Homeಕರ್ನಾಟಕಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸೆಪ್ಟಂಬರ್‌ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ, ದುರ್ಗಾಪೂಜೆ ಸೇರಿದಂತೆ ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ.

ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸೋಂಕು ಹೆಚ್ಚಾಗಿ ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಹಬ್ಬದ ಸಡಗರದಲ್ಲಿರುವ ಜನರು ಮೈಮರೆತು ಗುಂಪುಗೂಡುವುದರಿಂದ ಕೊರೊನಾ ಸೋಂಕು ಮತ್ತೊಮ್ಮೆ ತೀವ್ರವಾಗಿ ಹರಡುವ ಸಾಧ್ಯತೆ ಇದೆ. ಈ ಸೋಂಕಿನ ಸರಪಳಿ ಮುರಿಯಲು ಕ್ರಮ ಅಗತ್ಯ ಎಂದು ಹೇಳಿದೆ.

ಸೆಪ್ಟಂಬರ್, ಅಕ್ಟೋಬರ್‌ ತಿಂಗಳಲ್ಲಿ ಆಚರಣೆ ಮಾಡಲಾಗುವ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ಮೊಹರಂ, ದುರ್ಗಾಪೂಜೆಯ ಧಾರ್ಮಿಕ ಆಚರಣೆಗಳಲ್ಲಿ ಜನ ಸೇರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜನರ ಒಗ್ಗೂಡುವಿಕೆ, ಬೃಹತ್ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ಗಣೇಶ ಚತುರ್ಥಿಯಲ್ಲಿ ಸರಳವಾಗಿ ದೇವಾಲಯದ ಒಳಗಡೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಟೆಂಟ್, ಶಾಮಿಯಾನ, ಪೆಂಡಾಲ್‌ಗಳನ್ನು ಹಾಕಿ ಸಾರ್ವಜನಿಕವಾಗಿ, ಹೊರಾಂಗಣದಲ್ಲಿ ಗೌರಿ, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ.
ಗಣೇಶ ಮೂರ್ತಿಯನ್ನು ತರುವಾಗ ಮತ್ತು ವಿಸರ್ಜಿಸುವಾಗ ಯಾವುದೇ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗಣೇಶ ಮೂರ್ತಿಯನ್ನು ಮನೆಯಲ್ಲೇ ವಿಸರ್ಜಿಸುವುದು ಅಥವಾ ಸ್ಥಳೀಯ ಆಡಳಿತ ಸಂಸ್ಥೆ ಸೂಚಿಸುವ ಜಾಗದಲ್ಲಿ ವಿಸರ್ಜಿವುದು.

ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ಇನ್ನು ಮೊಹರಂ ಆಚರಣೆಗೂ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು/ ಪಂಜಾವನ್ನು ಸ್ಥಾಪಿಸುವುದನ್ನು ನಿರ್ಬಂಧಿಸಲಾಗಿದೆ. ಪ್ರಾರ್ಥನಾ ಸಭೆ, ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಖಬರಸ್ಥಾನ ಸೇರಿದಂತೆ ಯಾವುದೇ ಖಾಲಿ ಸ್ಥಳದಲ್ಲಿ ಸಾರ್ವಜನಿಕ ಸಭೆ ನಡೆಸುವಂತಿಲ್ಲ.

ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ. 60 ವರ್ಷಕ್ಕಿಂತ ಮೇಲ್ಪಟ್ಟವರು 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮನೆಯಲ್ಲೇ ಪ್ರಾರ್ಥನೆ ಮಾಡಬೇಕು. ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ಮಸೀದಿಯಲ್ಲಿ ಪಾರ್ಥನೆ ಮಾಡಬಹುದು. ಹೆಚ್ಚಿನ ಜನರು ಆಗಮಿಸಿದ್ದಲ್ಲಿ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಹುದು. ಪಾರ್ಥನೆ ಮಾಡುವವರು ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ.


ಇದನ್ನೂ ಓದಿ: ಬಹುಜನ ಭಾರತ; ಈ ಜಾತಿ ದಾಂಧಲೆ ತೆಂಡೂಲ್ಕರ್ ಮನೆ ಮುಂದೆ ನಡೆದಿದ್ದರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...