Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...