Homeಕರ್ನಾಟಕಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ - ಡಾ.ಜಿ.ಪರಮೇಶ್ವರ್

ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ.

- Advertisement -
- Advertisement -

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಚುನಾವಣೆಯ ಸೋಲಿನ ಕುರಿತು ಸಿದ್ದರಾಮಯ್ಯ ಅವರು ಲೋಕಾಭಿರಾಮವಾಗಿ ಮಾತನಾಡಿರುವುದನ್ನೇ ರಾಜ್ಯದ ರಾಜಕೀಯ ಚರ್ಚೆಯಂತೆ ಬಿಂಬಿಸಲು ಹೊರಟಿರುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬೂತ್ ನಂಬರ್ 123ರಲ್ಲಿ ಮತದ ಹಕ್ಕು ಚಾಲಯಿಸಿದ ಪರಮೇಶ್ವರ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಅವರು ಏನ್ರಯ್ಯ ನನ್ನನ್ನು ಸೋಲಿಸಿದ್ರಿ ಎಂದು ಲೋಕಾಭಿರಾಮವಾಗಿ ಹೇಳಿದ್ದಾರೆ. ಅದನ್ನೇ ಪ್ರಮುಖ ಸುದ್ದಿಯಂತೆ ಚರ್ಚಿಸುವುದು ಒಳ್ಳೆಯದಲ್ಲ ಎಂದರು.

ರಾಜ್ಯ ಮಟ್ಟದಲ್ಲಿ ನಮ್ಮಂಥವರು ರಾಜಕೀಯದಲ್ಲಿ ಒಂದು ಹಂತಕ್ಕೆ ತಲುಪಿದ್ದೇವೆ. ನಮ್ಮನ್ನು ಪ್ರತಿಯೊಬ್ಬ ಜನರು ಕೂಡ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ನಾವು ಮಾತನಾಡುವಾಗ ಸಂಯಮದಿಂದ ಇರಬೇಕು. ಅದು ಮನರಂಜನೆ ಆಗಬಾರದು. ಸೋಲು-ಗೆಲುವು ಸಾಮಾನ್ಯ. ಜನರ ತೀರ್ಮಾನಕ್ಕೆ ಪ್ರತಿಯೊಬ್ಬರೂ ಬದ್ದರಾಗಿರಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ. ಅದು ಮತದಾರರ ತೀರ್ಮಾನವಾಗಿರುತ್ತದೆ. ನಾನು ಕೂಡ ಚುನಾವಣೆಯಲ್ಲಿ ಸೋತಿದ್ದೇನೆ. ಮತದಾರರ ತೀರ್ಮಾನ ಅದು. ಅದನ್ನು ಗೌರವಿಸಬೇಕು. ನಾನು ಈ ಹಿಂದೆಯೇ ಹೇಳಿದ್ದೇನೆ. ಮತದಾರರ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ತಿಳಿಸಿದರು.

ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಕೆ.ಎನ್.ರಾಜಣ್ಣ ಸ್ನೇಹಿತರು. ಶ್ರೀನಿವಾಸ್ ಆಗಾಗ ರಾಜಣ್ಣ ಅವರ ಮನೆಗೆ ಬಂದು ಹೋಗುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅವರ ಪಕ್ಷಕ್ಕೆ ಬರುವ ಯಾವುದೇ ಚರ್ಚೆ ಅಧಿಕೃತವಾಗಿ ನಡೆದಿಲ್ಲ. ನಮ್ಮ ಮನೆಗೂ ಒಂದೆರಡು ಬಾರಿ ಬಂದು ಹೋಗಿದ್ದಾರೆ. ಹಾಗೆಂದು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ತೀರ್ಮಾನಕ್ಕೆ ಬರುವುದಲ್ಲ. ನಮ್ಮ ಜಿಲ್ಲೆಯ ರಾಜಕೀಯ ಪರಿಸ್ಥಿತಿಯನ್ನು ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳಲಾಗುವುದು. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುವುದನ್ನು ಕುಮಾರಸ್ವಾಮಿಯವರೇ ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ವಿಲೀನವಾಗುವುದು ಬಿಡುವುದು ಅವರ ಪಕ್ಷದ ತೀರ್ಮಾನ. ಬಿಜೆಪಿಗೆ ವಿಲೀನವಾಗುವ ಬಗ್ಗೆ ಊಹಾಪೋಹ ಎದ್ದಿವೆ. ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿದೆ. ನಾನು ಸಹ ಸುದ್ದಿಯನ್ನು ನೋಡಿದ್ದೇನೆ. ಏನೇ ತೀರ್ಮಾನ ಮಾಡಿದರೂ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ರೈತರು ಭೂಮಿ ಕಳೆದುಕೊಳ್ಳುತ್ತಾರೆ. ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ನೀಡಿದಷ್ಟೇ ಪರಿಹಾವನ್ನು ಕೊರಟಗೆರೆ ರೈತರಿಗೂ ನೀಡಬೇಕು. ನಾನು ಹಿಂದಿನಿಂದಲೂ ಇದನ್ನೇ ಹೇಳುತ್ತಿದ್ದೇನೆ. ರೈತರಿಗೆ ನ್ಯಾಯ ಸಿಗಬೇಕು. ಸೂಕ್ತ ಪರಿಹಾರ ದೊರೆಯಬೇಕು. ಈ ಯೋಜನೆಯಿಂದ ಹಲವು ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ. ಹಾಗಾಗಿ ಭೂಮಿ ಮತ್ತು ಮನೆಗಳನ್ನು ಕಳೆದುಕೊಳ್ಳುವ ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕೇವಲ ಸ್ಥಳಾಂತರ ಮಾಡಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸುವುದು ಬೇಡ ಎಂದು ಹೇಳಿದರು.

ತುಮಕೂರು ಜಿಲ್ಲೆಯ ಪಾವಗಡ, ತುಮಕೂರು ಗ್ರಾಮಾಂತರ ಸೇರಿದಂತೆ ಐದು ತಾಲೂಕುಗಳಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಮತದಾನ ನಡೆಯುತ್ತಿದೆ. ಸಿದ್ದಗಂಗಾ ಮಠಾಧೀಶ ಸಿದ್ದಲಿಂಗ ಸ್ವಾಮೀಜಿ 139 ಮತಕೇಂದ್ರದಲ್ಲಿ ಮತದಾನ ಮಾಡಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ಅಭ್ಯರ್ಥಿಗಳು ಮತದಾರರಿಗೆ 1 ರೂಪಾಯಿ ಹಣ, ಸೀರೆ, ಗೋಡೆಗಡಿಯಾರ ಮೊದಲಾದ ವಸ್ತುಗಳನ್ನು ಮತದಾರರಿಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಈಗ ಯಾವುದೇ ಚುನಾವಣೆ ಇಲ್ಲ, ಜೆಡಿಎಸ್​ ಜೊತೆಗೆ ಮೈತ್ರಿ ಅವಶ್ಯಕತೆ ಇಲ್ಲ; ಬಿ.ಸಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...