Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...