Homeಕರ್ನಾಟಕಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

ಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

- Advertisement -
- Advertisement -

ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿನ ಮಾತುಕತೆ ಬಳಿಕ ಮುಷ್ಕರ ಅಂತ್ಯಗೊಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ನೀಡಿದ ಭರವಸೆಗಳಿಗೆ ಅತಿಥಿ ಉಪನ್ಯಾಸಕರು ಒಪ್ಪಿದ್ದು, ಮುಷ್ಕರ ಕೈಬಿಟ್ಟು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲು ಒಪ್ಪಿದ್ದಾರೆ.

ಮುಖ್ಯಮಂತ್ರಿಗಳು ನೀಡಿದ ಭರವಸೆಗಳೇನು?

  • ಮಹಿಳಾ ಅತಿಥಿ ಉಪನ್ಯಾಸಕರಿಗೆ ಇದೇ ಜನವರಿ ತಿಂಗಳಿನಿಂದ ಜಾರಿಗೆ ಬರುವಂತೆ ಮೂರು ತಿಂಗಳ ಕಾಲ ಹೆರಿಗೆ ರಜೆಯನ್ನು ಸಂಬಳ ಸಹಿತ ನೀಡುವುದು.
  • ಅತಿಥಿ ಉಪನ್ಯಾಸಕರ ಮೆರಿಟ್ ಆಧರಿಸಿ, ಸ್ವಇಚ್ಛೆ ವ್ಯಕ್ತಪಡಿಸಿದಲ್ಲಿ ಹಾಲಿ ಇರುವ ಕಾಲೇಜಿನಲ್ಲೇ ಕೌನ್ಸಿಲಿಂಗ್‌ಗೆ ಒಳಪಡದೆ ಮುಂದುವರೆಯಲು ಅವಕಾಶ.
  • ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ನೀಡುವ ಕುರಿತು ಪರಿಶೀಲಿಸಲಾಗಿದ್ದು, ರಜೆಯ 1 ದಿನದ ಕಾರ್ಯಭಾರವನ್ನು ಇತರೆ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು 15/19 ಗಂಟೆಗಳ ಕಾರ್ಯಭಾರ ನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಮಾಸಿಕ 1 ದಿನ ರಜೆ ನೀಡುವುದು.
  • ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಅರ್ಜಿಗಳನ್ನು ಕರೆಯದೆ, ದಾಖಲೆಗಳನ್ನು ಪರಿಶೀಲನೆ ಮಾಡುವುದರ ಬದಲು ಹಿಂದಿನ ವರ್ಷದ ಅರ್ಜಿಯನ್ನೇ ನಂತರದ ವರ್ಷಗಳಲ್ಲಿನ ಆಯ್ಕೆಗೆ ಪರಿಗಣಿಸುವುದು. ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಆಯ್ಕೆಯಾದ ಅತಿಥಿ ಉಪನ್ಯಾಸಕರ ದಾಖಲೆಗಳನ್ನು ಕೇಂದ್ರೀಕೃತ ಡೇಟಾ ಬೇಸ್ ಸೃಷ್ಟಿಸಿ ನಿರ್ವಹಿಸುವುದು.
  • ಹಿಂದಿನ ಸೇವೆಯನ್ನು ಆಧರಿಸಿ ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಿ, ಅತಿಥಿ ಉಪನ್ಯಾಸಕರಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಕೃಪಾಂಕವನ್ನು ನೀಡುವುದರ ಬಗ್ಗೆ ಪರಿಶೀಲಾಗಿದ್ದು, ಸರ್ವೋಚ್ಚ ನ್ಯಾಯಾಲಯ ಉಮಾದೇವಿ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಆಧಾರದಲ್ಲಿ ಹಾಗೂ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೀಡಿರುವ ತೀರ್ಪುಗಳ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ಸೇವಾ ಸಕ್ರಮಾತಿಗೊಳಿಸಲು ಅವಕಾಶ ಇಲ್ಲದಿರುವುದರಿಂದ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರು, ತಾಂತ್ರಿಕ ಶಿಕ್ಷಣ ಇಲಾಖೆಯ ಇಂಜಿನಿಯರಿಂಗ್‌ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಹಾಗೂ ಪಾಲಿಟೆಕ್ನಿಕ್‌ ಉಪನ್ಯಾಸಕರುಗಳ ಮುಂದಿನ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ ಕನಿಷ್ಠ 05 ವರ್ಷಗಳಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಶೇ.1 ರಂತೆ ಗರಿಷ್ಠ ಶೇ.5 ರಷ್ಟು ಕೃಪಾಂಕ (Weightage) ನೀಡುವ ಅವಕಾಶವನ್ನು ವಿಶೇಷ ನಿಯಮಗಳಲ್ಲಿ ಅಳವಡಿಸುವುದು.
  • 10-15 ವರ್ಷಗಳಿಗೂ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿ, 60 ವರ್ಷ ಮೀರಿದ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ಇಲ್ಲದಿರುವುದರಿಂದ ಇವರಿಗೆ ಭದ್ರತಾ ರೂಪದಲ್ಲಿ ಇಡಿಗಂಟು ಸೌಲಭ್ಯವನ್ನು ಅವರುಗಳು ಸಲ್ಲಿಸಿರುವ ಸೇವಾ ಅವಧಿ ಪರಿಗಣಿಸಿ ವಾರ್ಷಿಕ ರೂ.50,000 ಮೊತ್ತದಂತೆ (ಉದಾಹರಣೆಗೆ 10 ವರ್ಷ ಸೇವೆ ಸಲ್ಲಿಸಿದಲ್ಲಿ 10 ವರ್ಷ x50,000=5,00,000)ಇಡಿಗಂಟು ನೀಡುವುದು.

    ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ಅವರ ಕುಟುಂಬದ ಎಲ್ಲರಿಗೂ ವಾರ್ಷಿಕ ರೂ.5 ಲಕ್ಷದ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರಿಂದ ವಂತಿಗೆ ರೂಪದಲ್ಲಿ ಮಾಸಿಕ ರೂ.400 ಸ್ವೀಕರಿಸಿ, ಅಷ್ಟೇ ಮೊತ್ತದ ವಂತಿಗೆಯನ್ನು (ಅತಿಥಿ ಉಪನ್ಯಾಸಕರಿಂದ ರೂ.400 + ಸರ್ಕಾರದಿಂದ ರೂ.400 ಒಟ್ಟು ರೂ.800) ಸರ್ಕಾರದಿಂದ ಭರಿಸಿ ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸುವುದು.

  • ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಗೌರವ ಧನಕ್ಕೆ ಅವರ ಸೇವೆಯನ್ನು ಪರಿಗಣಿಸಿ ಐದು ವರ್ಷ ಪೂರೈಸಿದವರಿಗೆ ರೂ.6,000 ಹೆಚ್ಚಳ, ಹತ್ತು ವರ್ಷ ಪೂರೈಸಿದವರಿಗೆ ರೂ.7,000 ಹೆಚ್ಚಳ ಹಾಗೂ 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ ರೂ. 8000 ಹೆಚ್ಚಳ ಮಾಡುವುದು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಪ್ರಾರಂಭಿಸಿದ್ದ ಅತಿಥಿ ಉಪನ್ಯಾಸಕರು, ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ತಲುಪಿ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದರು. ಕೆಲ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಸೇವಾ ಭದ್ರತೆ ಅಥವಾ ಖಾಯಂ ನೇಮಕಾತಿ ಕುರಿತು ಸರ್ಕಾರ ಮಾತನಾಡುವವರೆಗೆ ಮುಷ್ಕರ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, 5 ಸಾವಿರ ರೂಪಾಯಿ ವೇತನ ಹೆಚ್ಚಳ ಸೇರಿದಂತೆ ನಾಲ್ಕು ಭರವಸೆಗಳನ್ನು ನೀಡಿದ್ದರು. ಅದನ್ನು ತಿರಸ್ಕರಿಸಿದ್ದ ಉಪನ್ಯಾಸಕರು, ನಮಗೆ ಪರ್ಯಾಯ ವ್ಯವಸ್ಥೆ ಬೇಡ ಸೇವಾ ಭದ್ರತೆ ಕೊಡಿ ಎಂದು ಆಗ್ರಹಿಸಿದ್ದರು. ಆದರೆ, ಸಿಎಂ ಜೊತೆಗಿನ ಸಭೆ ಬಳಿಕ ಮುಷ್ಕರ ಕೈಬಿಡಲು ನಿರ್ಧಿರಿಸಿದ್ದಾರೆ.

ಇದನ್ನೂ ಓದಿ: ‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...