Homeಕರ್ನಾಟಕಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಪೆದ್ದನಹಳ್ಳಿ ಗ್ರಾಮದ ಗಿರೀಶ್ ಮೂಡಲಗಿರಿಯಪ್ಪ (30) ಮತ್ತು ಚೇಳೂರು ಹೋಬಳಿ ಮಂಚಲದೊರೆ ಗ್ರಾಮದ ಗಿರೀಶ್ (32) ಎಂದು ಗುರುತಿಸಲಾಗಿದೆ.

ಗಿರೀಶ್ ಮೂಡಲಗಿರಿಯಪ್ಪ ಅವರ ವಿರೂಪಗೊಂಡ ಮೃತದೇಹ ಜಮೀನಿನಲ್ಲಿ ಪತ್ತೆಯಾಗಿದ್ದರೆ, ಮಂಚಲದೊರೆ ಗಿರೀಶ್ ಮೃತದೇಹ ಗ್ರಾಮದ ಹೊರವಲಯದ ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರ ರಾತ್ರಿ, ಗ್ರಾಮಸ್ಥರು ಸ್ಥಳೀಯ ದೇವಸ್ಥಾನದ ಉತ್ಸವವನ್ನು ಆಚರಿಸುತ್ತಿದ್ದಾಗ, ಪ್ರಕರಣದ ಪ್ರಮುಖ ಆರೋಪಿ ನಂದೀಶ್, ಗಿರೀಶ್ ಅವರ ಮನೆಗೆ ತೆರಳಿ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ಈ ಯುವಕರನ್ನು ಬೇರೆಡೆಗೆ ಕರೆದೊಯ್ದು, ಅಲ್ಲಿ ಸೇರಿದ್ದ ಗುಂಪು ಕೊಲೆ ಮಾಡಿದೆ ಎಂದು ಆರೋಪ ಕೇಳಿಬಂದಿದೆ.

ಕೂಡಲೇ ದಾಳಿಕೋರರು ದಲಿತ ಯುವಕರಿಗೆ ಓಡಿ ಹೋಗಲು ಸಾಧ್ಯವಾಗದಂತೆ ತೆಂಗಿನ ಗರಿಗಳಿಂದ ಕಟ್ಟಿದರು. ಕಾಲುಗಳನ್ನು ಸುಟ್ಟು ಚಿತ್ರಹಿಂಸೆ ನೀಡಿದರು ಎಂದು ವರದಿಯಾಗಿದೆ.

ನಂತರ ಈ ಯುವಕರ ಭೀಕರವಾಗಿ ಥಳಿಸಲಾಗಿದೆ. ಗಿರೀಶ್ ಮೂಡಲಗಿರಿಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಯುವ ಮೊದಲು ಗಿರೀಶ್ ತಪ್ಪಿಸಿಕೊಳ್ಳಲು ವ್ಯರ್ಥ ಪ್ರಯತ್ನ ಮಾಡಿದ್ದಾರೆ. ಆಗ ದುಷ್ಕರ್ಮಿಗಳು ಗಿರೀಶ್‌ರ ನ್ನು ಕೊಂದು ನೀರಿಗೆ ತಳ್ಳಿದ್ದಾರೆ ಎಂದು ವರದಿಯಾಗಿದೆ.

ದಾಳಿಗೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಕೊಲೆಯಾದ ಯುವಕರ ಮೇಲೆ ಕಳ್ಳತನ ಮಾಡಿದ ಆರೋಪಗಳಿದ್ದವು ಎನ್ನಲಾಗಿದೆ.

ಖೈರ್ಲಾಂಜಿ ಮಾದರಿ ಹತ್ಯೆ ಆರೋಪ: ಪೆದ್ದನಹಳ್ಳಿ ಗ್ರಾಮದಲ್ಲಿ ದಲಿತರು, ತಿಗಳರು ಹಾಗೂ ಲಿಂಗಾಯತರು ಬಹುಸಂಖ್ಯೆಯಲ್ಲಿದ್ದು, ಪ್ಲಾನಿಂಗ್ ಮಾಡಿಕೊಂಡೇ ಈ ಯುವಕರನ್ನು ಕೊಂದಿರುವ ಸಾಧ್ಯತೆ ಇದೆ ಎಂದು ಹೆಸರು ಹೇಳಲಿಚ್ಛಿಸದ ದಲಿತ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಖೈರ್ಲಾಂಜಿಯಂತೆಯೇ ಇಲ್ಲಿಯೂ ಜಾತಿವಾದಿಗಳು ಗುಂಪುಗೂಡಿ ಹತ್ಯೆ ಮಾಡಿರುವ ಶಂಕೆ ಇದೆ. ಸರಿಯಾಗಿ ತನಿಖೆಯಾದಲ್ಲಿ ಆರೋಪಿಗಳು ಸಿಕ್ಕಿ ಬೀಳುತ್ತಾರೆ. ಇಲ್ಲವಾದರೆ ನೂರರಲ್ಲಿ ಇದು ಒಂದು ಎಂಬಂತಾಗುತ್ತದೆ ಎಂದು ಮುಖಂಡರೊಬ್ಬರು ತಿಳಿಸಿದ್ದಾರೆ.

“ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು. ಹೆಚ್ಚಿನ ಹೆಚ್ಚಿನ ಜನರು ಕೊಲೆಯಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪುರವಾಡ್ ತಿಳಿಸಿದ್ದಾರೆ.

‘ಆರೋಪಿಗಳ ಪತ್ತೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಇದೇ ವೇಳೆ ದಲಿತ ಸಂಘಟನೆಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಮನವಿ ಸಲ್ಲಿಸಿವೆ. ಆರೋಪಿಗಳ ವಿರುದ್ಧ ಗುಬ್ಬಿ ಪೊಲೀಸರು ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ದಲಿತ ಮುಖಂಡರಾದ ಕೊಟ್ಟ ಶಂಕರ್‌, “ಕಳ್ಳತನ ಆರೋಪ ನೆಪ ಮಾಡಿ ಇಬ್ಬರು ದಲಿತ ಯುವಕರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ತಾಯಿ ಮತ್ತು ಅವರ ಸಹೋದರಿಯನ್ನು ಗುಬ್ಬಿಯ ಪೊಲೀಸ್‌ ಠಾಣೆಯ ಮುಂದೆ ಭೇಟಿ ಮಾಡಿ ಧೈರ್ಯ ಹೇಳಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಿ ವಿಚಾರಣೆ ಮಾಡುತ್ತಿರುವ ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೆ ತನಿಖೆ ಮಾಡಬೇಕು ಎಂದು ಡಿವೈಎಸ್‌ಪಿ ಮತ್ತು ಎಸ್‌ಪಿಯವರನ್ನು ಭೇಟಿ ಮಾಡಿ ಆಗ್ರಹಿಸುತ್ತೇವೆ. ದಸಂಸದ ಹಿರಿಯರು ಜೊತೆಗಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...