Homeಕರ್ನಾಟಕಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ - ಡಾ.ಜಿ.ಪರಮೇಶ್ವರ್

ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ.

- Advertisement -
- Advertisement -

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಚುನಾವಣೆಯ ಸೋಲಿನ ಕುರಿತು ಸಿದ್ದರಾಮಯ್ಯ ಅವರು ಲೋಕಾಭಿರಾಮವಾಗಿ ಮಾತನಾಡಿರುವುದನ್ನೇ ರಾಜ್ಯದ ರಾಜಕೀಯ ಚರ್ಚೆಯಂತೆ ಬಿಂಬಿಸಲು ಹೊರಟಿರುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬೂತ್ ನಂಬರ್ 123ರಲ್ಲಿ ಮತದ ಹಕ್ಕು ಚಾಲಯಿಸಿದ ಪರಮೇಶ್ವರ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಅವರು ಏನ್ರಯ್ಯ ನನ್ನನ್ನು ಸೋಲಿಸಿದ್ರಿ ಎಂದು ಲೋಕಾಭಿರಾಮವಾಗಿ ಹೇಳಿದ್ದಾರೆ. ಅದನ್ನೇ ಪ್ರಮುಖ ಸುದ್ದಿಯಂತೆ ಚರ್ಚಿಸುವುದು ಒಳ್ಳೆಯದಲ್ಲ ಎಂದರು.

ರಾಜ್ಯ ಮಟ್ಟದಲ್ಲಿ ನಮ್ಮಂಥವರು ರಾಜಕೀಯದಲ್ಲಿ ಒಂದು ಹಂತಕ್ಕೆ ತಲುಪಿದ್ದೇವೆ. ನಮ್ಮನ್ನು ಪ್ರತಿಯೊಬ್ಬ ಜನರು ಕೂಡ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ನಾವು ಮಾತನಾಡುವಾಗ ಸಂಯಮದಿಂದ ಇರಬೇಕು. ಅದು ಮನರಂಜನೆ ಆಗಬಾರದು. ಸೋಲು-ಗೆಲುವು ಸಾಮಾನ್ಯ. ಜನರ ತೀರ್ಮಾನಕ್ಕೆ ಪ್ರತಿಯೊಬ್ಬರೂ ಬದ್ದರಾಗಿರಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಬ್ಬ ಮುಖಂಡರನ್ನೇ ನಂಬಿಕೊಂಡಿದ್ದು ಸೋಲಿಗೆ ಕಾರಣ ಎಂಬುದು ಸರಿಯಲ್ಲ. ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಒಬ್ಬ ಮುಖಂಡ ಗೆಲ್ಲಿಸಲು ಸಾಧ್ಯವಿಲ್ಲ. ಅದು ಮತದಾರರ ತೀರ್ಮಾನವಾಗಿರುತ್ತದೆ. ನಾನು ಕೂಡ ಚುನಾವಣೆಯಲ್ಲಿ ಸೋತಿದ್ದೇನೆ. ಮತದಾರರ ತೀರ್ಮಾನ ಅದು. ಅದನ್ನು ಗೌರವಿಸಬೇಕು. ನಾನು ಈ ಹಿಂದೆಯೇ ಹೇಳಿದ್ದೇನೆ. ಮತದಾರರ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ತಿಳಿಸಿದರು.

ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಕೆ.ಎನ್.ರಾಜಣ್ಣ ಸ್ನೇಹಿತರು. ಶ್ರೀನಿವಾಸ್ ಆಗಾಗ ರಾಜಣ್ಣ ಅವರ ಮನೆಗೆ ಬಂದು ಹೋಗುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅವರ ಪಕ್ಷಕ್ಕೆ ಬರುವ ಯಾವುದೇ ಚರ್ಚೆ ಅಧಿಕೃತವಾಗಿ ನಡೆದಿಲ್ಲ. ನಮ್ಮ ಮನೆಗೂ ಒಂದೆರಡು ಬಾರಿ ಬಂದು ಹೋಗಿದ್ದಾರೆ. ಹಾಗೆಂದು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ತೀರ್ಮಾನಕ್ಕೆ ಬರುವುದಲ್ಲ. ನಮ್ಮ ಜಿಲ್ಲೆಯ ರಾಜಕೀಯ ಪರಿಸ್ಥಿತಿಯನ್ನು ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳಲಾಗುವುದು. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುವುದನ್ನು ಕುಮಾರಸ್ವಾಮಿಯವರೇ ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ವಿಲೀನವಾಗುವುದು ಬಿಡುವುದು ಅವರ ಪಕ್ಷದ ತೀರ್ಮಾನ. ಬಿಜೆಪಿಗೆ ವಿಲೀನವಾಗುವ ಬಗ್ಗೆ ಊಹಾಪೋಹ ಎದ್ದಿವೆ. ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿದೆ. ನಾನು ಸಹ ಸುದ್ದಿಯನ್ನು ನೋಡಿದ್ದೇನೆ. ಏನೇ ತೀರ್ಮಾನ ಮಾಡಿದರೂ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ರೈತರು ಭೂಮಿ ಕಳೆದುಕೊಳ್ಳುತ್ತಾರೆ. ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ನೀಡಿದಷ್ಟೇ ಪರಿಹಾವನ್ನು ಕೊರಟಗೆರೆ ರೈತರಿಗೂ ನೀಡಬೇಕು. ನಾನು ಹಿಂದಿನಿಂದಲೂ ಇದನ್ನೇ ಹೇಳುತ್ತಿದ್ದೇನೆ. ರೈತರಿಗೆ ನ್ಯಾಯ ಸಿಗಬೇಕು. ಸೂಕ್ತ ಪರಿಹಾರ ದೊರೆಯಬೇಕು. ಈ ಯೋಜನೆಯಿಂದ ಹಲವು ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ. ಹಾಗಾಗಿ ಭೂಮಿ ಮತ್ತು ಮನೆಗಳನ್ನು ಕಳೆದುಕೊಳ್ಳುವ ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕೇವಲ ಸ್ಥಳಾಂತರ ಮಾಡಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸುವುದು ಬೇಡ ಎಂದು ಹೇಳಿದರು.

ತುಮಕೂರು ಜಿಲ್ಲೆಯ ಪಾವಗಡ, ತುಮಕೂರು ಗ್ರಾಮಾಂತರ ಸೇರಿದಂತೆ ಐದು ತಾಲೂಕುಗಳಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಮತದಾನ ನಡೆಯುತ್ತಿದೆ. ಸಿದ್ದಗಂಗಾ ಮಠಾಧೀಶ ಸಿದ್ದಲಿಂಗ ಸ್ವಾಮೀಜಿ 139 ಮತಕೇಂದ್ರದಲ್ಲಿ ಮತದಾನ ಮಾಡಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ಅಭ್ಯರ್ಥಿಗಳು ಮತದಾರರಿಗೆ 1 ರೂಪಾಯಿ ಹಣ, ಸೀರೆ, ಗೋಡೆಗಡಿಯಾರ ಮೊದಲಾದ ವಸ್ತುಗಳನ್ನು ಮತದಾರರಿಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಈಗ ಯಾವುದೇ ಚುನಾವಣೆ ಇಲ್ಲ, ಜೆಡಿಎಸ್​ ಜೊತೆಗೆ ಮೈತ್ರಿ ಅವಶ್ಯಕತೆ ಇಲ್ಲ; ಬಿ.ಸಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...