Homeಮುಖಪುಟಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ವಿಡಿಯೋ...

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ವಿಡಿಯೋ ನೋಡಿ.

- Advertisement -
- Advertisement -

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವೇ ಮಹಿಳೆಯೊಬ್ಬರ ಆಕ್ರಂದನ ಮುಗಿಲು ಮುಟ್ಟಿದೆ. ತಾನೇ ನೀರು ಹೊಯ್ದು ಬೆಳೆಸಿದ್ದ ಸಿದ್ದಮ್ಮ ಅವರಿಗೆ ಸೇರಿದ್ದ ತೆಂಗು ಮತ್ತು ಅಡಿಕೆ ಮರಗಳು ಕಣ್ಣೆದುರೇ ನೆಲಕ್ಕುರುಳಿವೆ. ಜಿಲ್ಲಾಧಿಕಾರಿ ಆದೇಶವನ್ನೇ ಧಿಕ್ಕರಿಸಿದ ತಹಶೀಲ್ದಾರ್ ಮುಂದೆ ನಿಂತು ಸಿದ್ದಮ್ಮನವರಿಗೆ ಸೇರಿದ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿಸಿಹಾಕಿದ್ದಾರೆ. ತಾನು ಸಲಹಿದ  ಫಲ ನೀಡುತ್ತಿದ್ದ ಮರಗಳು ಕಡಿದ್ದನ್ನು ನೋಡಿ ಸಿದ್ದಮ್ಮ ಮಕ್ಕಳು ಕಳೆದುಕೊಂಡಂತೆ ಅಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ಮನಕಲುಕುವಂತಿವೆ. ವಿಡಿಯೋ ನೋಡಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಕೋಡಿಕೆಂಪಮ್ಮ ದೇವಾಲಯದ ಜಾತ್ರೆ ಇತ್ತು. ಆ ಜಾತ್ರೆ ನಡೆಯುವ ಜಾಗದ ಭೂಮಿ ವಿವಾದದಲ್ಲಿತ್ತು  ಆ ಜಮೀನನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿಯ  ಲೋಪದಿಂದಾಗಿ ಸಿದ್ದಮ್ಮ ಅವರ ತೋಟವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ತಹಶೀಲ್ದಾರ್ ಕೂಡ ಅದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಮಹಿಳಾ ರೈತರೊಬ್ಬರ ತೋಟವನ್ನು ಧ್ವಂಸ ಮಾಡಲಾಗಿದೆ. ಕೋಡಿಕೆಂಪಮ್ಮ ಜಾತ್ರೆಯ ಹಿನ್ನೆಲೆಯಲ್ಲಿ ಜಾತ್ರೆ ನಡೆಯಬೇಕಿದ್ದ ಬೇರೆ ಸ್ಥಳದಲ್ಲಿ ಪರಿಶೀಲನೆ ಮಾಡುವ ಬದಲು ಸಿದ್ದಮ್ಮನವರ ತೋಟಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ.

ಇಂದು ಬೆಳಿಗ್ಗೆ ಸಿದ್ದಮ್ಮ ಅವರು ತೋಟಕ್ಕೆ ಹೋದ ಗುಬ್ಬಿ ತಹಶೀಲ್ದಾರ್ 170 ಅಡಿಕೆ ಗಿಡಗಳು ಮತ್ತು 25 ತೆಂಗಿನ ಮರಗಳನ್ನು ಕಡಿಸಿ ಹಾಕಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ. ತಹಶೀಲ್ದಾರ್ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ಅಡಿಕೆ ಮತ್ತು ತೆಂಗಿನ ಮರಗಳು ನೆಲಕ್ಕೆ ಬಿದ್ದಿರುವುದನ್ನು ನೋಡಿದ ಸಿದ್ದಮ್ಮ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಗೊಳೋ ಎಂದು ಕಣ್ಣೀರು ಕರೆಯುತ್ತಿದ್ದಾರೆ. ಗುಬ್ಬಿ ತಾಲೂಕು ತಹಶೀಲ್ದಾರ್ ಏಕಾಏಕಿ ತೋಟಕ್ಕೆ ಬಂದು ನಿರ್ದಯವಾಗಿ ಮರಗಳನ್ನು ಕಡಿಸಿರುವುದು ಆಕೆಯನ್ನು ಕೆರಳುವಂತೆ ಮಾಡಿದೆ. ಇನ್ನೊಂದೆಡೆ ತಪ್ಪು ಮಾಡಿ ತಹಶೀಲ್ದಾರ್‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ದಂಡಾಧಿಕಾರಿ ಮತ್ತು ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ. ರೈತರ ಬೆಳೆದ ಬೆಳೆಯನ್ನು ಅಧಿಕಾರಿಯೇ ಮುಂದೆ ನಿಂತು ಕತ್ತರಿಸಿಹಾಕಲು ಅನುವು ಮಾಡಿಕೊಟ್ಟಿದ್ದಾರೆ. ಆ ತಹಶೀಲ್ದಾರ್ ಗೆ ಮರಗಳನ್ನು ಕಡಿಸುವ ಮನಸ್ಸು ಹೇಗೆ ಬಂತು ಎಂದು ರೈತ  ಕಿಡಿಕಾರಿದ್ದಾರೆ. ಆದರೆ ಇದುವರೆಗೂ ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...