Homeಕರ್ನಾಟಕಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

ಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

- Advertisement -
- Advertisement -

ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿನ ಮಾತುಕತೆ ಬಳಿಕ ಮುಷ್ಕರ ಅಂತ್ಯಗೊಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ನೀಡಿದ ಭರವಸೆಗಳಿಗೆ ಅತಿಥಿ ಉಪನ್ಯಾಸಕರು ಒಪ್ಪಿದ್ದು, ಮುಷ್ಕರ ಕೈಬಿಟ್ಟು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲು ಒಪ್ಪಿದ್ದಾರೆ.

ಮುಖ್ಯಮಂತ್ರಿಗಳು ನೀಡಿದ ಭರವಸೆಗಳೇನು?

  • ಮಹಿಳಾ ಅತಿಥಿ ಉಪನ್ಯಾಸಕರಿಗೆ ಇದೇ ಜನವರಿ ತಿಂಗಳಿನಿಂದ ಜಾರಿಗೆ ಬರುವಂತೆ ಮೂರು ತಿಂಗಳ ಕಾಲ ಹೆರಿಗೆ ರಜೆಯನ್ನು ಸಂಬಳ ಸಹಿತ ನೀಡುವುದು.
  • ಅತಿಥಿ ಉಪನ್ಯಾಸಕರ ಮೆರಿಟ್ ಆಧರಿಸಿ, ಸ್ವಇಚ್ಛೆ ವ್ಯಕ್ತಪಡಿಸಿದಲ್ಲಿ ಹಾಲಿ ಇರುವ ಕಾಲೇಜಿನಲ್ಲೇ ಕೌನ್ಸಿಲಿಂಗ್‌ಗೆ ಒಳಪಡದೆ ಮುಂದುವರೆಯಲು ಅವಕಾಶ.
  • ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ನೀಡುವ ಕುರಿತು ಪರಿಶೀಲಿಸಲಾಗಿದ್ದು, ರಜೆಯ 1 ದಿನದ ಕಾರ್ಯಭಾರವನ್ನು ಇತರೆ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು 15/19 ಗಂಟೆಗಳ ಕಾರ್ಯಭಾರ ನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಮಾಸಿಕ 1 ದಿನ ರಜೆ ನೀಡುವುದು.
  • ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಅರ್ಜಿಗಳನ್ನು ಕರೆಯದೆ, ದಾಖಲೆಗಳನ್ನು ಪರಿಶೀಲನೆ ಮಾಡುವುದರ ಬದಲು ಹಿಂದಿನ ವರ್ಷದ ಅರ್ಜಿಯನ್ನೇ ನಂತರದ ವರ್ಷಗಳಲ್ಲಿನ ಆಯ್ಕೆಗೆ ಪರಿಗಣಿಸುವುದು. ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಆಯ್ಕೆಯಾದ ಅತಿಥಿ ಉಪನ್ಯಾಸಕರ ದಾಖಲೆಗಳನ್ನು ಕೇಂದ್ರೀಕೃತ ಡೇಟಾ ಬೇಸ್ ಸೃಷ್ಟಿಸಿ ನಿರ್ವಹಿಸುವುದು.
  • ಹಿಂದಿನ ಸೇವೆಯನ್ನು ಆಧರಿಸಿ ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಿ, ಅತಿಥಿ ಉಪನ್ಯಾಸಕರಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಕೃಪಾಂಕವನ್ನು ನೀಡುವುದರ ಬಗ್ಗೆ ಪರಿಶೀಲಾಗಿದ್ದು, ಸರ್ವೋಚ್ಚ ನ್ಯಾಯಾಲಯ ಉಮಾದೇವಿ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಆಧಾರದಲ್ಲಿ ಹಾಗೂ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೀಡಿರುವ ತೀರ್ಪುಗಳ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ಸೇವಾ ಸಕ್ರಮಾತಿಗೊಳಿಸಲು ಅವಕಾಶ ಇಲ್ಲದಿರುವುದರಿಂದ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರು, ತಾಂತ್ರಿಕ ಶಿಕ್ಷಣ ಇಲಾಖೆಯ ಇಂಜಿನಿಯರಿಂಗ್‌ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಹಾಗೂ ಪಾಲಿಟೆಕ್ನಿಕ್‌ ಉಪನ್ಯಾಸಕರುಗಳ ಮುಂದಿನ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ ಕನಿಷ್ಠ 05 ವರ್ಷಗಳಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಶೇ.1 ರಂತೆ ಗರಿಷ್ಠ ಶೇ.5 ರಷ್ಟು ಕೃಪಾಂಕ (Weightage) ನೀಡುವ ಅವಕಾಶವನ್ನು ವಿಶೇಷ ನಿಯಮಗಳಲ್ಲಿ ಅಳವಡಿಸುವುದು.
  • 10-15 ವರ್ಷಗಳಿಗೂ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿ, 60 ವರ್ಷ ಮೀರಿದ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ಇಲ್ಲದಿರುವುದರಿಂದ ಇವರಿಗೆ ಭದ್ರತಾ ರೂಪದಲ್ಲಿ ಇಡಿಗಂಟು ಸೌಲಭ್ಯವನ್ನು ಅವರುಗಳು ಸಲ್ಲಿಸಿರುವ ಸೇವಾ ಅವಧಿ ಪರಿಗಣಿಸಿ ವಾರ್ಷಿಕ ರೂ.50,000 ಮೊತ್ತದಂತೆ (ಉದಾಹರಣೆಗೆ 10 ವರ್ಷ ಸೇವೆ ಸಲ್ಲಿಸಿದಲ್ಲಿ 10 ವರ್ಷ x50,000=5,00,000)ಇಡಿಗಂಟು ನೀಡುವುದು.

    ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ಅವರ ಕುಟುಂಬದ ಎಲ್ಲರಿಗೂ ವಾರ್ಷಿಕ ರೂ.5 ಲಕ್ಷದ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರಿಂದ ವಂತಿಗೆ ರೂಪದಲ್ಲಿ ಮಾಸಿಕ ರೂ.400 ಸ್ವೀಕರಿಸಿ, ಅಷ್ಟೇ ಮೊತ್ತದ ವಂತಿಗೆಯನ್ನು (ಅತಿಥಿ ಉಪನ್ಯಾಸಕರಿಂದ ರೂ.400 + ಸರ್ಕಾರದಿಂದ ರೂ.400 ಒಟ್ಟು ರೂ.800) ಸರ್ಕಾರದಿಂದ ಭರಿಸಿ ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸುವುದು.

  • ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಗೌರವ ಧನಕ್ಕೆ ಅವರ ಸೇವೆಯನ್ನು ಪರಿಗಣಿಸಿ ಐದು ವರ್ಷ ಪೂರೈಸಿದವರಿಗೆ ರೂ.6,000 ಹೆಚ್ಚಳ, ಹತ್ತು ವರ್ಷ ಪೂರೈಸಿದವರಿಗೆ ರೂ.7,000 ಹೆಚ್ಚಳ ಹಾಗೂ 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ ರೂ. 8000 ಹೆಚ್ಚಳ ಮಾಡುವುದು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಪ್ರಾರಂಭಿಸಿದ್ದ ಅತಿಥಿ ಉಪನ್ಯಾಸಕರು, ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ತಲುಪಿ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದರು. ಕೆಲ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಸೇವಾ ಭದ್ರತೆ ಅಥವಾ ಖಾಯಂ ನೇಮಕಾತಿ ಕುರಿತು ಸರ್ಕಾರ ಮಾತನಾಡುವವರೆಗೆ ಮುಷ್ಕರ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, 5 ಸಾವಿರ ರೂಪಾಯಿ ವೇತನ ಹೆಚ್ಚಳ ಸೇರಿದಂತೆ ನಾಲ್ಕು ಭರವಸೆಗಳನ್ನು ನೀಡಿದ್ದರು. ಅದನ್ನು ತಿರಸ್ಕರಿಸಿದ್ದ ಉಪನ್ಯಾಸಕರು, ನಮಗೆ ಪರ್ಯಾಯ ವ್ಯವಸ್ಥೆ ಬೇಡ ಸೇವಾ ಭದ್ರತೆ ಕೊಡಿ ಎಂದು ಆಗ್ರಹಿಸಿದ್ದರು. ಆದರೆ, ಸಿಎಂ ಜೊತೆಗಿನ ಸಭೆ ಬಳಿಕ ಮುಷ್ಕರ ಕೈಬಿಡಲು ನಿರ್ಧಿರಿಸಿದ್ದಾರೆ.

ಇದನ್ನೂ ಓದಿ: ‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...