Homeಕರ್ನಾಟಕಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

ಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

- Advertisement -
- Advertisement -

ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿನ ಮಾತುಕತೆ ಬಳಿಕ ಮುಷ್ಕರ ಅಂತ್ಯಗೊಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ನೀಡಿದ ಭರವಸೆಗಳಿಗೆ ಅತಿಥಿ ಉಪನ್ಯಾಸಕರು ಒಪ್ಪಿದ್ದು, ಮುಷ್ಕರ ಕೈಬಿಟ್ಟು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲು ಒಪ್ಪಿದ್ದಾರೆ.

ಮುಖ್ಯಮಂತ್ರಿಗಳು ನೀಡಿದ ಭರವಸೆಗಳೇನು?

  • ಮಹಿಳಾ ಅತಿಥಿ ಉಪನ್ಯಾಸಕರಿಗೆ ಇದೇ ಜನವರಿ ತಿಂಗಳಿನಿಂದ ಜಾರಿಗೆ ಬರುವಂತೆ ಮೂರು ತಿಂಗಳ ಕಾಲ ಹೆರಿಗೆ ರಜೆಯನ್ನು ಸಂಬಳ ಸಹಿತ ನೀಡುವುದು.
  • ಅತಿಥಿ ಉಪನ್ಯಾಸಕರ ಮೆರಿಟ್ ಆಧರಿಸಿ, ಸ್ವಇಚ್ಛೆ ವ್ಯಕ್ತಪಡಿಸಿದಲ್ಲಿ ಹಾಲಿ ಇರುವ ಕಾಲೇಜಿನಲ್ಲೇ ಕೌನ್ಸಿಲಿಂಗ್‌ಗೆ ಒಳಪಡದೆ ಮುಂದುವರೆಯಲು ಅವಕಾಶ.
  • ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ನೀಡುವ ಕುರಿತು ಪರಿಶೀಲಿಸಲಾಗಿದ್ದು, ರಜೆಯ 1 ದಿನದ ಕಾರ್ಯಭಾರವನ್ನು ಇತರೆ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು 15/19 ಗಂಟೆಗಳ ಕಾರ್ಯಭಾರ ನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಮಾಸಿಕ 1 ದಿನ ರಜೆ ನೀಡುವುದು.
  • ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಅರ್ಜಿಗಳನ್ನು ಕರೆಯದೆ, ದಾಖಲೆಗಳನ್ನು ಪರಿಶೀಲನೆ ಮಾಡುವುದರ ಬದಲು ಹಿಂದಿನ ವರ್ಷದ ಅರ್ಜಿಯನ್ನೇ ನಂತರದ ವರ್ಷಗಳಲ್ಲಿನ ಆಯ್ಕೆಗೆ ಪರಿಗಣಿಸುವುದು. ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಆಯ್ಕೆಯಾದ ಅತಿಥಿ ಉಪನ್ಯಾಸಕರ ದಾಖಲೆಗಳನ್ನು ಕೇಂದ್ರೀಕೃತ ಡೇಟಾ ಬೇಸ್ ಸೃಷ್ಟಿಸಿ ನಿರ್ವಹಿಸುವುದು.
  • ಹಿಂದಿನ ಸೇವೆಯನ್ನು ಆಧರಿಸಿ ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಿ, ಅತಿಥಿ ಉಪನ್ಯಾಸಕರಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಕೃಪಾಂಕವನ್ನು ನೀಡುವುದರ ಬಗ್ಗೆ ಪರಿಶೀಲಾಗಿದ್ದು, ಸರ್ವೋಚ್ಚ ನ್ಯಾಯಾಲಯ ಉಮಾದೇವಿ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಆಧಾರದಲ್ಲಿ ಹಾಗೂ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೀಡಿರುವ ತೀರ್ಪುಗಳ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ಸೇವಾ ಸಕ್ರಮಾತಿಗೊಳಿಸಲು ಅವಕಾಶ ಇಲ್ಲದಿರುವುದರಿಂದ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರು, ತಾಂತ್ರಿಕ ಶಿಕ್ಷಣ ಇಲಾಖೆಯ ಇಂಜಿನಿಯರಿಂಗ್‌ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಹಾಗೂ ಪಾಲಿಟೆಕ್ನಿಕ್‌ ಉಪನ್ಯಾಸಕರುಗಳ ಮುಂದಿನ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ ಕನಿಷ್ಠ 05 ವರ್ಷಗಳಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಶೇ.1 ರಂತೆ ಗರಿಷ್ಠ ಶೇ.5 ರಷ್ಟು ಕೃಪಾಂಕ (Weightage) ನೀಡುವ ಅವಕಾಶವನ್ನು ವಿಶೇಷ ನಿಯಮಗಳಲ್ಲಿ ಅಳವಡಿಸುವುದು.
  • 10-15 ವರ್ಷಗಳಿಗೂ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿ, 60 ವರ್ಷ ಮೀರಿದ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ಇಲ್ಲದಿರುವುದರಿಂದ ಇವರಿಗೆ ಭದ್ರತಾ ರೂಪದಲ್ಲಿ ಇಡಿಗಂಟು ಸೌಲಭ್ಯವನ್ನು ಅವರುಗಳು ಸಲ್ಲಿಸಿರುವ ಸೇವಾ ಅವಧಿ ಪರಿಗಣಿಸಿ ವಾರ್ಷಿಕ ರೂ.50,000 ಮೊತ್ತದಂತೆ (ಉದಾಹರಣೆಗೆ 10 ವರ್ಷ ಸೇವೆ ಸಲ್ಲಿಸಿದಲ್ಲಿ 10 ವರ್ಷ x50,000=5,00,000)ಇಡಿಗಂಟು ನೀಡುವುದು.

    ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ಅವರ ಕುಟುಂಬದ ಎಲ್ಲರಿಗೂ ವಾರ್ಷಿಕ ರೂ.5 ಲಕ್ಷದ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರಿಂದ ವಂತಿಗೆ ರೂಪದಲ್ಲಿ ಮಾಸಿಕ ರೂ.400 ಸ್ವೀಕರಿಸಿ, ಅಷ್ಟೇ ಮೊತ್ತದ ವಂತಿಗೆಯನ್ನು (ಅತಿಥಿ ಉಪನ್ಯಾಸಕರಿಂದ ರೂ.400 + ಸರ್ಕಾರದಿಂದ ರೂ.400 ಒಟ್ಟು ರೂ.800) ಸರ್ಕಾರದಿಂದ ಭರಿಸಿ ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸುವುದು.

  • ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಗೌರವ ಧನಕ್ಕೆ ಅವರ ಸೇವೆಯನ್ನು ಪರಿಗಣಿಸಿ ಐದು ವರ್ಷ ಪೂರೈಸಿದವರಿಗೆ ರೂ.6,000 ಹೆಚ್ಚಳ, ಹತ್ತು ವರ್ಷ ಪೂರೈಸಿದವರಿಗೆ ರೂ.7,000 ಹೆಚ್ಚಳ ಹಾಗೂ 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ ರೂ. 8000 ಹೆಚ್ಚಳ ಮಾಡುವುದು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಪ್ರಾರಂಭಿಸಿದ್ದ ಅತಿಥಿ ಉಪನ್ಯಾಸಕರು, ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ತಲುಪಿ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದರು. ಕೆಲ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಸೇವಾ ಭದ್ರತೆ ಅಥವಾ ಖಾಯಂ ನೇಮಕಾತಿ ಕುರಿತು ಸರ್ಕಾರ ಮಾತನಾಡುವವರೆಗೆ ಮುಷ್ಕರ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, 5 ಸಾವಿರ ರೂಪಾಯಿ ವೇತನ ಹೆಚ್ಚಳ ಸೇರಿದಂತೆ ನಾಲ್ಕು ಭರವಸೆಗಳನ್ನು ನೀಡಿದ್ದರು. ಅದನ್ನು ತಿರಸ್ಕರಿಸಿದ್ದ ಉಪನ್ಯಾಸಕರು, ನಮಗೆ ಪರ್ಯಾಯ ವ್ಯವಸ್ಥೆ ಬೇಡ ಸೇವಾ ಭದ್ರತೆ ಕೊಡಿ ಎಂದು ಆಗ್ರಹಿಸಿದ್ದರು. ಆದರೆ, ಸಿಎಂ ಜೊತೆಗಿನ ಸಭೆ ಬಳಿಕ ಮುಷ್ಕರ ಕೈಬಿಡಲು ನಿರ್ಧಿರಿಸಿದ್ದಾರೆ.

ಇದನ್ನೂ ಓದಿ: ‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...