Homeಕರ್ನಾಟಕಕೊರೊನಾ ಪರಿಹಾರ ಪ್ಯಾಕೇಜ್‌ಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಆನ್‌ಲೈನ್ ಪ್ರತಿಭಟನೆ

ಕೊರೊನಾ ಪರಿಹಾರ ಪ್ಯಾಕೇಜ್‌ಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಆನ್‌ಲೈನ್ ಪ್ರತಿಭಟನೆ

ಕೊರೊನಾ ಹಿನ್ನೆಲೆ ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಪರಿಹಾರ ಪ್ಯಾಕೇಜ್ ಸೇರಿದಂತೆ ವಿವಿಧ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಕರೆಯ ಮೇರೆಗೆ ಅತಿಥಿ ಉಪನ್ಯಾಸಕರು ರಾಜ್ಯ ವ್ಯಾಪಿ ಆನ್‌ಲೈನ್ ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಉದ್ಯೋಗವಿಲ್ಲದೇ ಇರುವ ಅತಿಥಿ ಉಪನ್ಯಾಸಕರಿಗೆ ‘ಪರಿಹಾರ ಪ್ಯಾಕೇಜ್’ ಘೋಷಣೆ ಮಾಡಬೇಕು. ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಈಗ ನಡೆಯುತ್ತಿರುವ ಆನ್‌ಲೈನ್ ತರಗತಿಗಳಿಗೆ ಈ ಹಿಂದೆ ಕಾರ್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ನಿಯೋಜಿಸಿ, ಸೇವಾಭದ್ರತೆ ಖಾತ್ರಿಪಡಿಸಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.

ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ತಾವಿರುವ ಊರು, ಪಟ್ಟಣ ಹಾಗೂ ನಗರಗಳಲ್ಲಿ ಬೇಡಿಕೆಯ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಸರ್ಕಾರ ತಮ್ಮ ಸಮಸ್ಯೆಯನ್ನು ಪರಿಗಣಿಸಿ ಪರಿಹರಿಸುವಂತೆ ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ಕುರಿತು ಪ್ರಚಾರ ನಡೆಸಿದರು. ಕೆಲವು ಕಡೆಗಳಲ್ಲಿ  ನಿಯೋಗದ ಮೂಲಕ ಜಿಲ್ಲಾ ಮತ್ತು ತಾಲೂಕಿನ ಅಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ರಾಜ್ಯವ್ಯಾಪಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 413 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಲಾಕ್‌ಡೌನ್ ಹಾಗೂ ಹಿಂದಿನ ಸೆಮಿಸ್ಟರ್‌ನಲ್ಲಿ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜಿಸಿದ್ದರಿಂದ, ಸರಿಯಾದ ವೇತನ ಸಿಗದೇ ಸಮಸ್ಯೆಗಳು ಉಲ್ಬಣಗೊಂಡಿವೆ. ಈ ಅವಧಿಯಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ, ಹಲವಾರು ಅತಿಥಿ ಉಪನ್ಯಾಸಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕೊರೊನಾ ಹಿನ್ನೆಲೆ ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಹೊರೆಯ ಜೊತೆಯಲ್ಲಿ ಮಾನಸಿಕ ಒತ್ತಡವೂ ಅವರನ್ನು ತೀವ್ರವಾಗಿ ಕುಗ್ಗಿಸಿದೆ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

2020-21ನೇ ಸಾಲಿನ ಪದವಿ ತರಗತಿಗಳು ಪ್ರಾರಂಭವಾದಾಗ ಇಲಾಖೆ ಕೇವಲ ಶೇ.50ರಷ್ಟು ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜನೆಗೊಳಿಸಿತ್ತು. ನಂತರ ಆಗ್ರಹದ ಮೇರೆಗೆ ಎಲ್ಲರನ್ನೂ ಸೇವೆಗೆ ಸೇರಿಸಿಕೊಂಡಿದೆ. ಪ್ರತಿ ಬಾರಿಯು ನಾವು ನಮ್ಮ ಬೇಡಿಕೆಗಳ ಈಡೇರಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಕೊರೊನಾ ಸಾಂಕ್ರಾಮಿಕ ನಮ್ಮನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಪ್ರಸ್ತುತ ಸೆಮಿಸ್ಟರ್‌ಗಳಿಗೆ ಈ ಹಿಂದೆ ಕಾರ‍್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಗೆ ಸೇರಿಸಿಕೊಳ್ಳಲು ಹಾಗೂ ಆನ್‌ಲೈನ್ ತರಗತಿಗಳನ್ನು ನಡೆಸಲು ಅವರ ಸೇವೆ ಪಡೆಯಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಹಲವಾರು ಅತಿಥಿ ಉಪನ್ಯಾಸಕರನ್ನು ಈವರೆಗೂ ಸೇವೆಗೆ ಸೇರಿಸಿಕೊಂಡಿಲ್ಲ. ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಆದ್ದರಿಂದ ಈ ಕೂಡಲೇ ನಮ್ಮ ಈ  ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅತಿಥಿ ಉಪನ್ಯಾಸಕರು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ರಾಯಚೂರು, ವಿಜಯಪುರ. ಕಲಬುರ್ಗಿ, ಬಳ್ಳಾರಿ, ದಾವಣಗೆರೆ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಬೆಳಗಾವಿ, ರಾಮನಗರ, ಕೊಪ್ಪಳ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಅತಿಥಿ ಉಪನ್ಯಾಸಕರು ತಾವಿರುವ ಸ್ಥಳದಿಂದಲೇ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...