Homeಕರ್ನಾಟಕಗುಬ್ಬಿ: ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿ ಅಸ್ಪೃಶ್ಯತೆ ಆಚರಣೆ

ಗುಬ್ಬಿ: ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ದೇವಸ್ಥಾನಕ್ಕೆ ಬಂದ ದಲಿತ ಕುಟುಂಬಕ್ಕೆ ಪೂಜೆ ನಿರಾಕರಿಸಿ, ದೇವಸ್ಥಾನದಿಂದ ಹೊರಕ್ಕೆ ಹೋಗುವಂತೆ ಒತ್ತಾಯಿಸಿ ಅಸ್ಪೃಶ್ಯತೆ ಆಚರಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಪ್ರಕರಣದ ಬಗ್ಗೆ ಈ ವರೆಗೂ ಯಾವುದೆ ಬಂಧನ ನಡೆದಿಲ್ಲ. ಘಟನೆಯ ವಿಡಿಯೊ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಘಟನೆಯು ಗುಬ್ಬಿಯ ನಿಟ್ಟೂರು ಗ್ರಾಮದ ಮುಳಕಟ್ಟಮ್ಮ ದೇವಾಲಯದಲ್ಲಿ ನಡೆದಿದೆ. ದೇವಾಲಯಕ್ಕೆ ತೆರಳಿದ್ದ ದಲಿತ ಕುಟುಂಬಕ್ಕೆ ಅರ್ಚಕ ಶ್ರೀಧರ್ ಎಂಬುವವರು, “ದೇವಾಲಯದ ಒಳಗಡೆ ಯಾಕೆ ಬಂದಿದ್ದೀರಿ, ಹೊರಗಡೆಯೇ ನಿಲ್ಲಿ. ನಿಮಗೆ ಪೂಜೆ ತಾನೇ ಮಾಡುತ್ತೇನೆ. ಆದರೆ ನೀವು ದೇವಸ್ಥಾನದ ಹೊರಗಡೆ ಹೋಗಿ” ಎಂದು ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ನಂತರ ದಲಿತ ಕುಟುಂಬದೊಂದಿಗೆ ಮಾತಿನ ಚಕಮಕಿ ನಡೆಸಿದ ಅರ್ಚಕ ಪೂಜೆ ಮಾಡದೆ ನಿರಾಕರಿಸಿ ಪೂಜೆ ಸಾಮಾನು ವಾಪಸ್ಸು ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಇದರ ನಂತರ ದೇವಾಲಯದ ಕಮಿಟಿ ಮತ್ತು ದಲಿತರ ನಡುವೆ ವಾದ-ವಿವಾದ ಕೂಡಾ ನಡೆದಿದೆ ಎಂದು ವರದಿಯಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಗುಬ್ಬಿ ಸರ್ಕಲ್ ಇನ್ಸ್‌‌ಪೆಕ್ಟರ್‌‌ ಎಫ್‌.ಕೆ.ನದಾಫ್‌‌,“ಅಲ್ಲಿ ಮೊದಲಿನಿಂದಲೂ ದಲಿತರು ಪೂಜೆ ಮಾಡುತ್ತಲೆ ಬಂದಿದ್ದಾರೆ. ‘ಟ್ರಸ್ಟ್‌‌ನವರನ್ನು ಕೇಳಬೇಕು, ಹೊರಗಡೆ ಹೋಗಿ’ ಎಂದು ಅರ್ಚಕ ಹೇಳಿದ್ದಾನೆ. ಅವನನ್ನು ಕರೆಸಿ ಮಾತನಾಡಿದ್ದೇವೆ. ಇದೀಗ ಎಲ್ಲರಿಗೂ ಪೂಜೆಗೆ ಅವಕಾಶವಿದೆ ಎಂಬ ಬೋರ್ಡ್‌ ಹಾಕಿದ್ದು, ಎಲ್ಲರೂ ಪೂಜೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

ಪ್ರಕರಣ ದಾಖಲಾಗಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ಎಫ್‌ಐಆರ್‌ ಏನೂ ಆಗಿಲ್ಲ. ಪ್ರಕರಣ ದಾಖಲಿಸುವುದು ಬೇಡ ಎಂದು ದಲಿತ ಕುಟುಂಬ ಕೇಳಿಕೊಂಡಿದೆ. ಸ್ಥಳೀಯರೇ ಆಗಿರುವುದರಿಂದ ಸೌಹಾರ್ದಯುತವಾಗಿ ಪ್ರಕರಣ ಮುಗಿಸುವಂತೆ ಮತ್ತು ಪೂಜೆಗೆ ಅವಕಾಶ ಮಾಡಿಕೊಡುವಂತೆ ಕೇಳಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Kaanuva devaru galada budda, Basava, Ambedkar ravarannu poojisade kanada devaru galige ee jaativyavaste yalli balavantavagi poojisalu hogo ee dalitarige buddi illa. Evaru este gudigalige hogi pooje madidaru evaru Hindugalagalu eedeshadalli sadyavilla, evarugalu modalu aatma sakshi mattu swabhiman belasikollali

  2. ಎಲ್ಲರಿಗೂ ಪ್ರವೇಶ ವಿದೆ ಎಂಬ ಬೋರ್ಡ್ ಹಾಕಲು ೨೦೧೪ ರಲ್ಲೇ ಆದೇಶವಾಗಿದೆ. ಕೋಲಾರದ ನಮ್ಮ ತಂಡ ಪದೇಪದೇ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಆದೇಶ ಹೊರಡಿಸಿದ್ದರು. ನಮ್ಮ ಕೋಲಾರ ಮಾತ್ರವಲ್ಲದೆ ಅಲ್ಲಲ್ಲಿ ಬೋರ್ಡ್ ಹಾಕಿದ್ದಾರೆ. ಎಲ್ಲಾ ಕಡೆ ಹಾಕಬೇಕೆಂದು ಒತ್ತಾಯಿಸಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...