ನು ಕೈ ಬಿಟ್ಟು ಅನಗತ್ಯ ವಿಚಾರಗಳನ್ನು ಸೇರಿಸಲಾಗಿದೆ ಎಂದು ನಾಡಿನ ಸಾಹಿತಿಗಳು, ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ”ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳಲ್ಲಿ ತಂದಿರುವ ಬದಲಾವಣೆಗಳನ್ನು ಮರುಪರಿಶೀಲಿಸಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು” ಎಂದು ಭರವಸೆ ನೀಡಿತ್ತು. ಅದರಂತೆ ಕ್ರಮವಹಿಸಲು ಸರ್ಕಾರ ಮುಂದಾಗಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ನಧು ಬಂಗಾರಪ್ಪ ಮಾತನಾಡಿದ್ದು, ”ಪಠ್ಯಪುಸ್ತಕಗಳಲ್ಲಿ ವಿವಾದಿತ ಪಾಠಗಳನ್ನು ಕೈಬಿಡುವುದು ನಿಶ್ಚಿತ. ಅದಕ್ಕಾಗಿ ಶೀಘ್ರ ಪರಿಷ್ಕರಣಾ ಸಮಿತಿ ರಚಿಸಲಾಗುವುದು. ಮುಖ್ಯಮಂತ್ರಿ ಹಾಗೂ ತಜ್ಞರ ಜತೆ ಚರ್ಚಿಸಿದ ನಂತರ ಸಮಿತಿಯ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.

”ಸಮಿತಿಗೆ ವರದಿ ನೀಡಲು ಎರಡು ತಿಂಗಳ ಗಡುವು ನೀಡಲಾಗುವುದು. ಪಠ್ಯದಲ್ಲಿ ಕೆಲವು ಪಾಠಗಳಷ್ಟೆ ವಿವಾದಕ್ಕೆ ಒಳಗಾಗಿವೆ. ಅವುಗಳನ್ನು ಬಿಟ್ಟು ಉಳಿದ ಪಾಠಗಳನ್ನು ಬೋಧನೆ ಮಾಡಲಾಗುತ್ತದೆ. ಪೋಷಕರು, ಮಕ್ಕಳು ಅತಂಕ ಪಡುವ ಅಗತ್ಯವಿಲ್ಲ. ಈ ಕುರಿತು ಎಲ್ಲ ಶಾಲೆಗಳಿಗೂ ಸ್ಪಷ್ಟ ಸೂಚನೆ ನೀಡಲಾಗುತ್ತದೆ. ಸಮಿತಿಯ ವರದಿಯ ನಂತರ ಇದೇ ಪಠ್ಯಕ್ರಮಕ್ಕೆ ಹೊಸ ಪಾಠಗಳನ್ನು ಸೇರಿಸಲಾಗುವುದು” ಎಂದು ಮಾಹಿತಿ ನೀಡಿದರು.

ಈ ಬಗ್ಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮಾತನಾಡಿ, ”ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕಗಳಲ್ಲಿ ಆಗಿರುವ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ” ಎಂದಿದ್ದಾರೆ.

”ಇತಿಹಾಸ ಪುರುಷರನ್ನೇ ಅವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ಆ ತಪ್ಪು ತಿದ್ದಬೇಕಲ್ಲವೇ? ನಾವು ಚುನಾವಣೆಗೂ ಮುಂಚಿನಿಂದಲೇ ಅದನ್ನು ಹೇಳುತ್ತಿದ್ದೇವೆ. ಈಗ ಅದನ್ನು ಜಾರಿಗೊಳಿಸಲಿದ್ದೇವೆ. ವಾಸ್ತವವನ್ನು ಪಠ್ಯದಲ್ಲಿ ಸೇರಿಸಲಿದ್ದೇವೆ. ಸತ್ಯವಲ್ಲದ್ದನ್ನು ತೆಗೆದು ಹಾಕುತ್ತೇವೆ” ಎಂದು ಹೇಳಿದರು.

ಇನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳು ಇಂದು ಆರಂಭವಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಸ್ವಾಗತ ಕೋರಿ ಪತ್ರವೊಂದನ್ನು ಬರೆದಿದ್ದಾರೆ.

ನನ್ನ ಪ್ರೀತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರೇ,

ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ ಆನಂದದಿಂದ ಕಳೆದ ನಿಮ್ಮನ್ನು ಶಾಲೆಗಳು ಕೈಬೀಸಿ ಕರೆಯುತ್ತಿವೆ. ಕಳೆದ ಎರಡು -ಮೂರು ವರ್ಷಗಳಲ್ಲಿ ಕೊರೊನಾ ವೈರಾಣುವಿನಿಂದಾಗಿ ನೀವೆಲ್ಲ ವಿದ್ಯಾರ್ಥಿ ಜೀವನವನ್ನು ಸಂಪೂರ್ಣ ಅನುಭವಿಸಲಾಗದೆ ಅನೇಕ ಬಗೆಯ ಸಂಕಟ-ಸಂಕಷ್ಟಕ್ಕೆ ಈಡಾಗಿದ್ದೀರಿ. ಈಗ ನಾವು ಆ ಸವಾಲನ್ನು ಗೆದ್ದಿದ್ದೇವೆ, ಆರೋಗ್ಯದ ಪಾಠವನ್ನು ಕಲಿತಿದ್ದೇವೆ. ರಾಜ್ಯದ ಈ ಬಾರಿಯ ಶೈಕ್ಷಣಿಕ ವರ್ಷ ಇಂತಹ ಬದಲಾವಣೆಯ ತಂಗಾಳಿಯೊಂದಿಗೆ ಪ್ರಾರಂಭವಾಗಿದೆ. ಜ್ಞಾನ ದೇಗುಲಕ್ಕೆ ನಿಮಗೆಲ್ಲರಿಗೂ ಸ್ವಾಗತ. ಕೈಮುಗಿದು ಒಳಗೆ ಬನ್ನಿ…

ಶಾಲೆಯೆಂದರೆ ಬರೀ ಕಲ್ಲು ಕಟ್ಟಡವಲ್ಲ. ಅದೊಂದು ಜ್ಞಾನ ದೇಗುಲ. ಹೆತ್ತ ತಂದೆ-ತಾಯಿಗಳಂತೆ ಕಲಿಸುವ ಗುರುಗುಳು ಕೂಡಾ ವಿದ್ಯಾರ್ಥಿಗಳ ಪಾಲಿನ ದೇವರು. ಈ ಶ್ರದ್ಧೆ ಮತ್ತು ಗೌರವ ಸದಾ ನಿಮ್ಮಲ್ಲಿರಲಿ. ‘ಪ್ರತಿಯೊಬ್ಬರು ಹುಟ್ಟಿದಾಗ ವಿಶ್ವಮಾನವ, ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ’ ಎಂದು ರಾಷ್ಟ್ರಕವಿ ಕುವೆಂಪು ಎಚ್ಚರಿಸಿದ್ದರು. ಪರೀಕ್ಷೆ- ಫಲಿತಾಂಶ ಎಲ್ಲವೂ ಮುಖ್ಯವಾದರೂ ಶಿಕ್ಷಣ ಎಂದರೆ ಅಷ್ಟೇ ಅಲ್ಲ. ಶಿಕ್ಷಣ ಎನ್ನವುದು ನಮ್ಮಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಅರಿವು ಮೂಡಿಸಬೇಕು, ಸತ್ಯ ಹೇಳುವ ಧೈರ್ಯವನ್ನು,ನ್ಯಾಯದ ಮಾರ್ಗದಲ್ಲಿ ಮುನ್ನಡೆಯುವ ಶಕ್ತಿಯನ್ನು ನೀಡಬೇಕು. ಅಂತಹ ಶಿಕ್ಷಣ ನಿಮ್ಮ ಪಾಲಿಗೆ ಒದಗಿಬಂದು ನೀವೆಲ್ಲರೂ ಮಹಾಮಾನವರಾಗಿ ಎಂದು ಹಾರೈಸುತ್ತೇನೆ.

ನಾನು ಹಳ್ಳಿಯ ಸಾಮಾನ್ಯ ರೈತ ಕುಟುಂಬದಿಂದ ಬಂದ ವ್ಯಕ್ತಿ. ಈಗ ನಿಮಗೆ ಇರುವ ಕಲಿಕೆಯ ಅವಕಾಶ ನನ್ನಂತಹವನಿಗೆ ಇರಲಿಲ್ಲ. ಒಂದನೇ ತರಗತಿಯಿಂದಲೇ ಶಾಲೆಗೆ ಹೋಗಲಾಗದೆ ಮರಳ ಮೇಲೆ ಕೈಬೆರಳಗಳನ್ನೊತ್ತಿ ಅಕ್ಷರಾಭ್ಯಾಸ ಮಾಡಿ ನಾಲ್ಕನೇ ತರಗತಿಗೆ ನೇರವಾಗಿ ಸೇರಿದವನು ನಾನು. ಅಲ್ಲಿಂದ ಕಾನೂನು ವ್ಯಾಸಂಗ ಮುಗಿಸುವವರೆಗೆ ನನ್ನ ವಿದ್ಯಾರ್ಥಿ ಜೀವನ ಹೂವಿನ ಹಾದಿಯಾಗಿರಲಿಲ್ಲ. ಅಮಾಯಕರಾಗಿದ್ದ ಹೆತ್ತವರ ವಿರೋಧ, ಶೋಷಕರ ಅಡ್ಡಗಾಲು, ಹಣಕಾಸಿನ ಸಮಸ್ಯೆಗಳ ಜೊತೆ ಹೋರಾಡುತ್ತಲೇ ಬಂದವನು. ಕಠಿಣ ಶ್ರಮ ಮತ್ತು ಕಲಿಕೆಯ ಮೇಲೆ ಆಸಕ್ತಿ-ಶ್ರದ್ಧೆಗಳಿದ್ದರೆ ಸಾಮಾನ್ಯ ಕುಟುಂಬದಿಂದ ಬಂದ ಒಬ್ಬ ಬಾಲಕ ಕೂಡಾ ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿಯೂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ. ಇದೇ ರೀತಿ ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಿಗೇರಬೇಕೆಂದು ನನ್ನ ಆಸೆ.

ಇದೇ ಉದ್ದೇಶದಿಂದ ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ವಿದ್ಯಾಸಿರಿ,ವಿದ್ಯಾರ್ಥಿ ವೇತನ ಶೂ ಮತ್ತು ಸಾಕ್ಸ್ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಇವುಗಳಿಗೆ ಎದುರಾಗಿರುವ ಸಣ್ಣಪುಟ್ಟ ಅಡ್ಡಿ-ಆತಂಕಗಳನ್ನು ನಿವಾರಿಸಿ ಪುನರ್ ಚಾಲನೆ ನೀಡುವೆ.

ನೀವು ಪಡೆಯುವ ಶಿಕ್ಷಣ ನಿಮ್ಮನ್ನು ತಂದೆ-ತಾಯಿ ಹೆಮ್ಮೆ ಪಡುವಂತಹ ಮಕ್ಕಳನ್ನಾಗಿ ಮತ್ತು ಸಮಾಜ ಪ್ರೀತಿಸುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲಿ. ಮುಂದಿನ ಜನಾಂಗವಾಗಿರುವ ನಿಮ್ಮಿಂದ ರಾಜ್ಯದ ಸರ್ವಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ. ಪಠ್ಯಪುಸ್ತಕಗಳಿಗಷ್ಟೇ ನಿಮ್ಮ ಓದನ್ನು ಸೀಮಿತಗೊಳಿಸಬೇಡಿ.

ನಿಮಗೆಲ್ಲರಿಗೂ ಹೊಸ ಶೈಕ್ಷಣಿಕ ವರ್ಷಕ್ಕೆ ಮತ್ತೊಮ್ಮೆ ಸ್ವಾಗತ ಮತ್ತು ಶುಭಾಶಯಗಳು.

ನಿಮ್ಮೆಲ್ಲರ ಪ್ರೀತಿಯ ಮುಖ್ಯಮಂತ್ರಿ

ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...