Homeಮುಖಪುಟಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಖಾಯಂ ನೇಮಕಾತಿಗೆ ಆಗ್ರಹಿಸಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು (ಜ.5) ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅತಿಥಿ ಉಪನ್ಯಾಸಕರು ನೇಮಕಾತಿ ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ, ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿಗೆ ಒತ್ತಾಯಿಸಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಸಿ&ಆರ್ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸುವಂತೆ ಕೋರಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ನಮಗೆ ಸೇವಾ ಭದ್ರತೆ ಕೊಡುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೂಡ ಖಾಯಂ ನೇಮಕಾತಿಯ ಭರವಸೆ ನೀಡಿತ್ತು. ಈಗ ಕೇಳಿದರೆ ಕಾನೂನು ತೊಡಕಿನ ಸಬೂಬು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಧರಣಿ ನಿರತ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಪರ್ಯಾಯ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಬೇಡ, ನಮಗೆ ಸೇವಾ ಭದ್ರತೆ ಕೊಡಿ. ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಡ, ಅದನ್ನು ನಾವು ಕೇಳಿಲ್ಲ. ನಮಗೆ ಸೇವಾ ಭದ್ರತೆ ಕಲ್ಪಿಸಿ ಎಂದು ಆಗ್ರಹಿಸಿದರು.

ಖಾಯಂ ನೇಮಕಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು

“ನೇಮಕಾತಿ ಖಾಯಮಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.ನಮಗೆ ಸೇವಾ ಭದ್ರತೆ ಕೊಡಿ.
ಸರ್ಕಾರ ನಾವು ಕೇಳದೆ ಇರುವ ಪರ್ಯಾಯ ಸೌಲಭ್ಯ ಕೊಡುತ್ತಿದೆ. 60 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಳಿಕ ಈಡಗಂಟು ಕೊಡ್ತೀವಿ, ಐದು ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ಈ ವರ್ಷ ಸೇವೆಯಲ್ಲಿದ್ದವರು ಮುಂದಿನ ವರ್ಷ ಸೇವೆಯಲ್ಲಿ ಇರುತ್ತೇವೆ ಎಂಬ ಗ್ಯಾರಂಟಿಯಿಲ್ಲ. ಸೇವಾ ಭದ್ರತೆ ಇಲ್ಲದ ಮೇಲೆ 60 ವರ್ಷದ ಬಳಿಕದ ಈಡಗಂಟು ಯಾರಿಗೆ ಸಿಗುತ್ತೆ? ಜೀವ ವಿಮೆ ಕೊಡುತ್ತೇವೆ ಎನ್ನುತ್ತಿದ್ದಾರೆ. ನಾವು ಸೇವೆಯಲ್ಲಿ ಮುಂದುವರೆದರೆ ತಾನೆ ಜೀವ ವಿಮೆ ಕೊಡುವುದು. ಹಾಗಾಗಿ ಅದು ಕೂಡ ನಮಗೆ ಧಕ್ಕದೇ ಇರುವಂತದ್ದು. 5 ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ವೇತನ ಹೆಚ್ಚಳ ಕೇಳುತ್ತಿಲ್ಲ, ನಾವು ಕೇಳಿದ್ದು ಸೇವಾ ಭದ್ರತೆ. ಉನ್ನತ ಶಿಕ್ಷಣ ಸಚಿವರು ನಾವು ಕೇಳದ ಆಶ್ವಾಸನೆ ಕೊಟ್ಟು ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಂಧನೂರಿನ ಅತಿಥಿ ಉಪನ್ಯಾಸಕ ಶಂಕರ್ ಗುರಿಕಾರ್ ಹೇಳಿದರು.

ಬೆಳಗಾವಿ ಅಧಿವೇಶನ ಸಮಯದಲ್ಲಿ ನಾವು ಖಾಯಂ ನೇಮಕಾತಿ ಕೇಳಿದ್ದೆವು. ಆಗ ಉನ್ನತ ಶಿಕ್ಷಣ ಸಚಿವರು ಕಾನೂನು ತೊಡಕಿದೆ. ಉಮಾದೇವಿ ಪ್ರಕರಣ ಅಡ್ಡ ಬರುತ್ತಿದೆ ಎಂದಿದ್ದರು. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಸರ್ಕಾರಕ್ಕೆ ಪತ್ರ ಬರೆದು, ಸಿ &ಆರ್‌ ನಿಯಮಾವಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ಖಾಯಮಾತಿ ನೀಡುವಂತೆ ಆಗ್ರಹಿಸಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಅವರು ತಮ್ಮ ಮಾತು ಮರೆತಿದ್ದಾರೆ. ಜನವರಿ 1 ರಿಂದ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಬಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತು ಮೂರು ದಿನಗಳಾಯಿತು. ಉಪನ್ಯಾಸಕರು ಅಮರಣಾಂತ ಉಪವಾಸ ಕುಳಿತಿದ್ದಾರೆ. ಅವರನ್ನು ಸೌಜನ್ಯಕ್ಕಾದರು ಮಾತನಾಡಿಸಲು ಮುಖ್ಯಮಂತ್ರಿಗಳಾಲಿ, ಉನ್ನತ ಶಿಕ್ಷಣ ಸಚಿವರಾಗಲಿ ಅಥವಾ ಸರ್ಕಾರದ ಕಾರ್ಯದರ್ಶಿಗಳಾಗಲಿ ಬಂದಿಲ್ಲ. ಇವತ್ತೂ ಕೂಡ ಸರ್ಕಾರ ನಮ್ಮ ಅಳಲು ಕೇಳದಿದ್ದರೆ ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಮುಂದೆ ಏನಾದರು ಅನಾಹುತಗಳಾದರೆ ಅದಕ್ಕೆ ಸರ್ಕಾರಕ್ಕೆ ನೇರ ಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ

ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿ, ಹುಬ್ಬಳ್ಳಿಯ ಅತಿಥಿ ಉಪನ್ಯಾಸಕಿ ಡಾ. ನಯನ ಸೋಮಣ್ಣನವರ್ ಮಾತನಾಡಿ, “ನಮ್ಮ ಹೋರಾಟ ಪ್ರಾರಂಭಗೊಂಡು 44 ದಿನಗಳಾಯಿತು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಧರಣಿ ಕುಳಿತಿದ್ದೇವೆ.
ಪ್ರತಿ ವರ್ಷ ಕೌನ್ಸಿಲಿಂಗ್ ಮಾಡ್ತಾರೆ, ಪ್ರತಿ ವರ್ಷ ಆಯ್ಕೆ ಮಾಡ್ತಾರೆ. ನಮಗೆ ಯಾವ ಕಾಲೇಜು ಸಿಗುತ್ತದೆ ಎಂದು ಗೊತ್ತಿರುವುದಿಲ್ಲ. ಪ್ರಸ್ತುತ ನಾವು 5-6 ಗಂಟೆಗಳ ಕಾಲ ಪ್ರಯಾಣ ಮಾಡಿ ಕಾಲೇಜಿಗೆ ತೆರಳುತ್ತಿದ್ದೇವೆ. ಇದರಿಂದ ಮಹಿಳೆಯರಾದ ನಮಗೆ ಆರೋಗ್ಯ ಹದೆಗೆಡುತ್ತಿದೆ. ಕಾಲೇಜು ಬಳಿಯೇ ಮನೆ ಮಾಡೋಣ ಎಂದರೆ ನಮಗೆ ಸೇವಾ ಭದ್ರತೆ ಇಲ್ಲ. ಮುಂದಿನ ವರ್ಷ ನಮ್ಮನ್ನು ಬೇರೆ ಕಾಲೇಜಿಗೆ ಹಾಕಿದರೆ ಅಲ್ಲಿ ಮನೆ ಮಾಡಬೇಕಾಗುತ್ತದೆ. ಉನ್ನತ ಶಿಕ್ಷಣ ಸಚಿವರು ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ವೇತನ ಹೆಚ್ಚಳ ಮಾಡಿರುವುದನ್ನು ಪಡೆದುಕೊಳ್ಳಲು ನಮಗೆ ಕಲಸದ ಖಾತ್ರಿಯಿಲ್ಲ. ಮುಂದಿನ ವರ್ಷ ನಮ್ಮ ಕೆಲಸ ಹೋದರೂ ಹೊಯಿತು. ಸರ್ಕಾರದಿಂದ ಹೊಸ ನೇಮಕಾತಿಯಾದರೆ, ಡೆಪ್ಯುಟೇಷನ್ ಉಪನ್ಯಾಸಕರು ಬಂದರೆ ನಾವು ಕೆಲಸ ಕಳೆದುಕೊಳ್ಳುತ್ತೇವೆ. ಹೀಗಾದರೆ ನಮ್ಮನ್ನೇ ನಂಬಿರುವ ಕುಟುಂಬದ ಗತಿಯೇನು? ಎಂದು ಪ್ರಶ್ನಿಸಿದರು.

ಪ್ರಸ್ತುತ ಇರುವ ವೇತನ ಕೂಡ ಸರಿಯಾಗಿ ಬರುತ್ತಿಲ್ಲ. ಕಳೆದ ತಿಂಗಳ ವೇತನ ಇನ್ನೂ ಬಂದಿಲ್ಲ. ಎಷ್ಟೋ ಜನ ಉಪನ್ಯಾಸಕರು ಇಲ್ಲಿಗೆ ಬಂದಿಲ್ಲ. ಯಾಕೆಂದರೆ ಅವರತ್ರ ಬರಲು ದುಡ್ಡಿಲ್ಲ. 25-30 ಜನ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಕನಿಷ್ಠ ಪಕ್ಷ ಅವರನ್ನು ನೋಡಲೂ ಯಾರೂ ಬಂದಿಲ್ಲ. ಹಾಗಾದರೆ ನಮ್ಮ ಜೀವಕ್ಕೆ ಬೆಲೆ ಇಲ್ಲವೇ? ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ ಎಂದು ಅಳಲು ತೋಡಿಕೊಂಡರು.

ಸಿದ್ದರಾಮಯ್ಯನವರು ನಿರುದ್ಯೋಗ ಭಾಗ್ಯ ಕೊಡಲಿ 

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಗದಗದ ಅತಿಥಿ ಉಪನ್ಯಾಸಕಿ ಡಾ. ಸುಜಾತ ಎಸ್ ಬರಗೂರು ಮಾತನಾಡಿ, ಉನ್ನತ ಶಿಕ್ಷಣ ಸಚಿವರು ನಮಗೆ ನಾಲ್ಕು ಭರವಸೆಗಳನ್ನು ಕೊಟ್ಟಿದ್ದಾರೆ. ಈ ಪೈಕಿ ನಾವು ನಿವೃತ್ತಿ ಹೊಂದಿದ ಬಳಿಕ ಐದು ಲಕ್ಷ ರೂಪಾಯಿ ಕೊಡೋದು ಒಂದು. ಸಚಿವರು ಹೇಳಿದಂತೆ ನಾವು ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಬಳಿಕ ವರ್ಷಕ್ಕೆ 50 ಸಾವಿರದಂತೆ 10 ವರ್ಷ ದುಡ್ಡು ಸಿಗಲಿದೆ. ಈ ನಿಯಮ ಒಪ್ಪಿಕೊಂಡರೆ ಈಗಾಗಲೇ 40-45 ವರ್ಷ ಸೇವೆ ಸಲ್ಲಿಸಿದವರಿಗೆ ಯಾವ ಲಾಭವೂ ಇಲ್ಲ. ಪ್ರಸ್ತುತ 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರು ಕೂಡ 10 ವರ್ಷ ಪೂರೈಸಿದ ಬಳಿಕವಷ್ಟೇ ಈ ಸೌಲಭ್ಯ ಸಿಗಲಿದೆ. ಇದರಿಂದ ಎಲ್ಲರಿಗೆ ಸಮಾನ ನ್ಯಾಯ ಸಿಗುವುದಿಲ್ಲ ಎಂದರು.

ಪರೀಕ್ಷೆ ಬರೆಯುವ ಬರೆಯುವ ವೇಳೆ ಕೃಪಾಂಕ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದಾರೆ. ವಯೋಮಿತಿ ಮೀರಿದವರಿಗೆ ಪರೀಕ್ಷೆ ಬರೆಯಲು ಅವಕಾಶವೇ ಇಲ್ಲ. ಇನ್ನೆಲ್ಲಿಂದ ಕೃಪಾಂಕ? ಸಚಿವರು ಕೊಟ್ಟ ನಾಲ್ಕೂ ಭರವಸೆಗಳು ಯಾವುದೇ ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡುವುದಿಲ್ಲ. ಈ ಕಾರಣಕ್ಕೆ ನಾವು ಅದನ್ನು ತಿರಸ್ಕರಿಸಿದ್ದೇವೆ. ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಸೇವಾ ಭದ್ರತೆಯ ಗ್ಯಾರಂಟಿಯನ್ನೂ ಕೊಡಲಿ. ಅದು ಆಗುವುದಿಲ್ಲ ಎಂದರೆ ನಿರುದ್ಯೋಗ ಭಾಗ್ಯ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಕೈಗೊಂಡ ಅತಿಥಿ ಉಪನ್ಯಾಸಕರು, ಸುಮಾರು 80 ಕಿ.ಮೀ ನಡೆದು ಜನವರಿ 3ರಂದು ಬೆಂಗಳೂರು ತಲುಪಿದ್ದಾರೆ. ಈ ನಡುವೆ ಪೊಲೀಸರು ಅವರನ್ನು ತಡೆದ ಪ್ರಸಂಗವೂ ನಡೆದಿದೆ. ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದಾರೆ. ಈ ಪೈಕಿ ಸುಮಾರು 25-30 ಜನರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಲೋಕ ಅಖಾಡ: ಮತ್ತೆ ಬಂಗಾರಪ್ಪ-ಯಡಿಯೂರಪ್ಪ ಕುಟುಂಬ ಪ್ರತಿಷ್ಠೆಯ ಕದನ ಕುತೂಹಲ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...