Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...