Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...