Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...