Homeಕರ್ನಾಟಕಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರ ಮಾಡಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ. ಒಂದು ದಶಕದಿಂದ ಆಗುತ್ತಿರುವ ಅನ್ಯಾಯಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 10ರಿಂದ ಅನಿರ್ದಿಷ್ಟಾವತಿ ಹೋರಾಟ, ಉಪವಾಸ ಸತ್ಯಾಗ್ರಹ, ತರಗತಿ ಬಹಿಷ್ಕಾರ ಹಾಕಿದ್ದೇವೆ. ಬೆಳಗಾವಿ ಅಧಿವೇಶನದಲ್ಲೂ ಅತಿಥಿ ಉಪನ್ಯಾಸಕರ ಸಮಸ್ಯೆಗಳು ಚರ್ಚೆಗೆ ಕೂಡ ಬಂದಿವೆ. ನಮ್ಮ ಸಮಸ್ಯೆಗಳ ಅರಿವಿದ್ದರೂ ಉನ್ನತ ಶಿಕ್ಷಣ ಸಚಿವರು ನಮ್ಮ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂಬುದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ಧರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಬೇಸರ.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ ಎಂದು ಆರೋಪಿಸಿದ್ದಾರೆ.

ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎನ್ನುತ್ತಾರೆ ಉಪನ್ಯಾಸಕರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಎನ್‌ಇಪಿ ಜಾರಿಗೊಳಿಸಿದ ಬಳಿಕ ವರ್ಕ್‌‌ಲೋಡ್ ಹೆಚ್ಚಾಗಿದೆ. ಶೇ. 100ರಷ್ಟು ಪಿಯುಸಿ ಫಲಿತಾಂಶ ಬಂದಿದ್ದರಿಂದ ರಾಜ್ಯದ ಎಲ್ಲ 430 ಪ್ರಥಮದರ್ಜೆ ಕಾಲೇಜುಗಳಲ್ಲೂ ಪ್ರವೇಶಾತಿ ಹೆಚ್ಚಿದೆ. ಆದರೆ ಅತಿಥಿ ಉಪನ್ಯಾಸಕರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅತಿಥಿ ಉಪನ್ಯಾಸಕರು ಕಡಿಮೆ ವೇತನವನ್ನೇ ಪಡೆಯುತ್ತಿದ್ದಾರೆ” ಎಂದರು.

“ಪರೀಕ್ಷೆ, ಮೌಲ್ಯಮಾಪನ ಕಾರ್ಯಗಳನ್ನೂ ಅತಿಥಿ ಉಪನ್ಯಾಸಕರು ಮಾಡುತ್ತೇವೆ. ಸುಮಾರು 7,500 ಖಾಯಂ ಉದ್ಯೋಗಗಳು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇವೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಂಡರೆ ಬಹಳ ಅನುಕೂಲವಾಗುತ್ತದೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...