Homeಮುಖಪುಟಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಖಾಯಂ ನೇಮಕಾತಿಗೆ ಆಗ್ರಹಿಸಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು (ಜ.5) ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅತಿಥಿ ಉಪನ್ಯಾಸಕರು ನೇಮಕಾತಿ ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ, ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿಗೆ ಒತ್ತಾಯಿಸಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಸಿ&ಆರ್ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸುವಂತೆ ಕೋರಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ನಮಗೆ ಸೇವಾ ಭದ್ರತೆ ಕೊಡುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೂಡ ಖಾಯಂ ನೇಮಕಾತಿಯ ಭರವಸೆ ನೀಡಿತ್ತು. ಈಗ ಕೇಳಿದರೆ ಕಾನೂನು ತೊಡಕಿನ ಸಬೂಬು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಧರಣಿ ನಿರತ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಪರ್ಯಾಯ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಬೇಡ, ನಮಗೆ ಸೇವಾ ಭದ್ರತೆ ಕೊಡಿ. ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಡ, ಅದನ್ನು ನಾವು ಕೇಳಿಲ್ಲ. ನಮಗೆ ಸೇವಾ ಭದ್ರತೆ ಕಲ್ಪಿಸಿ ಎಂದು ಆಗ್ರಹಿಸಿದರು.

ಖಾಯಂ ನೇಮಕಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು

“ನೇಮಕಾತಿ ಖಾಯಮಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.ನಮಗೆ ಸೇವಾ ಭದ್ರತೆ ಕೊಡಿ.
ಸರ್ಕಾರ ನಾವು ಕೇಳದೆ ಇರುವ ಪರ್ಯಾಯ ಸೌಲಭ್ಯ ಕೊಡುತ್ತಿದೆ. 60 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಳಿಕ ಈಡಗಂಟು ಕೊಡ್ತೀವಿ, ಐದು ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ಈ ವರ್ಷ ಸೇವೆಯಲ್ಲಿದ್ದವರು ಮುಂದಿನ ವರ್ಷ ಸೇವೆಯಲ್ಲಿ ಇರುತ್ತೇವೆ ಎಂಬ ಗ್ಯಾರಂಟಿಯಿಲ್ಲ. ಸೇವಾ ಭದ್ರತೆ ಇಲ್ಲದ ಮೇಲೆ 60 ವರ್ಷದ ಬಳಿಕದ ಈಡಗಂಟು ಯಾರಿಗೆ ಸಿಗುತ್ತೆ? ಜೀವ ವಿಮೆ ಕೊಡುತ್ತೇವೆ ಎನ್ನುತ್ತಿದ್ದಾರೆ. ನಾವು ಸೇವೆಯಲ್ಲಿ ಮುಂದುವರೆದರೆ ತಾನೆ ಜೀವ ವಿಮೆ ಕೊಡುವುದು. ಹಾಗಾಗಿ ಅದು ಕೂಡ ನಮಗೆ ಧಕ್ಕದೇ ಇರುವಂತದ್ದು. 5 ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ವೇತನ ಹೆಚ್ಚಳ ಕೇಳುತ್ತಿಲ್ಲ, ನಾವು ಕೇಳಿದ್ದು ಸೇವಾ ಭದ್ರತೆ. ಉನ್ನತ ಶಿಕ್ಷಣ ಸಚಿವರು ನಾವು ಕೇಳದ ಆಶ್ವಾಸನೆ ಕೊಟ್ಟು ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಂಧನೂರಿನ ಅತಿಥಿ ಉಪನ್ಯಾಸಕ ಶಂಕರ್ ಗುರಿಕಾರ್ ಹೇಳಿದರು.

ಬೆಳಗಾವಿ ಅಧಿವೇಶನ ಸಮಯದಲ್ಲಿ ನಾವು ಖಾಯಂ ನೇಮಕಾತಿ ಕೇಳಿದ್ದೆವು. ಆಗ ಉನ್ನತ ಶಿಕ್ಷಣ ಸಚಿವರು ಕಾನೂನು ತೊಡಕಿದೆ. ಉಮಾದೇವಿ ಪ್ರಕರಣ ಅಡ್ಡ ಬರುತ್ತಿದೆ ಎಂದಿದ್ದರು. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಸರ್ಕಾರಕ್ಕೆ ಪತ್ರ ಬರೆದು, ಸಿ &ಆರ್‌ ನಿಯಮಾವಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ಖಾಯಮಾತಿ ನೀಡುವಂತೆ ಆಗ್ರಹಿಸಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಅವರು ತಮ್ಮ ಮಾತು ಮರೆತಿದ್ದಾರೆ. ಜನವರಿ 1 ರಿಂದ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಬಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತು ಮೂರು ದಿನಗಳಾಯಿತು. ಉಪನ್ಯಾಸಕರು ಅಮರಣಾಂತ ಉಪವಾಸ ಕುಳಿತಿದ್ದಾರೆ. ಅವರನ್ನು ಸೌಜನ್ಯಕ್ಕಾದರು ಮಾತನಾಡಿಸಲು ಮುಖ್ಯಮಂತ್ರಿಗಳಾಲಿ, ಉನ್ನತ ಶಿಕ್ಷಣ ಸಚಿವರಾಗಲಿ ಅಥವಾ ಸರ್ಕಾರದ ಕಾರ್ಯದರ್ಶಿಗಳಾಗಲಿ ಬಂದಿಲ್ಲ. ಇವತ್ತೂ ಕೂಡ ಸರ್ಕಾರ ನಮ್ಮ ಅಳಲು ಕೇಳದಿದ್ದರೆ ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಮುಂದೆ ಏನಾದರು ಅನಾಹುತಗಳಾದರೆ ಅದಕ್ಕೆ ಸರ್ಕಾರಕ್ಕೆ ನೇರ ಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ

ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿ, ಹುಬ್ಬಳ್ಳಿಯ ಅತಿಥಿ ಉಪನ್ಯಾಸಕಿ ಡಾ. ನಯನ ಸೋಮಣ್ಣನವರ್ ಮಾತನಾಡಿ, “ನಮ್ಮ ಹೋರಾಟ ಪ್ರಾರಂಭಗೊಂಡು 44 ದಿನಗಳಾಯಿತು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಧರಣಿ ಕುಳಿತಿದ್ದೇವೆ.
ಪ್ರತಿ ವರ್ಷ ಕೌನ್ಸಿಲಿಂಗ್ ಮಾಡ್ತಾರೆ, ಪ್ರತಿ ವರ್ಷ ಆಯ್ಕೆ ಮಾಡ್ತಾರೆ. ನಮಗೆ ಯಾವ ಕಾಲೇಜು ಸಿಗುತ್ತದೆ ಎಂದು ಗೊತ್ತಿರುವುದಿಲ್ಲ. ಪ್ರಸ್ತುತ ನಾವು 5-6 ಗಂಟೆಗಳ ಕಾಲ ಪ್ರಯಾಣ ಮಾಡಿ ಕಾಲೇಜಿಗೆ ತೆರಳುತ್ತಿದ್ದೇವೆ. ಇದರಿಂದ ಮಹಿಳೆಯರಾದ ನಮಗೆ ಆರೋಗ್ಯ ಹದೆಗೆಡುತ್ತಿದೆ. ಕಾಲೇಜು ಬಳಿಯೇ ಮನೆ ಮಾಡೋಣ ಎಂದರೆ ನಮಗೆ ಸೇವಾ ಭದ್ರತೆ ಇಲ್ಲ. ಮುಂದಿನ ವರ್ಷ ನಮ್ಮನ್ನು ಬೇರೆ ಕಾಲೇಜಿಗೆ ಹಾಕಿದರೆ ಅಲ್ಲಿ ಮನೆ ಮಾಡಬೇಕಾಗುತ್ತದೆ. ಉನ್ನತ ಶಿಕ್ಷಣ ಸಚಿವರು ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ವೇತನ ಹೆಚ್ಚಳ ಮಾಡಿರುವುದನ್ನು ಪಡೆದುಕೊಳ್ಳಲು ನಮಗೆ ಕಲಸದ ಖಾತ್ರಿಯಿಲ್ಲ. ಮುಂದಿನ ವರ್ಷ ನಮ್ಮ ಕೆಲಸ ಹೋದರೂ ಹೊಯಿತು. ಸರ್ಕಾರದಿಂದ ಹೊಸ ನೇಮಕಾತಿಯಾದರೆ, ಡೆಪ್ಯುಟೇಷನ್ ಉಪನ್ಯಾಸಕರು ಬಂದರೆ ನಾವು ಕೆಲಸ ಕಳೆದುಕೊಳ್ಳುತ್ತೇವೆ. ಹೀಗಾದರೆ ನಮ್ಮನ್ನೇ ನಂಬಿರುವ ಕುಟುಂಬದ ಗತಿಯೇನು? ಎಂದು ಪ್ರಶ್ನಿಸಿದರು.

ಪ್ರಸ್ತುತ ಇರುವ ವೇತನ ಕೂಡ ಸರಿಯಾಗಿ ಬರುತ್ತಿಲ್ಲ. ಕಳೆದ ತಿಂಗಳ ವೇತನ ಇನ್ನೂ ಬಂದಿಲ್ಲ. ಎಷ್ಟೋ ಜನ ಉಪನ್ಯಾಸಕರು ಇಲ್ಲಿಗೆ ಬಂದಿಲ್ಲ. ಯಾಕೆಂದರೆ ಅವರತ್ರ ಬರಲು ದುಡ್ಡಿಲ್ಲ. 25-30 ಜನ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಕನಿಷ್ಠ ಪಕ್ಷ ಅವರನ್ನು ನೋಡಲೂ ಯಾರೂ ಬಂದಿಲ್ಲ. ಹಾಗಾದರೆ ನಮ್ಮ ಜೀವಕ್ಕೆ ಬೆಲೆ ಇಲ್ಲವೇ? ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ ಎಂದು ಅಳಲು ತೋಡಿಕೊಂಡರು.

ಸಿದ್ದರಾಮಯ್ಯನವರು ನಿರುದ್ಯೋಗ ಭಾಗ್ಯ ಕೊಡಲಿ 

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಗದಗದ ಅತಿಥಿ ಉಪನ್ಯಾಸಕಿ ಡಾ. ಸುಜಾತ ಎಸ್ ಬರಗೂರು ಮಾತನಾಡಿ, ಉನ್ನತ ಶಿಕ್ಷಣ ಸಚಿವರು ನಮಗೆ ನಾಲ್ಕು ಭರವಸೆಗಳನ್ನು ಕೊಟ್ಟಿದ್ದಾರೆ. ಈ ಪೈಕಿ ನಾವು ನಿವೃತ್ತಿ ಹೊಂದಿದ ಬಳಿಕ ಐದು ಲಕ್ಷ ರೂಪಾಯಿ ಕೊಡೋದು ಒಂದು. ಸಚಿವರು ಹೇಳಿದಂತೆ ನಾವು ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಬಳಿಕ ವರ್ಷಕ್ಕೆ 50 ಸಾವಿರದಂತೆ 10 ವರ್ಷ ದುಡ್ಡು ಸಿಗಲಿದೆ. ಈ ನಿಯಮ ಒಪ್ಪಿಕೊಂಡರೆ ಈಗಾಗಲೇ 40-45 ವರ್ಷ ಸೇವೆ ಸಲ್ಲಿಸಿದವರಿಗೆ ಯಾವ ಲಾಭವೂ ಇಲ್ಲ. ಪ್ರಸ್ತುತ 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರು ಕೂಡ 10 ವರ್ಷ ಪೂರೈಸಿದ ಬಳಿಕವಷ್ಟೇ ಈ ಸೌಲಭ್ಯ ಸಿಗಲಿದೆ. ಇದರಿಂದ ಎಲ್ಲರಿಗೆ ಸಮಾನ ನ್ಯಾಯ ಸಿಗುವುದಿಲ್ಲ ಎಂದರು.

ಪರೀಕ್ಷೆ ಬರೆಯುವ ಬರೆಯುವ ವೇಳೆ ಕೃಪಾಂಕ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದಾರೆ. ವಯೋಮಿತಿ ಮೀರಿದವರಿಗೆ ಪರೀಕ್ಷೆ ಬರೆಯಲು ಅವಕಾಶವೇ ಇಲ್ಲ. ಇನ್ನೆಲ್ಲಿಂದ ಕೃಪಾಂಕ? ಸಚಿವರು ಕೊಟ್ಟ ನಾಲ್ಕೂ ಭರವಸೆಗಳು ಯಾವುದೇ ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡುವುದಿಲ್ಲ. ಈ ಕಾರಣಕ್ಕೆ ನಾವು ಅದನ್ನು ತಿರಸ್ಕರಿಸಿದ್ದೇವೆ. ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಸೇವಾ ಭದ್ರತೆಯ ಗ್ಯಾರಂಟಿಯನ್ನೂ ಕೊಡಲಿ. ಅದು ಆಗುವುದಿಲ್ಲ ಎಂದರೆ ನಿರುದ್ಯೋಗ ಭಾಗ್ಯ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಕೈಗೊಂಡ ಅತಿಥಿ ಉಪನ್ಯಾಸಕರು, ಸುಮಾರು 80 ಕಿ.ಮೀ ನಡೆದು ಜನವರಿ 3ರಂದು ಬೆಂಗಳೂರು ತಲುಪಿದ್ದಾರೆ. ಈ ನಡುವೆ ಪೊಲೀಸರು ಅವರನ್ನು ತಡೆದ ಪ್ರಸಂಗವೂ ನಡೆದಿದೆ. ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದಾರೆ. ಈ ಪೈಕಿ ಸುಮಾರು 25-30 ಜನರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಲೋಕ ಅಖಾಡ: ಮತ್ತೆ ಬಂಗಾರಪ್ಪ-ಯಡಿಯೂರಪ್ಪ ಕುಟುಂಬ ಪ್ರತಿಷ್ಠೆಯ ಕದನ ಕುತೂಹಲ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...