Homeಕರ್ನಾಟಕಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ - ಡಾ.ಜಿ.ಪರಮೇಶ್ವರ್

ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ.

- Advertisement -
- Advertisement -

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಚುನಾವಣೆಯ ಸೋಲಿನ ಕುರಿತು ಸಿದ್ದರಾಮಯ್ಯ ಅವರು ಲೋಕಾಭಿರಾಮವಾಗಿ ಮಾತನಾಡಿರುವುದನ್ನೇ ರಾಜ್ಯದ ರಾಜಕೀಯ ಚರ್ಚೆಯಂತೆ ಬಿಂಬಿಸಲು ಹೊರಟಿರುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬೂತ್ ನಂಬರ್ 123ರಲ್ಲಿ ಮತದ ಹಕ್ಕು ಚಾಲಯಿಸಿದ ಪರಮೇಶ್ವರ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಅವರು ಏನ್ರಯ್ಯ ನನ್ನನ್ನು ಸೋಲಿಸಿದ್ರಿ ಎಂದು ಲೋಕಾಭಿರಾಮವಾಗಿ ಹೇಳಿದ್ದಾರೆ. ಅದನ್ನೇ ಪ್ರಮುಖ ಸುದ್ದಿಯಂತೆ ಚರ್ಚಿಸುವುದು ಒಳ್ಳೆಯದಲ್ಲ ಎಂದರು.

ರಾಜ್ಯ ಮಟ್ಟದಲ್ಲಿ ನಮ್ಮಂಥವರು ರಾಜಕೀಯದಲ್ಲಿ ಒಂದು ಹಂತಕ್ಕೆ ತಲುಪಿದ್ದೇವೆ. ನಮ್ಮನ್ನು ಪ್ರತಿಯೊಬ್ಬ ಜನರು ಕೂಡ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ನಾವು ಮಾತನಾಡುವಾಗ ಸಂಯಮದಿಂದ ಇರಬೇಕು. ಅದು ಮನರಂಜನೆ ಆಗಬಾರದು. ಸೋಲು-ಗೆಲುವು ಸಾಮಾನ್ಯ. ಜನರ ತೀರ್ಮಾನಕ್ಕೆ ಪ್ರತಿಯೊಬ್ಬರೂ ಬದ್ದರಾಗಿರಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ. ಅದು ಮತದಾರರ ತೀರ್ಮಾನವಾಗಿರುತ್ತದೆ. ನಾನು ಕೂಡ ಚುನಾವಣೆಯಲ್ಲಿ ಸೋತಿದ್ದೇನೆ. ಮತದಾರರ ತೀರ್ಮಾನ ಅದು. ಅದನ್ನು ಗೌರವಿಸಬೇಕು. ನಾನು ಈ ಹಿಂದೆಯೇ ಹೇಳಿದ್ದೇನೆ. ಮತದಾರರ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ತಿಳಿಸಿದರು.

ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಕೆ.ಎನ್.ರಾಜಣ್ಣ ಸ್ನೇಹಿತರು. ಶ್ರೀನಿವಾಸ್ ಆಗಾಗ ರಾಜಣ್ಣ ಅವರ ಮನೆಗೆ ಬಂದು ಹೋಗುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅವರ ಪಕ್ಷಕ್ಕೆ ಬರುವ ಯಾವುದೇ ಚರ್ಚೆ ಅಧಿಕೃತವಾಗಿ ನಡೆದಿಲ್ಲ. ನಮ್ಮ ಮನೆಗೂ ಒಂದೆರಡು ಬಾರಿ ಬಂದು ಹೋಗಿದ್ದಾರೆ. ಹಾಗೆಂದು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ತೀರ್ಮಾನಕ್ಕೆ ಬರುವುದಲ್ಲ. ನಮ್ಮ ಜಿಲ್ಲೆಯ ರಾಜಕೀಯ ಪರಿಸ್ಥಿತಿಯನ್ನು ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳಲಾಗುವುದು. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುವುದನ್ನು ಕುಮಾರಸ್ವಾಮಿಯವರೇ ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ವಿಲೀನವಾಗುವುದು ಬಿಡುವುದು ಅವರ ಪಕ್ಷದ ತೀರ್ಮಾನ. ಬಿಜೆಪಿಗೆ ವಿಲೀನವಾಗುವ ಬಗ್ಗೆ ಊಹಾಪೋಹ ಎದ್ದಿವೆ. ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿದೆ. ನಾನು ಸಹ ಸುದ್ದಿಯನ್ನು ನೋಡಿದ್ದೇನೆ. ಏನೇ ತೀರ್ಮಾನ ಮಾಡಿದರೂ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ರೈತರು ಭೂಮಿ ಕಳೆದುಕೊಳ್ಳುತ್ತಾರೆ. ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ನೀಡಿದಷ್ಟೇ ಪರಿಹಾವನ್ನು ಕೊರಟಗೆರೆ ರೈತರಿಗೂ ನೀಡಬೇಕು. ನಾನು ಹಿಂದಿನಿಂದಲೂ ಇದನ್ನೇ ಹೇಳುತ್ತಿದ್ದೇನೆ. ರೈತರಿಗೆ ನ್ಯಾಯ ಸಿಗಬೇಕು. ಸೂಕ್ತ ಪರಿಹಾರ ದೊರೆಯಬೇಕು. ಈ ಯೋಜನೆಯಿಂದ ಹಲವು ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ. ಹಾಗಾಗಿ ಭೂಮಿ ಮತ್ತು ಮನೆಗಳನ್ನು ಕಳೆದುಕೊಳ್ಳುವ ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕೇವಲ ಸ್ಥಳಾಂತರ ಮಾಡಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸುವುದು ಬೇಡ ಎಂದು ಹೇಳಿದರು.

ತುಮಕೂರು ಜಿಲ್ಲೆಯ ಪಾವಗಡ, ತುಮಕೂರು ಗ್ರಾಮಾಂತರ ಸೇರಿದಂತೆ ಐದು ತಾಲೂಕುಗಳಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಮತದಾನ ನಡೆಯುತ್ತಿದೆ. ಸಿದ್ದಗಂಗಾ ಮಠಾಧೀಶ ಸಿದ್ದಲಿಂಗ ಸ್ವಾಮೀಜಿ 139 ಮತಕೇಂದ್ರದಲ್ಲಿ ಮತದಾನ ಮಾಡಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ಅಭ್ಯರ್ಥಿಗಳು ಮತದಾರರಿಗೆ 1 ರೂಪಾಯಿ ಹಣ, ಸೀರೆ, ಗೋಡೆಗಡಿಯಾರ ಮೊದಲಾದ ವಸ್ತುಗಳನ್ನು ಮತದಾರರಿಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಈಗ ಯಾವುದೇ ಚುನಾವಣೆ ಇಲ್ಲ, ಜೆಡಿಎಸ್​ ಜೊತೆಗೆ ಮೈತ್ರಿ ಅವಶ್ಯಕತೆ ಇಲ್ಲ; ಬಿ.ಸಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...