Homeಕರ್ನಾಟಕಗುಬ್ಬಿ: ಕೆರೆಕೋಡಿಯಲ್ಲಿ ಕೊಚ್ಚಿ ಹೋದವರ ಮೃತದೇಹ ಎರಡು ದಿನಗಳ ನಂತರ ಪತ್ತೆ

ಗುಬ್ಬಿ: ಕೆರೆಕೋಡಿಯಲ್ಲಿ ಕೊಚ್ಚಿ ಹೋದವರ ಮೃತದೇಹ ಎರಡು ದಿನಗಳ ನಂತರ ಪತ್ತೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಲ್ಲೂರು ಕೆರೆ ಕೋಡಿಯಲ್ಲಿ ಕೈಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿದ್ದ ಇಬ್ಬರು ವ್ಯಕ್ತಿಗಳ ಮೃತದೇಹಗಳು ಎರಡು ದಿನಗಳ ನಂತರ ಪತ್ತೆಯಾಗಿವೆ.

ಭಾರೀ ಮಳೆಯಿಂದಾಗಿ ತಿಂಗಳ ಹಿಂದೆಯೇ ಕೆರೆ ಕೋಡಿ ಬಿದ್ದಿತ್ತು. ಆದರೆ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆರೆ ಕೋಡಿಗಳಲ್ಲಿ ನೀರಿನ ರಭಸವೂ ಹೆಚ್ಚಾಗಿದೆ. ಜಿಲ್ಲೆಯ ತೆಂಗು ಹಾಗೂ ಅಡಿಕೆ ತೋಟಗಳಲ್ಲಿ ನೀರು ನಿಂತಿದೆ. ಬೆಳೆ ನಾಶವಾಗಿದ್ದು, ಇದರ ನಡುವೆ ಜೀವಹಾನಿಗಳೂ ಸಂಭವಿಸಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಶನಿವಾರ ಸಂಜೆ ಕಲ್ಲೂರು ಕೆರೆಯಲ್ಲಿ ಕೈಕಾಲು ತೊಳೆಯಲು ಹೋದ ನಟರಾಜು (30) ಹಾಗೂ ಹನುಮಂತರಾಜು(48) ಕಾಲು ಜಾರಿ ನೀರಿಗೆ ಬಿದ್ದು ನೀರಿನ ರಭಸಕ್ಕೆ ಕ್ಷಣಾರ್ಧದಲ್ಲಿ ಕೊಚ್ಚಿ ಹೋಗಿದ್ದರು. ಸ್ಥಳೀಯರು ಕತ್ತಲಲ್ಲೇ ಹುಡುಕಾಟ ನಡೆಸಿದ್ದರೂ ಕೊಚ್ಚಿ ಹೋದವರು ಪತ್ತೆಯಾಗಿರಲಿಲ್ಲ. ನಂತರ ಅಗ್ನಿ ಶಾಮಕದಳದ ಉಪನಿರೀಕ್ಷಕ ಮಹಾಲಿಂಗಪ್ಪ ನೇತೃತ್ವದ ಸಿಬ್ಬಂದಿ ವರ್ಗ ಸತತ ಪ್ರಯತ್ನಪಟ್ಟು ಕೊಚ್ಚಿಹೋದವರಿಗಾಗಿ ಹುಡುಕಾಟ ನಡೆಸಿದ್ದರು.

ಎಲ್ಲಾ ರೀತಿಯ ಕಾರ್ಯಾಚರಣೆ ನಡೆದರೂ ಯಾವುದೇ ಸುಳಿವು ಸಿಗದೆ ಪ್ರಯತ್ನ ಮುಂದುವರೆಸಿದ್ದರು. ಎರಡು ದಿನದ ಬಳಿಕ ಸೋಮವಾರ ಬೆಳಿಗ್ಗೆ ಕಲ್ಲೂರು ಸಮೀಪದ ಬಿಳಿನಂದಿ ತೊರೆ ಬಳಿ ನಟರಾಜು ಶವ ಪತ್ತೆಯಾಯಿತು. ಮತ್ತೇ ಹುಡುಕಾಟ ನಡೆದು ಮಂಗಳವಾರ ಬೆಳಿಗ್ಗೆ ಅದೇ ಸ್ಥಳದಲ್ಲೇ ಹನುಮಂತರಾಜು ಅವರ ಶವ ಕೂಡಾ ಪತ್ತೆಯಾಗಿದೆ. ಸಿ.ಎಸ್.ಪುರ ಪೊಲೀಸರು ಶವ ಪರೀಕ್ಷೆ ನಡೆಸಿ ಮೃತರ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಕಲ್ಲೂರು ಕೆರೆ ಕೋಡಿ ನೀರು ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯವನ್ನು ಸೇರುತ್ತದೆ.

ಘಟನಾ ಸ್ಥಳಕ್ಕೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಸಾಲ ಜಯರಾಮ್‌ ಭೇಟಿ ನೀಡಿ ಕ್ರಮ ವಹಿಸಿದ್ದರು. ಮಾಜಿ ಶಾಸಕ ಎಂ.ಟಿ.ಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಜೊತೆಗೆ ಜಿಲ್ಲಾಡಳಿತದ ನೀರಿನಲ್ಲಿ ಮುಳುಗಡೆಗೊಂಡಿರುವ ಕುಟುಂಬಸ್ಥರಿಗೆ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರು.

ಮೈಸೂರಿನಲ್ಲಿ ರೈತ ಸಾವು

ಮೈಸೂರು ತಾಲ್ಲೂಕಿನ ಭುಗತಹಳ್ಳಿಯಲ್ಲಿ ಶನಿವಾರ ತಡರಾತ್ರಿ ಮಳೆಯಿಂದ ಜಲಾವೃತವಾಗಿದ್ದ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಪುಟ್ಟಮಾದಪ್ಪ (46) ಮೃತಪಟ್ಟಿದ್ದಾರೆ.

ಪಾವಗಡ ತಾಲ್ಲೂಕಿನ ಪಳವಳ್ಳಿಗೆ ಹೊರಟಿದ್ದ ಕೆಂಚಗಾನಹಳ್ಳಿಯ ಗಂಗಾಧರ (38) ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ರಾಜ್ಯದ ಹಲವೆಡೆ ಹಾನಿ

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ 12 ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ಮಳೆಗೆ 6 ಮನೆಗಳು ಹಾನಿಗೀಡಾಗಿವೆ.

ಇದನ್ನೂ ಓದಿರಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಳೆಯಿಂದಾಗಿ ಬಸ್‌ನಿಲ್ದಾಣ ಜಲಾವೃತವಾಗಿತ್ತು. ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣ, ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು, ಚಾಮರಾಜನಗರ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಜಮೀನು ಜಲಾವೃತವಾಗಿದ್ದು, ಬೆಳೆ ಹಾನಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗರಿಕೆಕಂಡಿಯಿಂದ ತಮಿಳುನಾಡಿನ ಹಂದಿಯೂರು ನಡುವೆ ವಿವಿಧೆಡೆ ಗುಡ್ಡ ಕುಸಿದಿದ್ದು, ಭಾನುವಾರದಿಂದ 4 ದಿನಗಳವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಭಾನುವಾರ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸ್ಥಗಿತಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...