Homeಕರ್ನಾಟಕವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; 'ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ': ರಾಜ್ಯದ ಮಕ್ಕಳಿಗೆ ಸಿಎಂ...

ವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; ‘ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ’: ರಾಜ್ಯದ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಕಳೆದ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರವು ರೋಹಿತ್‌ ಚಕ್ರತೀರ್ಥ ಅವರ ಸಮಿತಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು, ಸಾಕಷ್ಟು ವಿವಾದಕ್ಕೀಡಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕದಲ್ಲಿನ ವಿವಾದಿತ ಪಾಠಗಳನ್ನು ಕೈಬಿಡಲು ದೃಢ ನಿರ್ಧಾರ ಮಾಡಿದ್ದು, ಪರಿಷ್ಕರಣೆಗಾಗಿ ತಜ್ಞರ ಸಮಿತಿಯನ್ನು ನೇಮಿಸಲೂ ತೀರ್ಮಾನಿಸಿದೆ.

ರೋಹಿತ್ ಚಕ್ರತೀರ್ಥ ಎನ್ನುವವರ ಮುಂದಾಳತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ಪಠ್ಯದಲ್ಲಿ ಅನೇಕ ಮುಖ್ಯವಾದ ವಿಚಾರಗಳನ್ನು ಕೈ ಬಿಟ್ಟು ಅನಗತ್ಯ ವಿಚಾರಗಳನ್ನು ಸೇರಿಸಲಾಗಿದೆ ಎಂದು ನಾಡಿನ ಸಾಹಿತಿಗಳು, ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ”ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳಲ್ಲಿ ತಂದಿರುವ ಬದಲಾವಣೆಗಳನ್ನು ಮರುಪರಿಶೀಲಿಸಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು” ಎಂದು ಭರವಸೆ ನೀಡಿತ್ತು. ಅದರಂತೆ ಕ್ರಮವಹಿಸಲು ಸರ್ಕಾರ ಮುಂದಾಗಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ನಧು ಬಂಗಾರಪ್ಪ ಮಾತನಾಡಿದ್ದು, ”ಪಠ್ಯಪುಸ್ತಕಗಳಲ್ಲಿ ವಿವಾದಿತ ಪಾಠಗಳನ್ನು ಕೈಬಿಡುವುದು ನಿಶ್ಚಿತ. ಅದಕ್ಕಾಗಿ ಶೀಘ್ರ ಪರಿಷ್ಕರಣಾ ಸಮಿತಿ ರಚಿಸಲಾಗುವುದು. ಮುಖ್ಯಮಂತ್ರಿ ಹಾಗೂ ತಜ್ಞರ ಜತೆ ಚರ್ಚಿಸಿದ ನಂತರ ಸಮಿತಿಯ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.

”ಸಮಿತಿಗೆ ವರದಿ ನೀಡಲು ಎರಡು ತಿಂಗಳ ಗಡುವು ನೀಡಲಾಗುವುದು. ಪಠ್ಯದಲ್ಲಿ ಕೆಲವು ಪಾಠಗಳಷ್ಟೆ ವಿವಾದಕ್ಕೆ ಒಳಗಾಗಿವೆ. ಅವುಗಳನ್ನು ಬಿಟ್ಟು ಉಳಿದ ಪಾಠಗಳನ್ನು ಬೋಧನೆ ಮಾಡಲಾಗುತ್ತದೆ. ಪೋಷಕರು, ಮಕ್ಕಳು ಅತಂಕ ಪಡುವ ಅಗತ್ಯವಿಲ್ಲ. ಈ ಕುರಿತು ಎಲ್ಲ ಶಾಲೆಗಳಿಗೂ ಸ್ಪಷ್ಟ ಸೂಚನೆ ನೀಡಲಾಗುತ್ತದೆ. ಸಮಿತಿಯ ವರದಿಯ ನಂತರ ಇದೇ ಪಠ್ಯಕ್ರಮಕ್ಕೆ ಹೊಸ ಪಾಠಗಳನ್ನು ಸೇರಿಸಲಾಗುವುದು” ಎಂದು ಮಾಹಿತಿ ನೀಡಿದರು.

ಈ ಬಗ್ಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮಾತನಾಡಿ, ”ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕಗಳಲ್ಲಿ ಆಗಿರುವ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ” ಎಂದಿದ್ದಾರೆ.

”ಇತಿಹಾಸ ಪುರುಷರನ್ನೇ ಅವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ಆ ತಪ್ಪು ತಿದ್ದಬೇಕಲ್ಲವೇ? ನಾವು ಚುನಾವಣೆಗೂ ಮುಂಚಿನಿಂದಲೇ ಅದನ್ನು ಹೇಳುತ್ತಿದ್ದೇವೆ. ಈಗ ಅದನ್ನು ಜಾರಿಗೊಳಿಸಲಿದ್ದೇವೆ. ವಾಸ್ತವವನ್ನು ಪಠ್ಯದಲ್ಲಿ ಸೇರಿಸಲಿದ್ದೇವೆ. ಸತ್ಯವಲ್ಲದ್ದನ್ನು ತೆಗೆದು ಹಾಕುತ್ತೇವೆ” ಎಂದು ಹೇಳಿದರು.

ಇನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳು ಇಂದು ಆರಂಭವಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಸ್ವಾಗತ ಕೋರಿ ಪತ್ರವೊಂದನ್ನು ಬರೆದಿದ್ದಾರೆ.

ನನ್ನ ಪ್ರೀತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರೇ,

ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ ಆನಂದದಿಂದ ಕಳೆದ ನಿಮ್ಮನ್ನು ಶಾಲೆಗಳು ಕೈಬೀಸಿ ಕರೆಯುತ್ತಿವೆ. ಕಳೆದ ಎರಡು -ಮೂರು ವರ್ಷಗಳಲ್ಲಿ ಕೊರೊನಾ ವೈರಾಣುವಿನಿಂದಾಗಿ ನೀವೆಲ್ಲ ವಿದ್ಯಾರ್ಥಿ ಜೀವನವನ್ನು ಸಂಪೂರ್ಣ ಅನುಭವಿಸಲಾಗದೆ ಅನೇಕ ಬಗೆಯ ಸಂಕಟ-ಸಂಕಷ್ಟಕ್ಕೆ ಈಡಾಗಿದ್ದೀರಿ. ಈಗ ನಾವು ಆ ಸವಾಲನ್ನು ಗೆದ್ದಿದ್ದೇವೆ, ಆರೋಗ್ಯದ ಪಾಠವನ್ನು ಕಲಿತಿದ್ದೇವೆ. ರಾಜ್ಯದ ಈ ಬಾರಿಯ ಶೈಕ್ಷಣಿಕ ವರ್ಷ ಇಂತಹ ಬದಲಾವಣೆಯ ತಂಗಾಳಿಯೊಂದಿಗೆ ಪ್ರಾರಂಭವಾಗಿದೆ. ಜ್ಞಾನ ದೇಗುಲಕ್ಕೆ ನಿಮಗೆಲ್ಲರಿಗೂ ಸ್ವಾಗತ. ಕೈಮುಗಿದು ಒಳಗೆ ಬನ್ನಿ…

ಶಾಲೆಯೆಂದರೆ ಬರೀ ಕಲ್ಲು ಕಟ್ಟಡವಲ್ಲ. ಅದೊಂದು ಜ್ಞಾನ ದೇಗುಲ. ಹೆತ್ತ ತಂದೆ-ತಾಯಿಗಳಂತೆ ಕಲಿಸುವ ಗುರುಗುಳು ಕೂಡಾ ವಿದ್ಯಾರ್ಥಿಗಳ ಪಾಲಿನ ದೇವರು. ಈ ಶ್ರದ್ಧೆ ಮತ್ತು ಗೌರವ ಸದಾ ನಿಮ್ಮಲ್ಲಿರಲಿ. ‘ಪ್ರತಿಯೊಬ್ಬರು ಹುಟ್ಟಿದಾಗ ವಿಶ್ವಮಾನವ, ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ’ ಎಂದು ರಾಷ್ಟ್ರಕವಿ ಕುವೆಂಪು ಎಚ್ಚರಿಸಿದ್ದರು. ಪರೀಕ್ಷೆ- ಫಲಿತಾಂಶ ಎಲ್ಲವೂ ಮುಖ್ಯವಾದರೂ ಶಿಕ್ಷಣ ಎಂದರೆ ಅಷ್ಟೇ ಅಲ್ಲ. ಶಿಕ್ಷಣ ಎನ್ನವುದು ನಮ್ಮಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಅರಿವು ಮೂಡಿಸಬೇಕು, ಸತ್ಯ ಹೇಳುವ ಧೈರ್ಯವನ್ನು,ನ್ಯಾಯದ ಮಾರ್ಗದಲ್ಲಿ ಮುನ್ನಡೆಯುವ ಶಕ್ತಿಯನ್ನು ನೀಡಬೇಕು. ಅಂತಹ ಶಿಕ್ಷಣ ನಿಮ್ಮ ಪಾಲಿಗೆ ಒದಗಿಬಂದು ನೀವೆಲ್ಲರೂ ಮಹಾಮಾನವರಾಗಿ ಎಂದು ಹಾರೈಸುತ್ತೇನೆ.

ನಾನು ಹಳ್ಳಿಯ ಸಾಮಾನ್ಯ ರೈತ ಕುಟುಂಬದಿಂದ ಬಂದ ವ್ಯಕ್ತಿ. ಈಗ ನಿಮಗೆ ಇರುವ ಕಲಿಕೆಯ ಅವಕಾಶ ನನ್ನಂತಹವನಿಗೆ ಇರಲಿಲ್ಲ. ಒಂದನೇ ತರಗತಿಯಿಂದಲೇ ಶಾಲೆಗೆ ಹೋಗಲಾಗದೆ ಮರಳ ಮೇಲೆ ಕೈಬೆರಳಗಳನ್ನೊತ್ತಿ ಅಕ್ಷರಾಭ್ಯಾಸ ಮಾಡಿ ನಾಲ್ಕನೇ ತರಗತಿಗೆ ನೇರವಾಗಿ ಸೇರಿದವನು ನಾನು. ಅಲ್ಲಿಂದ ಕಾನೂನು ವ್ಯಾಸಂಗ ಮುಗಿಸುವವರೆಗೆ ನನ್ನ ವಿದ್ಯಾರ್ಥಿ ಜೀವನ ಹೂವಿನ ಹಾದಿಯಾಗಿರಲಿಲ್ಲ. ಅಮಾಯಕರಾಗಿದ್ದ ಹೆತ್ತವರ ವಿರೋಧ, ಶೋಷಕರ ಅಡ್ಡಗಾಲು, ಹಣಕಾಸಿನ ಸಮಸ್ಯೆಗಳ ಜೊತೆ ಹೋರಾಡುತ್ತಲೇ ಬಂದವನು. ಕಠಿಣ ಶ್ರಮ ಮತ್ತು ಕಲಿಕೆಯ ಮೇಲೆ ಆಸಕ್ತಿ-ಶ್ರದ್ಧೆಗಳಿದ್ದರೆ ಸಾಮಾನ್ಯ ಕುಟುಂಬದಿಂದ ಬಂದ ಒಬ್ಬ ಬಾಲಕ ಕೂಡಾ ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿಯೂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ. ಇದೇ ರೀತಿ ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಿಗೇರಬೇಕೆಂದು ನನ್ನ ಆಸೆ.

ಇದೇ ಉದ್ದೇಶದಿಂದ ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ವಿದ್ಯಾಸಿರಿ,ವಿದ್ಯಾರ್ಥಿ ವೇತನ ಶೂ ಮತ್ತು ಸಾಕ್ಸ್ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಇವುಗಳಿಗೆ ಎದುರಾಗಿರುವ ಸಣ್ಣಪುಟ್ಟ ಅಡ್ಡಿ-ಆತಂಕಗಳನ್ನು ನಿವಾರಿಸಿ ಪುನರ್ ಚಾಲನೆ ನೀಡುವೆ.

ನೀವು ಪಡೆಯುವ ಶಿಕ್ಷಣ ನಿಮ್ಮನ್ನು ತಂದೆ-ತಾಯಿ ಹೆಮ್ಮೆ ಪಡುವಂತಹ ಮಕ್ಕಳನ್ನಾಗಿ ಮತ್ತು ಸಮಾಜ ಪ್ರೀತಿಸುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲಿ. ಮುಂದಿನ ಜನಾಂಗವಾಗಿರುವ ನಿಮ್ಮಿಂದ ರಾಜ್ಯದ ಸರ್ವಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ. ಪಠ್ಯಪುಸ್ತಕಗಳಿಗಷ್ಟೇ ನಿಮ್ಮ ಓದನ್ನು ಸೀಮಿತಗೊಳಿಸಬೇಡಿ.

ನಿಮಗೆಲ್ಲರಿಗೂ ಹೊಸ ಶೈಕ್ಷಣಿಕ ವರ್ಷಕ್ಕೆ ಮತ್ತೊಮ್ಮೆ ಸ್ವಾಗತ ಮತ್ತು ಶುಭಾಶಯಗಳು.

ನಿಮ್ಮೆಲ್ಲರ ಪ್ರೀತಿಯ ಮುಖ್ಯಮಂತ್ರಿ

ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...