Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...