Homeಕರ್ನಾಟಕಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ - ಡಾ.ಜಿ.ಪರಮೇಶ್ವರ್

ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ.

- Advertisement -
- Advertisement -

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಚುನಾವಣೆಯ ಸೋಲಿನ ಕುರಿತು ಸಿದ್ದರಾಮಯ್ಯ ಅವರು ಲೋಕಾಭಿರಾಮವಾಗಿ ಮಾತನಾಡಿರುವುದನ್ನೇ ರಾಜ್ಯದ ರಾಜಕೀಯ ಚರ್ಚೆಯಂತೆ ಬಿಂಬಿಸಲು ಹೊರಟಿರುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬೂತ್ ನಂಬರ್ 123ರಲ್ಲಿ ಮತದ ಹಕ್ಕು ಚಾಲಯಿಸಿದ ಪರಮೇಶ್ವರ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಅವರು ಏನ್ರಯ್ಯ ನನ್ನನ್ನು ಸೋಲಿಸಿದ್ರಿ ಎಂದು ಲೋಕಾಭಿರಾಮವಾಗಿ ಹೇಳಿದ್ದಾರೆ. ಅದನ್ನೇ ಪ್ರಮುಖ ಸುದ್ದಿಯಂತೆ ಚರ್ಚಿಸುವುದು ಒಳ್ಳೆಯದಲ್ಲ ಎಂದರು.

ರಾಜ್ಯ ಮಟ್ಟದಲ್ಲಿ ನಮ್ಮಂಥವರು ರಾಜಕೀಯದಲ್ಲಿ ಒಂದು ಹಂತಕ್ಕೆ ತಲುಪಿದ್ದೇವೆ. ನಮ್ಮನ್ನು ಪ್ರತಿಯೊಬ್ಬ ಜನರು ಕೂಡ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ನಾವು ಮಾತನಾಡುವಾಗ ಸಂಯಮದಿಂದ ಇರಬೇಕು. ಅದು ಮನರಂಜನೆ ಆಗಬಾರದು. ಸೋಲು-ಗೆಲುವು ಸಾಮಾನ್ಯ. ಜನರ ತೀರ್ಮಾನಕ್ಕೆ ಪ್ರತಿಯೊಬ್ಬರೂ ಬದ್ದರಾಗಿರಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ. ಅದು ಮತದಾರರ ತೀರ್ಮಾನವಾಗಿರುತ್ತದೆ. ನಾನು ಕೂಡ ಚುನಾವಣೆಯಲ್ಲಿ ಸೋತಿದ್ದೇನೆ. ಮತದಾರರ ತೀರ್ಮಾನ ಅದು. ಅದನ್ನು ಗೌರವಿಸಬೇಕು. ನಾನು ಈ ಹಿಂದೆಯೇ ಹೇಳಿದ್ದೇನೆ. ಮತದಾರರ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ತಿಳಿಸಿದರು.

ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಕೆ.ಎನ್.ರಾಜಣ್ಣ ಸ್ನೇಹಿತರು. ಶ್ರೀನಿವಾಸ್ ಆಗಾಗ ರಾಜಣ್ಣ ಅವರ ಮನೆಗೆ ಬಂದು ಹೋಗುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅವರ ಪಕ್ಷಕ್ಕೆ ಬರುವ ಯಾವುದೇ ಚರ್ಚೆ ಅಧಿಕೃತವಾಗಿ ನಡೆದಿಲ್ಲ. ನಮ್ಮ ಮನೆಗೂ ಒಂದೆರಡು ಬಾರಿ ಬಂದು ಹೋಗಿದ್ದಾರೆ. ಹಾಗೆಂದು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ತೀರ್ಮಾನಕ್ಕೆ ಬರುವುದಲ್ಲ. ನಮ್ಮ ಜಿಲ್ಲೆಯ ರಾಜಕೀಯ ಪರಿಸ್ಥಿತಿಯನ್ನು ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳಲಾಗುವುದು. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುವುದನ್ನು ಕುಮಾರಸ್ವಾಮಿಯವರೇ ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ವಿಲೀನವಾಗುವುದು ಬಿಡುವುದು ಅವರ ಪಕ್ಷದ ತೀರ್ಮಾನ. ಬಿಜೆಪಿಗೆ ವಿಲೀನವಾಗುವ ಬಗ್ಗೆ ಊಹಾಪೋಹ ಎದ್ದಿವೆ. ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿದೆ. ನಾನು ಸಹ ಸುದ್ದಿಯನ್ನು ನೋಡಿದ್ದೇನೆ. ಏನೇ ತೀರ್ಮಾನ ಮಾಡಿದರೂ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ರೈತರು ಭೂಮಿ ಕಳೆದುಕೊಳ್ಳುತ್ತಾರೆ. ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ನೀಡಿದಷ್ಟೇ ಪರಿಹಾವನ್ನು ಕೊರಟಗೆರೆ ರೈತರಿಗೂ ನೀಡಬೇಕು. ನಾನು ಹಿಂದಿನಿಂದಲೂ ಇದನ್ನೇ ಹೇಳುತ್ತಿದ್ದೇನೆ. ರೈತರಿಗೆ ನ್ಯಾಯ ಸಿಗಬೇಕು. ಸೂಕ್ತ ಪರಿಹಾರ ದೊರೆಯಬೇಕು. ಈ ಯೋಜನೆಯಿಂದ ಹಲವು ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ. ಹಾಗಾಗಿ ಭೂಮಿ ಮತ್ತು ಮನೆಗಳನ್ನು ಕಳೆದುಕೊಳ್ಳುವ ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕೇವಲ ಸ್ಥಳಾಂತರ ಮಾಡಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸುವುದು ಬೇಡ ಎಂದು ಹೇಳಿದರು.

ತುಮಕೂರು ಜಿಲ್ಲೆಯ ಪಾವಗಡ, ತುಮಕೂರು ಗ್ರಾಮಾಂತರ ಸೇರಿದಂತೆ ಐದು ತಾಲೂಕುಗಳಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಮತದಾನ ನಡೆಯುತ್ತಿದೆ. ಸಿದ್ದಗಂಗಾ ಮಠಾಧೀಶ ಸಿದ್ದಲಿಂಗ ಸ್ವಾಮೀಜಿ 139 ಮತಕೇಂದ್ರದಲ್ಲಿ ಮತದಾನ ಮಾಡಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ಅಭ್ಯರ್ಥಿಗಳು ಮತದಾರರಿಗೆ 1 ರೂಪಾಯಿ ಹಣ, ಸೀರೆ, ಗೋಡೆಗಡಿಯಾರ ಮೊದಲಾದ ವಸ್ತುಗಳನ್ನು ಮತದಾರರಿಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಈಗ ಯಾವುದೇ ಚುನಾವಣೆ ಇಲ್ಲ, ಜೆಡಿಎಸ್​ ಜೊತೆಗೆ ಮೈತ್ರಿ ಅವಶ್ಯಕತೆ ಇಲ್ಲ; ಬಿ.ಸಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...