Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...