Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...