Homeಕರ್ನಾಟಕಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರ ಮಾಡಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ. ಒಂದು ದಶಕದಿಂದ ಆಗುತ್ತಿರುವ ಅನ್ಯಾಯಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 10ರಿಂದ ಅನಿರ್ದಿಷ್ಟಾವತಿ ಹೋರಾಟ, ಉಪವಾಸ ಸತ್ಯಾಗ್ರಹ, ತರಗತಿ ಬಹಿಷ್ಕಾರ ಹಾಕಿದ್ದೇವೆ. ಬೆಳಗಾವಿ ಅಧಿವೇಶನದಲ್ಲೂ ಅತಿಥಿ ಉಪನ್ಯಾಸಕರ ಸಮಸ್ಯೆಗಳು ಚರ್ಚೆಗೆ ಕೂಡ ಬಂದಿವೆ. ನಮ್ಮ ಸಮಸ್ಯೆಗಳ ಅರಿವಿದ್ದರೂ ಉನ್ನತ ಶಿಕ್ಷಣ ಸಚಿವರು ನಮ್ಮ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂಬುದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ಧರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಬೇಸರ.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ ಎಂದು ಆರೋಪಿಸಿದ್ದಾರೆ.

ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎನ್ನುತ್ತಾರೆ ಉಪನ್ಯಾಸಕರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಎನ್‌ಇಪಿ ಜಾರಿಗೊಳಿಸಿದ ಬಳಿಕ ವರ್ಕ್‌‌ಲೋಡ್ ಹೆಚ್ಚಾಗಿದೆ. ಶೇ. 100ರಷ್ಟು ಪಿಯುಸಿ ಫಲಿತಾಂಶ ಬಂದಿದ್ದರಿಂದ ರಾಜ್ಯದ ಎಲ್ಲ 430 ಪ್ರಥಮದರ್ಜೆ ಕಾಲೇಜುಗಳಲ್ಲೂ ಪ್ರವೇಶಾತಿ ಹೆಚ್ಚಿದೆ. ಆದರೆ ಅತಿಥಿ ಉಪನ್ಯಾಸಕರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅತಿಥಿ ಉಪನ್ಯಾಸಕರು ಕಡಿಮೆ ವೇತನವನ್ನೇ ಪಡೆಯುತ್ತಿದ್ದಾರೆ” ಎಂದರು.

“ಪರೀಕ್ಷೆ, ಮೌಲ್ಯಮಾಪನ ಕಾರ್ಯಗಳನ್ನೂ ಅತಿಥಿ ಉಪನ್ಯಾಸಕರು ಮಾಡುತ್ತೇವೆ. ಸುಮಾರು 7,500 ಖಾಯಂ ಉದ್ಯೋಗಗಳು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇವೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಂಡರೆ ಬಹಳ ಅನುಕೂಲವಾಗುತ್ತದೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...