Homeಮುಖಪುಟಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ವಿಡಿಯೋ...

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ವಿಡಿಯೋ ನೋಡಿ.

- Advertisement -
- Advertisement -

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವೇ ಮಹಿಳೆಯೊಬ್ಬರ ಆಕ್ರಂದನ ಮುಗಿಲು ಮುಟ್ಟಿದೆ. ತಾನೇ ನೀರು ಹೊಯ್ದು ಬೆಳೆಸಿದ್ದ ಸಿದ್ದಮ್ಮ ಅವರಿಗೆ ಸೇರಿದ್ದ ತೆಂಗು ಮತ್ತು ಅಡಿಕೆ ಮರಗಳು ಕಣ್ಣೆದುರೇ ನೆಲಕ್ಕುರುಳಿವೆ. ಜಿಲ್ಲಾಧಿಕಾರಿ ಆದೇಶವನ್ನೇ ಧಿಕ್ಕರಿಸಿದ ತಹಶೀಲ್ದಾರ್ ಮುಂದೆ ನಿಂತು ಸಿದ್ದಮ್ಮನವರಿಗೆ ಸೇರಿದ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿಸಿಹಾಕಿದ್ದಾರೆ. ತಾನು ಸಲಹಿದ  ಫಲ ನೀಡುತ್ತಿದ್ದ ಮರಗಳು ಕಡಿದ್ದನ್ನು ನೋಡಿ ಸಿದ್ದಮ್ಮ ಮಕ್ಕಳು ಕಳೆದುಕೊಂಡಂತೆ ಅಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ಮನಕಲುಕುವಂತಿವೆ. ವಿಡಿಯೋ ನೋಡಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಕೋಡಿಕೆಂಪಮ್ಮ ದೇವಾಲಯದ ಜಾತ್ರೆ ಇತ್ತು. ಆ ಜಾತ್ರೆ ನಡೆಯುವ ಜಾಗದ ಭೂಮಿ ವಿವಾದದಲ್ಲಿತ್ತು  ಆ ಜಮೀನನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿಯ  ಲೋಪದಿಂದಾಗಿ ಸಿದ್ದಮ್ಮ ಅವರ ತೋಟವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ತಹಶೀಲ್ದಾರ್ ಕೂಡ ಅದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಮಹಿಳಾ ರೈತರೊಬ್ಬರ ತೋಟವನ್ನು ಧ್ವಂಸ ಮಾಡಲಾಗಿದೆ. ಕೋಡಿಕೆಂಪಮ್ಮ ಜಾತ್ರೆಯ ಹಿನ್ನೆಲೆಯಲ್ಲಿ ಜಾತ್ರೆ ನಡೆಯಬೇಕಿದ್ದ ಬೇರೆ ಸ್ಥಳದಲ್ಲಿ ಪರಿಶೀಲನೆ ಮಾಡುವ ಬದಲು ಸಿದ್ದಮ್ಮನವರ ತೋಟಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ.

ಇಂದು ಬೆಳಿಗ್ಗೆ ಸಿದ್ದಮ್ಮ ಅವರು ತೋಟಕ್ಕೆ ಹೋದ ಗುಬ್ಬಿ ತಹಶೀಲ್ದಾರ್ 170 ಅಡಿಕೆ ಗಿಡಗಳು ಮತ್ತು 25 ತೆಂಗಿನ ಮರಗಳನ್ನು ಕಡಿಸಿ ಹಾಕಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ. ತಹಶೀಲ್ದಾರ್ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ಅಡಿಕೆ ಮತ್ತು ತೆಂಗಿನ ಮರಗಳು ನೆಲಕ್ಕೆ ಬಿದ್ದಿರುವುದನ್ನು ನೋಡಿದ ಸಿದ್ದಮ್ಮ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಗೊಳೋ ಎಂದು ಕಣ್ಣೀರು ಕರೆಯುತ್ತಿದ್ದಾರೆ. ಗುಬ್ಬಿ ತಾಲೂಕು ತಹಶೀಲ್ದಾರ್ ಏಕಾಏಕಿ ತೋಟಕ್ಕೆ ಬಂದು ನಿರ್ದಯವಾಗಿ ಮರಗಳನ್ನು ಕಡಿಸಿರುವುದು ಆಕೆಯನ್ನು ಕೆರಳುವಂತೆ ಮಾಡಿದೆ. ಇನ್ನೊಂದೆಡೆ ತಪ್ಪು ಮಾಡಿ ತಹಶೀಲ್ದಾರ್‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ದಂಡಾಧಿಕಾರಿ ಮತ್ತು ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ. ರೈತರ ಬೆಳೆದ ಬೆಳೆಯನ್ನು ಅಧಿಕಾರಿಯೇ ಮುಂದೆ ನಿಂತು ಕತ್ತರಿಸಿಹಾಕಲು ಅನುವು ಮಾಡಿಕೊಟ್ಟಿದ್ದಾರೆ. ಆ ತಹಶೀಲ್ದಾರ್ ಗೆ ಮರಗಳನ್ನು ಕಡಿಸುವ ಮನಸ್ಸು ಹೇಗೆ ಬಂತು ಎಂದು ರೈತ  ಕಿಡಿಕಾರಿದ್ದಾರೆ. ಆದರೆ ಇದುವರೆಗೂ ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...