Homeಕರ್ನಾಟಕಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರ ಮಾಡಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ. ಒಂದು ದಶಕದಿಂದ ಆಗುತ್ತಿರುವ ಅನ್ಯಾಯಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 10ರಿಂದ ಅನಿರ್ದಿಷ್ಟಾವತಿ ಹೋರಾಟ, ಉಪವಾಸ ಸತ್ಯಾಗ್ರಹ, ತರಗತಿ ಬಹಿಷ್ಕಾರ ಹಾಕಿದ್ದೇವೆ. ಬೆಳಗಾವಿ ಅಧಿವೇಶನದಲ್ಲೂ ಅತಿಥಿ ಉಪನ್ಯಾಸಕರ ಸಮಸ್ಯೆಗಳು ಚರ್ಚೆಗೆ ಕೂಡ ಬಂದಿವೆ. ನಮ್ಮ ಸಮಸ್ಯೆಗಳ ಅರಿವಿದ್ದರೂ ಉನ್ನತ ಶಿಕ್ಷಣ ಸಚಿವರು ನಮ್ಮ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂಬುದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ಧರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಬೇಸರ.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ ಎಂದು ಆರೋಪಿಸಿದ್ದಾರೆ.

ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎನ್ನುತ್ತಾರೆ ಉಪನ್ಯಾಸಕರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಎನ್‌ಇಪಿ ಜಾರಿಗೊಳಿಸಿದ ಬಳಿಕ ವರ್ಕ್‌‌ಲೋಡ್ ಹೆಚ್ಚಾಗಿದೆ. ಶೇ. 100ರಷ್ಟು ಪಿಯುಸಿ ಫಲಿತಾಂಶ ಬಂದಿದ್ದರಿಂದ ರಾಜ್ಯದ ಎಲ್ಲ 430 ಪ್ರಥಮದರ್ಜೆ ಕಾಲೇಜುಗಳಲ್ಲೂ ಪ್ರವೇಶಾತಿ ಹೆಚ್ಚಿದೆ. ಆದರೆ ಅತಿಥಿ ಉಪನ್ಯಾಸಕರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅತಿಥಿ ಉಪನ್ಯಾಸಕರು ಕಡಿಮೆ ವೇತನವನ್ನೇ ಪಡೆಯುತ್ತಿದ್ದಾರೆ” ಎಂದರು.

“ಪರೀಕ್ಷೆ, ಮೌಲ್ಯಮಾಪನ ಕಾರ್ಯಗಳನ್ನೂ ಅತಿಥಿ ಉಪನ್ಯಾಸಕರು ಮಾಡುತ್ತೇವೆ. ಸುಮಾರು 7,500 ಖಾಯಂ ಉದ್ಯೋಗಗಳು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇವೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಂಡರೆ ಬಹಳ ಅನುಕೂಲವಾಗುತ್ತದೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...