Homeಮುಖಪುಟಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಖಾಯಂ ನೇಮಕಾತಿಗೆ ಆಗ್ರಹಿಸಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು (ಜ.5) ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅತಿಥಿ ಉಪನ್ಯಾಸಕರು ನೇಮಕಾತಿ ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ, ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿಗೆ ಒತ್ತಾಯಿಸಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಸಿ&ಆರ್ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸುವಂತೆ ಕೋರಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ನಮಗೆ ಸೇವಾ ಭದ್ರತೆ ಕೊಡುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೂಡ ಖಾಯಂ ನೇಮಕಾತಿಯ ಭರವಸೆ ನೀಡಿತ್ತು. ಈಗ ಕೇಳಿದರೆ ಕಾನೂನು ತೊಡಕಿನ ಸಬೂಬು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಧರಣಿ ನಿರತ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಪರ್ಯಾಯ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಬೇಡ, ನಮಗೆ ಸೇವಾ ಭದ್ರತೆ ಕೊಡಿ. ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಡ, ಅದನ್ನು ನಾವು ಕೇಳಿಲ್ಲ. ನಮಗೆ ಸೇವಾ ಭದ್ರತೆ ಕಲ್ಪಿಸಿ ಎಂದು ಆಗ್ರಹಿಸಿದರು.

ಖಾಯಂ ನೇಮಕಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು

“ನೇಮಕಾತಿ ಖಾಯಮಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.ನಮಗೆ ಸೇವಾ ಭದ್ರತೆ ಕೊಡಿ.
ಸರ್ಕಾರ ನಾವು ಕೇಳದೆ ಇರುವ ಪರ್ಯಾಯ ಸೌಲಭ್ಯ ಕೊಡುತ್ತಿದೆ. 60 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಳಿಕ ಈಡಗಂಟು ಕೊಡ್ತೀವಿ, ಐದು ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ಈ ವರ್ಷ ಸೇವೆಯಲ್ಲಿದ್ದವರು ಮುಂದಿನ ವರ್ಷ ಸೇವೆಯಲ್ಲಿ ಇರುತ್ತೇವೆ ಎಂಬ ಗ್ಯಾರಂಟಿಯಿಲ್ಲ. ಸೇವಾ ಭದ್ರತೆ ಇಲ್ಲದ ಮೇಲೆ 60 ವರ್ಷದ ಬಳಿಕದ ಈಡಗಂಟು ಯಾರಿಗೆ ಸಿಗುತ್ತೆ? ಜೀವ ವಿಮೆ ಕೊಡುತ್ತೇವೆ ಎನ್ನುತ್ತಿದ್ದಾರೆ. ನಾವು ಸೇವೆಯಲ್ಲಿ ಮುಂದುವರೆದರೆ ತಾನೆ ಜೀವ ವಿಮೆ ಕೊಡುವುದು. ಹಾಗಾಗಿ ಅದು ಕೂಡ ನಮಗೆ ಧಕ್ಕದೇ ಇರುವಂತದ್ದು. 5 ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ವೇತನ ಹೆಚ್ಚಳ ಕೇಳುತ್ತಿಲ್ಲ, ನಾವು ಕೇಳಿದ್ದು ಸೇವಾ ಭದ್ರತೆ. ಉನ್ನತ ಶಿಕ್ಷಣ ಸಚಿವರು ನಾವು ಕೇಳದ ಆಶ್ವಾಸನೆ ಕೊಟ್ಟು ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಂಧನೂರಿನ ಅತಿಥಿ ಉಪನ್ಯಾಸಕ ಶಂಕರ್ ಗುರಿಕಾರ್ ಹೇಳಿದರು.

ಬೆಳಗಾವಿ ಅಧಿವೇಶನ ಸಮಯದಲ್ಲಿ ನಾವು ಖಾಯಂ ನೇಮಕಾತಿ ಕೇಳಿದ್ದೆವು. ಆಗ ಉನ್ನತ ಶಿಕ್ಷಣ ಸಚಿವರು ಕಾನೂನು ತೊಡಕಿದೆ. ಉಮಾದೇವಿ ಪ್ರಕರಣ ಅಡ್ಡ ಬರುತ್ತಿದೆ ಎಂದಿದ್ದರು. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಸರ್ಕಾರಕ್ಕೆ ಪತ್ರ ಬರೆದು, ಸಿ &ಆರ್‌ ನಿಯಮಾವಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ಖಾಯಮಾತಿ ನೀಡುವಂತೆ ಆಗ್ರಹಿಸಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಅವರು ತಮ್ಮ ಮಾತು ಮರೆತಿದ್ದಾರೆ. ಜನವರಿ 1 ರಿಂದ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಬಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತು ಮೂರು ದಿನಗಳಾಯಿತು. ಉಪನ್ಯಾಸಕರು ಅಮರಣಾಂತ ಉಪವಾಸ ಕುಳಿತಿದ್ದಾರೆ. ಅವರನ್ನು ಸೌಜನ್ಯಕ್ಕಾದರು ಮಾತನಾಡಿಸಲು ಮುಖ್ಯಮಂತ್ರಿಗಳಾಲಿ, ಉನ್ನತ ಶಿಕ್ಷಣ ಸಚಿವರಾಗಲಿ ಅಥವಾ ಸರ್ಕಾರದ ಕಾರ್ಯದರ್ಶಿಗಳಾಗಲಿ ಬಂದಿಲ್ಲ. ಇವತ್ತೂ ಕೂಡ ಸರ್ಕಾರ ನಮ್ಮ ಅಳಲು ಕೇಳದಿದ್ದರೆ ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಮುಂದೆ ಏನಾದರು ಅನಾಹುತಗಳಾದರೆ ಅದಕ್ಕೆ ಸರ್ಕಾರಕ್ಕೆ ನೇರ ಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ

ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿ, ಹುಬ್ಬಳ್ಳಿಯ ಅತಿಥಿ ಉಪನ್ಯಾಸಕಿ ಡಾ. ನಯನ ಸೋಮಣ್ಣನವರ್ ಮಾತನಾಡಿ, “ನಮ್ಮ ಹೋರಾಟ ಪ್ರಾರಂಭಗೊಂಡು 44 ದಿನಗಳಾಯಿತು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಧರಣಿ ಕುಳಿತಿದ್ದೇವೆ.
ಪ್ರತಿ ವರ್ಷ ಕೌನ್ಸಿಲಿಂಗ್ ಮಾಡ್ತಾರೆ, ಪ್ರತಿ ವರ್ಷ ಆಯ್ಕೆ ಮಾಡ್ತಾರೆ. ನಮಗೆ ಯಾವ ಕಾಲೇಜು ಸಿಗುತ್ತದೆ ಎಂದು ಗೊತ್ತಿರುವುದಿಲ್ಲ. ಪ್ರಸ್ತುತ ನಾವು 5-6 ಗಂಟೆಗಳ ಕಾಲ ಪ್ರಯಾಣ ಮಾಡಿ ಕಾಲೇಜಿಗೆ ತೆರಳುತ್ತಿದ್ದೇವೆ. ಇದರಿಂದ ಮಹಿಳೆಯರಾದ ನಮಗೆ ಆರೋಗ್ಯ ಹದೆಗೆಡುತ್ತಿದೆ. ಕಾಲೇಜು ಬಳಿಯೇ ಮನೆ ಮಾಡೋಣ ಎಂದರೆ ನಮಗೆ ಸೇವಾ ಭದ್ರತೆ ಇಲ್ಲ. ಮುಂದಿನ ವರ್ಷ ನಮ್ಮನ್ನು ಬೇರೆ ಕಾಲೇಜಿಗೆ ಹಾಕಿದರೆ ಅಲ್ಲಿ ಮನೆ ಮಾಡಬೇಕಾಗುತ್ತದೆ. ಉನ್ನತ ಶಿಕ್ಷಣ ಸಚಿವರು ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ವೇತನ ಹೆಚ್ಚಳ ಮಾಡಿರುವುದನ್ನು ಪಡೆದುಕೊಳ್ಳಲು ನಮಗೆ ಕಲಸದ ಖಾತ್ರಿಯಿಲ್ಲ. ಮುಂದಿನ ವರ್ಷ ನಮ್ಮ ಕೆಲಸ ಹೋದರೂ ಹೊಯಿತು. ಸರ್ಕಾರದಿಂದ ಹೊಸ ನೇಮಕಾತಿಯಾದರೆ, ಡೆಪ್ಯುಟೇಷನ್ ಉಪನ್ಯಾಸಕರು ಬಂದರೆ ನಾವು ಕೆಲಸ ಕಳೆದುಕೊಳ್ಳುತ್ತೇವೆ. ಹೀಗಾದರೆ ನಮ್ಮನ್ನೇ ನಂಬಿರುವ ಕುಟುಂಬದ ಗತಿಯೇನು? ಎಂದು ಪ್ರಶ್ನಿಸಿದರು.

ಪ್ರಸ್ತುತ ಇರುವ ವೇತನ ಕೂಡ ಸರಿಯಾಗಿ ಬರುತ್ತಿಲ್ಲ. ಕಳೆದ ತಿಂಗಳ ವೇತನ ಇನ್ನೂ ಬಂದಿಲ್ಲ. ಎಷ್ಟೋ ಜನ ಉಪನ್ಯಾಸಕರು ಇಲ್ಲಿಗೆ ಬಂದಿಲ್ಲ. ಯಾಕೆಂದರೆ ಅವರತ್ರ ಬರಲು ದುಡ್ಡಿಲ್ಲ. 25-30 ಜನ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಕನಿಷ್ಠ ಪಕ್ಷ ಅವರನ್ನು ನೋಡಲೂ ಯಾರೂ ಬಂದಿಲ್ಲ. ಹಾಗಾದರೆ ನಮ್ಮ ಜೀವಕ್ಕೆ ಬೆಲೆ ಇಲ್ಲವೇ? ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ ಎಂದು ಅಳಲು ತೋಡಿಕೊಂಡರು.

ಸಿದ್ದರಾಮಯ್ಯನವರು ನಿರುದ್ಯೋಗ ಭಾಗ್ಯ ಕೊಡಲಿ 

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಗದಗದ ಅತಿಥಿ ಉಪನ್ಯಾಸಕಿ ಡಾ. ಸುಜಾತ ಎಸ್ ಬರಗೂರು ಮಾತನಾಡಿ, ಉನ್ನತ ಶಿಕ್ಷಣ ಸಚಿವರು ನಮಗೆ ನಾಲ್ಕು ಭರವಸೆಗಳನ್ನು ಕೊಟ್ಟಿದ್ದಾರೆ. ಈ ಪೈಕಿ ನಾವು ನಿವೃತ್ತಿ ಹೊಂದಿದ ಬಳಿಕ ಐದು ಲಕ್ಷ ರೂಪಾಯಿ ಕೊಡೋದು ಒಂದು. ಸಚಿವರು ಹೇಳಿದಂತೆ ನಾವು ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಬಳಿಕ ವರ್ಷಕ್ಕೆ 50 ಸಾವಿರದಂತೆ 10 ವರ್ಷ ದುಡ್ಡು ಸಿಗಲಿದೆ. ಈ ನಿಯಮ ಒಪ್ಪಿಕೊಂಡರೆ ಈಗಾಗಲೇ 40-45 ವರ್ಷ ಸೇವೆ ಸಲ್ಲಿಸಿದವರಿಗೆ ಯಾವ ಲಾಭವೂ ಇಲ್ಲ. ಪ್ರಸ್ತುತ 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರು ಕೂಡ 10 ವರ್ಷ ಪೂರೈಸಿದ ಬಳಿಕವಷ್ಟೇ ಈ ಸೌಲಭ್ಯ ಸಿಗಲಿದೆ. ಇದರಿಂದ ಎಲ್ಲರಿಗೆ ಸಮಾನ ನ್ಯಾಯ ಸಿಗುವುದಿಲ್ಲ ಎಂದರು.

ಪರೀಕ್ಷೆ ಬರೆಯುವ ಬರೆಯುವ ವೇಳೆ ಕೃಪಾಂಕ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದಾರೆ. ವಯೋಮಿತಿ ಮೀರಿದವರಿಗೆ ಪರೀಕ್ಷೆ ಬರೆಯಲು ಅವಕಾಶವೇ ಇಲ್ಲ. ಇನ್ನೆಲ್ಲಿಂದ ಕೃಪಾಂಕ? ಸಚಿವರು ಕೊಟ್ಟ ನಾಲ್ಕೂ ಭರವಸೆಗಳು ಯಾವುದೇ ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡುವುದಿಲ್ಲ. ಈ ಕಾರಣಕ್ಕೆ ನಾವು ಅದನ್ನು ತಿರಸ್ಕರಿಸಿದ್ದೇವೆ. ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಸೇವಾ ಭದ್ರತೆಯ ಗ್ಯಾರಂಟಿಯನ್ನೂ ಕೊಡಲಿ. ಅದು ಆಗುವುದಿಲ್ಲ ಎಂದರೆ ನಿರುದ್ಯೋಗ ಭಾಗ್ಯ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಕೈಗೊಂಡ ಅತಿಥಿ ಉಪನ್ಯಾಸಕರು, ಸುಮಾರು 80 ಕಿ.ಮೀ ನಡೆದು ಜನವರಿ 3ರಂದು ಬೆಂಗಳೂರು ತಲುಪಿದ್ದಾರೆ. ಈ ನಡುವೆ ಪೊಲೀಸರು ಅವರನ್ನು ತಡೆದ ಪ್ರಸಂಗವೂ ನಡೆದಿದೆ. ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದಾರೆ. ಈ ಪೈಕಿ ಸುಮಾರು 25-30 ಜನರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಲೋಕ ಅಖಾಡ: ಮತ್ತೆ ಬಂಗಾರಪ್ಪ-ಯಡಿಯೂರಪ್ಪ ಕುಟುಂಬ ಪ್ರತಿಷ್ಠೆಯ ಕದನ ಕುತೂಹಲ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...