Homeಅಂಕಣಗಳುದುಸ್ಥಿತಿಯಲ್ಲಿ ಬದುಕುತ್ತಿರುವ ಗುಬ್ಬಿ ವೀರಣ್ಣನ ಸೊಸೆ ರಂಗ ಕಲಾವಿದೆ ಶಾಂತಮ್ಮ

ದುಸ್ಥಿತಿಯಲ್ಲಿ ಬದುಕುತ್ತಿರುವ ಗುಬ್ಬಿ ವೀರಣ್ಣನ ಸೊಸೆ ರಂಗ ಕಲಾವಿದೆ ಶಾಂತಮ್ಮ

- Advertisement -
- Advertisement -
ಎಲೆಮರೆ-22

ರಾಮನಗರದ ಜಾನಪದ ಲೋಕ ಆಯೋಜಿಸಿದ್ದ ಲೋಕೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಹೋಗಿದ್ದೆ. ಭಾಷಣ ಮುಗಿಸಿಕೊಂಡು ಊರಿಗೆ ಮರಳುವಾಗ, ರಾಮನಗರದ ಪ್ರಜಾವಾಣಿ ಪತ್ರಕರ್ತ ರುದ್ರೇಶ್ ನಿಮಗೆ ಒಬ್ಬರನ್ನು ಪರಿಚಯಿಸುತ್ತೇನೆ ಬನ್ನಿ ಎಂದರು. ಯಾರು ಏನು ಎಂದು ಕೇಳದೆ ಸರಿ ಆಗಲಿ ಎಂದು ಆತನ ಬೈಕ್ ಏರಿ ಹೊರಟೆ. ಸಂದಿಗೊಂದಿ ಸುತ್ತಿಕೊಂಡು ಒಂದು ಪುಟ್ಟ ಮನೆಗೆ ಕರೆತಂದರು. ಇಳಿವಯಸ್ಸಿನ ಅಜ್ಜಿಯೊಬ್ಬರು ಬಂದು ಗೇಟ್ ತೆಗೆದು ಒಳ ಕರೆದರು. ಅದೊಂದು ಪುಟ್ಟ ಮನೆ. `ಬಾ ಮಗನೆ ಕೂತುಕೋ..’ ಎಂದು ಕುಡಿಯಲು ನೀರು ಕೊಟ್ಟರು. ಆಗ ರುದ್ರೇಶ ಇವರು ಶಾಂತಮ್ಮ ಅಂತ. ಗುಬ್ಬಿ ವೀರಣ್ಣನ ಮಗ ನಟ ಜಿ.ವಿ.ಚನ್ನಬಸಪ್ಪ ಅವರ ಮಡದಿ, ಇಂದು ಯಾರ ಆಸರೆಯೂ ಇಲ್ಲದಂತೆ ಬದುಕುತ್ತಿದ್ದಾರೆ ಎಂದು ಹೇಳಿದರು. ಶಾಂತಮ್ಮ ತಮ್ಮ ವೃತ್ತಿಜೀವನದ ಫೋಟೋಗಳ ಆಲ್ಬಮ್ ಮುಂದಿಟ್ಟರು. ನಾನು ಈ ಫೋಟೋಗಳನ್ನು ನೋಡುತ್ತಾಹೋದಂತೆ ಅಲ್ಲಲ್ಲಿ ತಡೆದು ಶಾಂತಮ್ಮ ಒಂದೊಂದು ಫೋಟೋದ ಸಂದರ್ಭವನ್ನು ವಿವರಿಸತೊಡಗಿದರು. ಮುಖದಲ್ಲಿ ಒಮ್ಮೊಮ್ಮೆ ಮಿಂಚು, ಮತ್ತೊಮ್ಮೆ ಕಡುದುಃಖ. ಹಳೆಯ ನೆನಪುಗಳು ಉತ್ಸಾಹ ಹೆಚ್ಚಿಸಿ ಒಮ್ಮೆ ಜೋರು ಮಾತಾಡಿದರೆ, ಮತ್ತೊಮ್ಮೆ ಪಿಸುದನಿಯಲ್ಲಿ ಅದನ್ನೆಲ್ಲಾ ಹೇಳಬಾರದು ಮರಿ ಎಂದು ಕಣ್ಣಲ್ಲಿ ನೀರು ತರುತ್ತಿದ್ದರು. ಒಂದು ಗಂಟೆಯ ಮಾತುಕತೆ ನನ್ನನ್ನು ಎಪ್ಪತ್ತು ಎಂಬತ್ತರ ದಶಕದ ರಂಗಭೂಮಿಯ ವಾತಾವರಣವನ್ನು ಕಣ್ಮುಂದೆ ಸೃಷ್ಟಿಸಿತು. ಸಾವಿರಾರು ನಾಟಕಗಳಲ್ಲಿ ಅಭಿನಯಿಸಿ ದುಸ್ಥಿತಿಯಲ್ಲಿ ಬದುಕುತ್ತಿರುವ ಶಾಂತಮ್ಮನ ಬಗೆಗೆ ದುಃಖವೂ ಆಯಿತು.

ಒಮ್ಮೆ ಪ್ರಜಾಮತ ಎನ್ನುವ ಪತ್ರಿಕೆಯಲ್ಲಿ ವಾದಿರಾಜ, ಜಯಂತಿ, ರಾಧಾ-ರುಕ್ಮಿಣಿ (ನಟಿ ಶೃತಿ ಅವರ ತಾಯಿ) ಯವರ ಫೋಟೋ ಪ್ರಕಟವಾಗಿರುತ್ತದೆ. ಪುಟ್ಟ ಹುಡುಗಿ ಪೇಪರ್ ನೋಡುತ್ತಾ ಈ ನಟನಟಿಯರ ಚಿತ್ರ ನೋಡುತ್ತಾಳೆ. ನಾನು ಇವರ ಹಾಗೆ ನಟಿಯಾಗಬೇಕೆಂದು ಕನಸು ಕಾಣುತ್ತಾಳೆ. ಈ ಕನಸಿನ ದಾರಿ ಹಿಡಿದು 1964 ರಲ್ಲಿ 13ನೇ ವಯಸ್ಸಿನಲ್ಲಿ ಲವ-ಕುಶ ನಾಟಕದಲ್ಲಿ ಬಾಲನಟಿಯಾಗಿ ಆ ಹುಡುಗಿ ನಟಿಸಿ ಎಲ್ಲರ ಗಮನ ಸೆಳೆಯುತ್ತಾರೆ. ಈ ಹುಡುಗಿಯೇ ಮುಂದೆ ಗುಬ್ಬಿ ವೀರಣ್ಣ ನಾಟಕ ಕಂಪನಿ ಸೇರಿ 40 ವರ್ಷಗಳ ಕಾಲ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸುತ್ತಾಳೆ. ಆ ಪುಟ್ಟ ಹುಡುಗಿಯೇ ಇಂದು ರಾಮನಗರದಲ್ಲಿ ಒಂಟಿಜೀವನ ನಡೆಸುತ್ತಿರುವ ರಂಗನಟಿ ಶಾಂತಮ್ಮ.

ರಾಮನಗರದ ಬಳಿ ಇರುವ ಪುಟ್ಟ ಊರು ಅರ್ಚಕರಳ್ಳಿಯಲ್ಲಿ ನಿಂಗಯ್ಯ ಮತ್ತು ಪುಟ್ಟಮ್ಮನ ಮಗಳಾಗಿ ಶಾಂತಮ್ಮ 1951 ರಲ್ಲಿ ಜನಿಸಿದರು. `ಮೊದಲ ನಾಟಕ ಲವ-ಕುಶದಲ್ಲಿ ಬಾಲ ನೃತ್ಯಕಲಾವಿದೆಯಾಗಿ ಅಭಿನಯಿಸಿದಾಗ ಮೊದಲು ನನಗೆ ಬಣ್ಣ ಹಚ್ಚಿದ್ದು ರಾಧಮ್ಮ. ನನ್ನ ಮೊದಲ ಸಂಬಳ ಹದಿನೈದು ರೂಪಾಯಿ. ಅಂದು ಆರಂಭವಾದ ಕಲಾ ಬದುಕು ಸುದೀರ್ಘ ನಲವತ್ತೆರಡು ವರ್ಷ ನಾಟಕ ಕಂಪನಿ ಬಿಟ್ಟರೆ ಬೇರೆ ಲೋಕವೆ ಗೊತ್ತಿರಲಿಲ್ಲ’ ಎನ್ನುತ್ತಾರೆ. ಮೈಸೂರು ಮಹಾರಾಜರ ಸಮ್ಮುಖದಲ್ಲಿ `ಸಾಹುಕಾರ’ ನಾಟಕದಲ್ಲಿ ಬಾಲಕಲಾವಿದೆಯಾಗಿ ನರ್ತನ ಮಾಡಿದ್ದು ಹಾಗೂ ವರನಟ ಡಾ. ರಾಜಕುಮಾರ್ ಅವರಿಂದ ನೆನಪಿನ ಕಾಣಿಕೆ ಸ್ವೀಕರಿಸಿದ್ದು ನನ್ನ ಜೀವನದ ಮರೆಯಲಾರದ ಕ್ಷಣಗಳು’ ಎನ್ನುತ್ತಾರೆ.

ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ನಾಟಕದಲ್ಲಿ ಪಾರ್ವತಿಯಾಗಿ, ಸಂಸಾರನೌಕೆಯಲ್ಲಿ ಗಿರಿಜೆಯಾಗಿ, ಆರ್. ನಾಗರತ್ನಮ್ಮ ಅವರ ಶ್ರೀಕೃಷ್ಣ ಗಾರುಡಿಯಲ್ಲಿ ಸಹದೇವನ ಪಾತ್ರ, ಮುದುಕನ ಮದುವೆಯಲ್ಲಿ ಕಾವೇರಿ, ಕಲ್ಯಾಣಿ, ಗೋಮುಖ ವ್ಯಾಘ್ರದಲ್ಲಿ ತುಳಸಿ, ಚನ್ನಪ್ಪ ಚನ್ನೇಗೌಡ ಪಾತ್ರದಲ್ಲಿ ಪಾರ್ವತಿ, ಶ್ರೀಕೃಷ್ಣ ಲೀಲೆಯ ಲಲಿತ, ಸುಂದರಿ, ಶರಣ ಬಸವೇಶ್ವರ ನಾಟಕದ ಗಂಗಾಂಬಿಕೆ, ಸಾಹುಕಾರ ನಾಟಕದ ಇಂದುಮತಿ, ಅಣ್ಣ ತಮ್ಮ ನಾಟಕದಲ್ಲಿ ಹಾಸ್ಯ ಕಲಾವಿದೆಯಾಗಿ ಲಕ್ಷ್ಮಿ, ಶೋಭಾ ಪಾತ್ರ, ಲವ-ಕುಶ ನಾಟಕದಲ್ಲಿ ಸೀತೆಯಾಗಿ, ಹೀಗೆ ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ಭಕ್ತಿ ಪ್ರಧಾನ ಎಲ್ಲಾ ಬಗೆಯ ನಾಟಕಗಳಲ್ಲಿ ಎಲ್ಲಾ ಬಗೆಯ ಪಾತ್ರಗಳಿಗೆ ಶಾಂತಮ್ಮ ಜೀವ ತುಂಬಿ ನಟಿಸಿದರು.

`ರಾಜ್ಯದಾದ್ಯಂತ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದೇನೆ. ಒಮ್ಮೊಮ್ಮೆ ದಿನಕ್ಕೆ ಮೂರು ಬಾರಿ ಪ್ರದರ್ಶನ ನೀಡಿರುವೆ. ಗುಬ್ಬಿ ವೀರಣ್ಣ ಅವರ ಹಿರಿಯ ಪುತ್ರಿ ಜಿ.ವಿ. ಸುವರ್ಣಮ್ಮ ಅವರೊಂದಿಗೆ `ಪಾದುಕ ಪಟ್ಟಾಭಿಷೇಕ’ದಲ್ಲಿ ಅವರು ಮಂಥರೆಯಾಗಿ ನಾನು ಸೀತೆ, ಕೈಕೆಯಾಗಿ ನಟಿಸಿದ್ದೆ. ಯೋಗಾನರಸಿಂಹಮೂರ್ತಿ ಅವರ ಕಂಪನಿಯಲ್ಲಿ `ಬೀದಿ ಕಾಮಣ್ಣ’ ನಾಟಕದಲ್ಲಿ ಎಂ.ಎಸ್.ಸತ್ಯ ಅವರ ಜೋಡಿಯಾಗಿ, ಸದಾರಮೆ ನಾಟಕದಲ್ಲಿ ನರಸಿಂಹರಾಜು, ಶಾಂತಕುಮಾರ ರಾಯರು, ಜಿ.ವಿ.ಚನ್ನಬಸಪ್ಪ, ಜಿ.ವಿ.ರಾಜಣ್ಣ (ಗುಬ್ಬಿ ವೀರಣ್ಣ ಅವರ ಪುತ್ರರು), ನಟ ರಾಮಕೃಷ್ಣ, ಚೋಮನದುಡಿ ವಾಸುದೇವ, ಧೀರೇಂದ್ರ ಗೋಪಾಲ್, ಸುಂದರ ಕೃಷ್ಣ ಅರಸ್, ಸುಧೀರ್, ರಾಜಾನಂದ್, ಗಾಜಿನ ಮನೆ ನಾಟಕದಲ್ಲಿ ಚಿಂದೋಡಿ ಲೀಲಾ, ಉಮಾಶ್ರೀ, ರಾಧಾ-ರುಕ್ಮಿಣಿ, ಶ್ರೀಲಲಿತಾ ಸೇರಿದಂತೆ ಹಲವರೊಂದಿಗೆ ಅಭಿನಯಿಸಿದ್ದೇನೆ’ ಎಂದು ಶಾಂತಮ್ಮ ಹಳೆ ನೆನಪುಗಳನ್ನು ಮೆಲುಕು ಹಾಕುತ್ತಾರೆ.

ಸಾಮಾಜಿಕ ನಾಟಕಗಳಾದ `ವರ ನೋಡಿ ಹೆಣ್ಣು ಕೊಡು’ ನಾಟಕದಲ್ಲಿ ರತ್ನನ ಪಾತ್ರ, `ಚನ್ನಪ್ಪ ಚನ್ನಗೌಡ’ ನಾಟಕದಲ್ಲಿ ಪಾರ್ವತಿ ಪಾತ್ರದಲ್ಲಿ ಶಾಂತಮ್ಮ ತುಂಬಾ ಜನಪ್ರಿಯರಾಗಿದ್ದರು. `ಮೂರು ಬಾರಿ ಅಣ್ಣಾವ್ರನ್ನ ನೋಡಿ ಮಾತಾಡಿಸಿದ್ದೆ. ಫಾರಿನ್‍ಗೆ ಹೋಗಬೇಕಾದ್ರೆ ದಾವಣಗೆರೆ ಕ್ಯಾಂಪಿಗೆ ಬಂದಿದ್ರು, ದೇವತಾ ಮನುಷ್ಯ ಶೂಟಿಂಗ್‍ನಲ್ಲಿ ಹೇಳಿಕಳಿಸಿದ್ರು ಆಗ ನಮ್ಮ ಯಜಮಾನರು ಮತ್ತು ನಾನು ತುಂಬಾ ಹೊತ್ತು ಮಾತಾಡಿದ್ವಿ’ ಎಂದು ಡಾ. ರಾಜಕುಮಾರ್ ಅವರ ಭೇಟಿಯ ನೆನಪುಗಳನ್ನು ಹೇಳುತ್ತಾರೆ. ಯಾವುದೇ ನಾಟಕದಲ್ಲಿ ಇಂತ ಪಾತ್ರ ಮಾಡೋರಿಲ್ಲ ಅಂದ್ರೆ ಸಾಕು ಯಾವುದೇ ಪಾತ್ರವಿರಲಿ ಅದನ್ನು ನಿರ್ವಹಿಸಿ ಸೈ ಅನ್ನಿಸಿಕೊಂಡಿದಿನಿ, ಅಷ್ಟರಮಟ್ಟಿಗೆ ರಂಗಭೂಮಿಯಲ್ಲಿ ನಾನು ಪಳಗಿದ್ದೆ, ಈಗಲೂ ಕೃಷ್ಣ ಲೀಲೆ ನಾಟಕದ ರಾಧೆ ಪಾತ್ರದ ಲಂಗವನ್ನು, ಮಂತ್ರಿಣಿ ಪಾತ್ರದ ಡ್ರೆಸ್ಸುಗಳನ್ನು, ಆಗಿನ ವಿಗ್ಗುಗಳನ್ನು ನೆನಪಿಗಾಗಿ ಕಾಪಾಡಿರುವೆ’ ಎನ್ನುತ್ತಾರೆ.

ನಾಟಕಗಳ ಅಭಿನಯದಲ್ಲಿ ಪರಸ್ಪರರು ಆಕರ್ಷಣೆಯಾಗಿ 1971 ರಲ್ಲಿ ಗುಬ್ಬಿ ವೀರಣ್ಣನ ಮಗ ಜಿ.ವಿ.ಚನ್ನಬಸಪ್ಪ ಅವರನ್ನು ಮದುವೆಯಾದರು. ಇದು ಎರಡನೆ ಮದುವೆಯಾದ ಕಾರಣ ಶಾಂತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಆಗಲಿಲ್ಲ. ಎಲ್ಲರೂ ನನಗೆ ಮೋಸ ಮಾಡಿದರು ಎಂದು ಶಾಂತಮ್ಮ ದುಃಖಿಸುತ್ತಾರೆ. ಈಗಲೂ ಅವಕಾಶ ಸಿಕ್ಕರೆ ನಟಿಸಲು ಸಿದ್ಧ ಎನ್ನುವ ಸ್ವಾಭಿಮಾನಿ ಶಾಂತಮ್ಮ ನಿಜಕ್ಕೂ ಕಡುಕಷ್ಟದಲ್ಲಿ ಬದುಕುತ್ತಿದ್ದಾರೆ. ಪ್ರಜಾವಾಣಿ ಪತ್ರಕರ್ತ ರುದ್ರೇಶ್ ಶಾಂತಮ್ಮಗೆ ಒಂದಷ್ಟು ಆಸರೆಯಾಗಿದ್ದಾರೆ. ತಾಂತ್ರಿಕ ಕಾರಣದಿಂದ ಕಳೆದ ಮೂರು ತಿಂಗಳಿಂದ ಕಲಾವಿದರ ಮಾಸಾಶನವೂ ಬರುತ್ತಿಲ್ಲ. ಈ ವಿಷಯವನ್ನು ಕವಿ ನಾಗೇಂದ್ರ ಪ್ರಸಾದ್ ಅವರ ಗಮನಕ್ಕೆ ತಂದಾಗ ಶಿವಾರ್ಜುನ ಸಿನೆಮಾದ ನಿರ್ಮಾಪಕ ಶಿವಾರ್ಜುನ ಅವರಿಂದ ಒಂದಷ್ಟು ನೆರವು ಕೊಡಿಸಿದ್ದಾರೆ. ಇಂತಹ ರಂಗಕಲಾವಿದೆಗೆ ನೆರವಾಗುವ ಮನಸ್ಸಿದ್ದವರು ಖಂಡಿತಾ ಸಹಾಯ ಮಾಡಬಹುದು. ಎಲೆಮರೆಕಾಲಂನಲ್ಲಿ ಈ ತೆರನಾಗಿ ಸಹಾಯವನ್ನು ಯಾರಿಗೂ ಕೋರಿಲ್ಲ, ಆದರೆ ಶಾಂತಮ್ಮನ ದುಸ್ಥಿತಿಗೆ `ನ್ಯಾಯಪಥ’ವೂ ನೆರವಿಗೆ ಬರಬೇಕೆನ್ನುವ ಕಾರಣಕ್ಕೆ ಶಾಂತಮ್ಮನ ಬ್ಯಾಂಕ್ ವಿವರ ಮತ್ತು ಅವರ ಮೊಬೈಲ್ ಸಂಖ್ಯೆಯನ್ನು ಕೊಡುತ್ತಿದ್ದೇವೆ. ಈ ಇಳಿಗಾಲದಲ್ಲಿ ಮನಸ್ಸಿದ್ದವರು ಶಾಂತಮ್ಮನಿಗೆ ನೆರವಾಗಿ.

ಬ್ಯಾಂಕ್ ಖಾತೆ ವಿವರ:
Name: N.Shanthamma
A/C: 0593101026583
IFSC: CNRB0000593
Bank: CANARA BANK
Mobil: 9845643106

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...