Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...