Homeಕರ್ನಾಟಕಗುಬ್ಬಿ: ಕೆರೆಕೋಡಿಯಲ್ಲಿ ಕೊಚ್ಚಿ ಹೋದವರ ಮೃತದೇಹ ಎರಡು ದಿನಗಳ ನಂತರ ಪತ್ತೆ

ಗುಬ್ಬಿ: ಕೆರೆಕೋಡಿಯಲ್ಲಿ ಕೊಚ್ಚಿ ಹೋದವರ ಮೃತದೇಹ ಎರಡು ದಿನಗಳ ನಂತರ ಪತ್ತೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಲ್ಲೂರು ಕೆರೆ ಕೋಡಿಯಲ್ಲಿ ಕೈಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿದ್ದ ಇಬ್ಬರು ವ್ಯಕ್ತಿಗಳ ಮೃತದೇಹಗಳು ಎರಡು ದಿನಗಳ ನಂತರ ಪತ್ತೆಯಾಗಿವೆ.

ಭಾರೀ ಮಳೆಯಿಂದಾಗಿ ತಿಂಗಳ ಹಿಂದೆಯೇ ಕೆರೆ ಕೋಡಿ ಬಿದ್ದಿತ್ತು. ಆದರೆ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆರೆ ಕೋಡಿಗಳಲ್ಲಿ ನೀರಿನ ರಭಸವೂ ಹೆಚ್ಚಾಗಿದೆ. ಜಿಲ್ಲೆಯ ತೆಂಗು ಹಾಗೂ ಅಡಿಕೆ ತೋಟಗಳಲ್ಲಿ ನೀರು ನಿಂತಿದೆ. ಬೆಳೆ ನಾಶವಾಗಿದ್ದು, ಇದರ ನಡುವೆ ಜೀವಹಾನಿಗಳೂ ಸಂಭವಿಸಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಶನಿವಾರ ಸಂಜೆ ಕಲ್ಲೂರು ಕೆರೆಯಲ್ಲಿ ಕೈಕಾಲು ತೊಳೆಯಲು ಹೋದ ನಟರಾಜು (30) ಹಾಗೂ ಹನುಮಂತರಾಜು(48) ಕಾಲು ಜಾರಿ ನೀರಿಗೆ ಬಿದ್ದು ನೀರಿನ ರಭಸಕ್ಕೆ ಕ್ಷಣಾರ್ಧದಲ್ಲಿ ಕೊಚ್ಚಿ ಹೋಗಿದ್ದರು. ಸ್ಥಳೀಯರು ಕತ್ತಲಲ್ಲೇ ಹುಡುಕಾಟ ನಡೆಸಿದ್ದರೂ ಕೊಚ್ಚಿ ಹೋದವರು ಪತ್ತೆಯಾಗಿರಲಿಲ್ಲ. ನಂತರ ಅಗ್ನಿ ಶಾಮಕದಳದ ಉಪನಿರೀಕ್ಷಕ ಮಹಾಲಿಂಗಪ್ಪ ನೇತೃತ್ವದ ಸಿಬ್ಬಂದಿ ವರ್ಗ ಸತತ ಪ್ರಯತ್ನಪಟ್ಟು ಕೊಚ್ಚಿಹೋದವರಿಗಾಗಿ ಹುಡುಕಾಟ ನಡೆಸಿದ್ದರು.

ಎಲ್ಲಾ ರೀತಿಯ ಕಾರ್ಯಾಚರಣೆ ನಡೆದರೂ ಯಾವುದೇ ಸುಳಿವು ಸಿಗದೆ ಪ್ರಯತ್ನ ಮುಂದುವರೆಸಿದ್ದರು. ಎರಡು ದಿನದ ಬಳಿಕ ಸೋಮವಾರ ಬೆಳಿಗ್ಗೆ ಕಲ್ಲೂರು ಸಮೀಪದ ಬಿಳಿನಂದಿ ತೊರೆ ಬಳಿ ನಟರಾಜು ಶವ ಪತ್ತೆಯಾಯಿತು. ಮತ್ತೇ ಹುಡುಕಾಟ ನಡೆದು ಮಂಗಳವಾರ ಬೆಳಿಗ್ಗೆ ಅದೇ ಸ್ಥಳದಲ್ಲೇ ಹನುಮಂತರಾಜು ಅವರ ಶವ ಕೂಡಾ ಪತ್ತೆಯಾಗಿದೆ. ಸಿ.ಎಸ್.ಪುರ ಪೊಲೀಸರು ಶವ ಪರೀಕ್ಷೆ ನಡೆಸಿ ಮೃತರ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಕಲ್ಲೂರು ಕೆರೆ ಕೋಡಿ ನೀರು ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯವನ್ನು ಸೇರುತ್ತದೆ.

ಘಟನಾ ಸ್ಥಳಕ್ಕೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಸಾಲ ಜಯರಾಮ್‌ ಭೇಟಿ ನೀಡಿ ಕ್ರಮ ವಹಿಸಿದ್ದರು. ಮಾಜಿ ಶಾಸಕ ಎಂ.ಟಿ.ಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಜೊತೆಗೆ ಜಿಲ್ಲಾಡಳಿತದ ನೀರಿನಲ್ಲಿ ಮುಳುಗಡೆಗೊಂಡಿರುವ ಕುಟುಂಬಸ್ಥರಿಗೆ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರು.

ಮೈಸೂರಿನಲ್ಲಿ ರೈತ ಸಾವು

ಮೈಸೂರು ತಾಲ್ಲೂಕಿನ ಭುಗತಹಳ್ಳಿಯಲ್ಲಿ ಶನಿವಾರ ತಡರಾತ್ರಿ ಮಳೆಯಿಂದ ಜಲಾವೃತವಾಗಿದ್ದ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಪುಟ್ಟಮಾದಪ್ಪ (46) ಮೃತಪಟ್ಟಿದ್ದಾರೆ.

ಪಾವಗಡ ತಾಲ್ಲೂಕಿನ ಪಳವಳ್ಳಿಗೆ ಹೊರಟಿದ್ದ ಕೆಂಚಗಾನಹಳ್ಳಿಯ ಗಂಗಾಧರ (38) ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ರಾಜ್ಯದ ಹಲವೆಡೆ ಹಾನಿ

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ 12 ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ಮಳೆಗೆ 6 ಮನೆಗಳು ಹಾನಿಗೀಡಾಗಿವೆ.

ಇದನ್ನೂ ಓದಿರಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಳೆಯಿಂದಾಗಿ ಬಸ್‌ನಿಲ್ದಾಣ ಜಲಾವೃತವಾಗಿತ್ತು. ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣ, ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು, ಚಾಮರಾಜನಗರ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಜಮೀನು ಜಲಾವೃತವಾಗಿದ್ದು, ಬೆಳೆ ಹಾನಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗರಿಕೆಕಂಡಿಯಿಂದ ತಮಿಳುನಾಡಿನ ಹಂದಿಯೂರು ನಡುವೆ ವಿವಿಧೆಡೆ ಗುಡ್ಡ ಕುಸಿದಿದ್ದು, ಭಾನುವಾರದಿಂದ 4 ದಿನಗಳವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಭಾನುವಾರ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸ್ಥಗಿತಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...