Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...