Homeಕರ್ನಾಟಕಕೊರೊನಾ ಪರಿಹಾರ ಪ್ಯಾಕೇಜ್‌ಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಆನ್‌ಲೈನ್ ಪ್ರತಿಭಟನೆ

ಕೊರೊನಾ ಪರಿಹಾರ ಪ್ಯಾಕೇಜ್‌ಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಆನ್‌ಲೈನ್ ಪ್ರತಿಭಟನೆ

ಕೊರೊನಾ ಹಿನ್ನೆಲೆ ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಪರಿಹಾರ ಪ್ಯಾಕೇಜ್ ಸೇರಿದಂತೆ ವಿವಿಧ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಕರೆಯ ಮೇರೆಗೆ ಅತಿಥಿ ಉಪನ್ಯಾಸಕರು ರಾಜ್ಯ ವ್ಯಾಪಿ ಆನ್‌ಲೈನ್ ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಉದ್ಯೋಗವಿಲ್ಲದೇ ಇರುವ ಅತಿಥಿ ಉಪನ್ಯಾಸಕರಿಗೆ ‘ಪರಿಹಾರ ಪ್ಯಾಕೇಜ್’ ಘೋಷಣೆ ಮಾಡಬೇಕು. ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಈಗ ನಡೆಯುತ್ತಿರುವ ಆನ್‌ಲೈನ್ ತರಗತಿಗಳಿಗೆ ಈ ಹಿಂದೆ ಕಾರ್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ನಿಯೋಜಿಸಿ, ಸೇವಾಭದ್ರತೆ ಖಾತ್ರಿಪಡಿಸಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.

ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ತಾವಿರುವ ಊರು, ಪಟ್ಟಣ ಹಾಗೂ ನಗರಗಳಲ್ಲಿ ಬೇಡಿಕೆಯ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಸರ್ಕಾರ ತಮ್ಮ ಸಮಸ್ಯೆಯನ್ನು ಪರಿಗಣಿಸಿ ಪರಿಹರಿಸುವಂತೆ ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ಕುರಿತು ಪ್ರಚಾರ ನಡೆಸಿದರು. ಕೆಲವು ಕಡೆಗಳಲ್ಲಿ  ನಿಯೋಗದ ಮೂಲಕ ಜಿಲ್ಲಾ ಮತ್ತು ತಾಲೂಕಿನ ಅಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ರಾಜ್ಯವ್ಯಾಪಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 413 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಲಾಕ್‌ಡೌನ್ ಹಾಗೂ ಹಿಂದಿನ ಸೆಮಿಸ್ಟರ್‌ನಲ್ಲಿ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜಿಸಿದ್ದರಿಂದ, ಸರಿಯಾದ ವೇತನ ಸಿಗದೇ ಸಮಸ್ಯೆಗಳು ಉಲ್ಬಣಗೊಂಡಿವೆ. ಈ ಅವಧಿಯಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ, ಹಲವಾರು ಅತಿಥಿ ಉಪನ್ಯಾಸಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕೊರೊನಾ ಹಿನ್ನೆಲೆ ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಹೊರೆಯ ಜೊತೆಯಲ್ಲಿ ಮಾನಸಿಕ ಒತ್ತಡವೂ ಅವರನ್ನು ತೀವ್ರವಾಗಿ ಕುಗ್ಗಿಸಿದೆ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

2020-21ನೇ ಸಾಲಿನ ಪದವಿ ತರಗತಿಗಳು ಪ್ರಾರಂಭವಾದಾಗ ಇಲಾಖೆ ಕೇವಲ ಶೇ.50ರಷ್ಟು ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜನೆಗೊಳಿಸಿತ್ತು. ನಂತರ ಆಗ್ರಹದ ಮೇರೆಗೆ ಎಲ್ಲರನ್ನೂ ಸೇವೆಗೆ ಸೇರಿಸಿಕೊಂಡಿದೆ. ಪ್ರತಿ ಬಾರಿಯು ನಾವು ನಮ್ಮ ಬೇಡಿಕೆಗಳ ಈಡೇರಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಕೊರೊನಾ ಸಾಂಕ್ರಾಮಿಕ ನಮ್ಮನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಪ್ರಸ್ತುತ ಸೆಮಿಸ್ಟರ್‌ಗಳಿಗೆ ಈ ಹಿಂದೆ ಕಾರ‍್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಗೆ ಸೇರಿಸಿಕೊಳ್ಳಲು ಹಾಗೂ ಆನ್‌ಲೈನ್ ತರಗತಿಗಳನ್ನು ನಡೆಸಲು ಅವರ ಸೇವೆ ಪಡೆಯಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಹಲವಾರು ಅತಿಥಿ ಉಪನ್ಯಾಸಕರನ್ನು ಈವರೆಗೂ ಸೇವೆಗೆ ಸೇರಿಸಿಕೊಂಡಿಲ್ಲ. ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಆದ್ದರಿಂದ ಈ ಕೂಡಲೇ ನಮ್ಮ ಈ  ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅತಿಥಿ ಉಪನ್ಯಾಸಕರು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ರಾಯಚೂರು, ವಿಜಯಪುರ. ಕಲಬುರ್ಗಿ, ಬಳ್ಳಾರಿ, ದಾವಣಗೆರೆ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಬೆಳಗಾವಿ, ರಾಮನಗರ, ಕೊಪ್ಪಳ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಅತಿಥಿ ಉಪನ್ಯಾಸಕರು ತಾವಿರುವ ಸ್ಥಳದಿಂದಲೇ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...