Homeಕರ್ನಾಟಕಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರ ಮಾಡಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ. ಒಂದು ದಶಕದಿಂದ ಆಗುತ್ತಿರುವ ಅನ್ಯಾಯಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 10ರಿಂದ ಅನಿರ್ದಿಷ್ಟಾವತಿ ಹೋರಾಟ, ಉಪವಾಸ ಸತ್ಯಾಗ್ರಹ, ತರಗತಿ ಬಹಿಷ್ಕಾರ ಹಾಕಿದ್ದೇವೆ. ಬೆಳಗಾವಿ ಅಧಿವೇಶನದಲ್ಲೂ ಅತಿಥಿ ಉಪನ್ಯಾಸಕರ ಸಮಸ್ಯೆಗಳು ಚರ್ಚೆಗೆ ಕೂಡ ಬಂದಿವೆ. ನಮ್ಮ ಸಮಸ್ಯೆಗಳ ಅರಿವಿದ್ದರೂ ಉನ್ನತ ಶಿಕ್ಷಣ ಸಚಿವರು ನಮ್ಮ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂಬುದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ಧರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಬೇಸರ.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ ಎಂದು ಆರೋಪಿಸಿದ್ದಾರೆ.

ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎನ್ನುತ್ತಾರೆ ಉಪನ್ಯಾಸಕರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಎನ್‌ಇಪಿ ಜಾರಿಗೊಳಿಸಿದ ಬಳಿಕ ವರ್ಕ್‌‌ಲೋಡ್ ಹೆಚ್ಚಾಗಿದೆ. ಶೇ. 100ರಷ್ಟು ಪಿಯುಸಿ ಫಲಿತಾಂಶ ಬಂದಿದ್ದರಿಂದ ರಾಜ್ಯದ ಎಲ್ಲ 430 ಪ್ರಥಮದರ್ಜೆ ಕಾಲೇಜುಗಳಲ್ಲೂ ಪ್ರವೇಶಾತಿ ಹೆಚ್ಚಿದೆ. ಆದರೆ ಅತಿಥಿ ಉಪನ್ಯಾಸಕರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅತಿಥಿ ಉಪನ್ಯಾಸಕರು ಕಡಿಮೆ ವೇತನವನ್ನೇ ಪಡೆಯುತ್ತಿದ್ದಾರೆ” ಎಂದರು.

“ಪರೀಕ್ಷೆ, ಮೌಲ್ಯಮಾಪನ ಕಾರ್ಯಗಳನ್ನೂ ಅತಿಥಿ ಉಪನ್ಯಾಸಕರು ಮಾಡುತ್ತೇವೆ. ಸುಮಾರು 7,500 ಖಾಯಂ ಉದ್ಯೋಗಗಳು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇವೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಂಡರೆ ಬಹಳ ಅನುಕೂಲವಾಗುತ್ತದೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...