Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...