Homeಕರ್ನಾಟಕಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸೆಪ್ಟಂಬರ್‌ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ, ದುರ್ಗಾಪೂಜೆ ಸೇರಿದಂತೆ ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ.

ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸೋಂಕು ಹೆಚ್ಚಾಗಿ ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಹಬ್ಬದ ಸಡಗರದಲ್ಲಿರುವ ಜನರು ಮೈಮರೆತು ಗುಂಪುಗೂಡುವುದರಿಂದ ಕೊರೊನಾ ಸೋಂಕು ಮತ್ತೊಮ್ಮೆ ತೀವ್ರವಾಗಿ ಹರಡುವ ಸಾಧ್ಯತೆ ಇದೆ. ಈ ಸೋಂಕಿನ ಸರಪಳಿ ಮುರಿಯಲು ಕ್ರಮ ಅಗತ್ಯ ಎಂದು ಹೇಳಿದೆ.

ಸೆಪ್ಟಂಬರ್, ಅಕ್ಟೋಬರ್‌ ತಿಂಗಳಲ್ಲಿ ಆಚರಣೆ ಮಾಡಲಾಗುವ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ಮೊಹರಂ, ದುರ್ಗಾಪೂಜೆಯ ಧಾರ್ಮಿಕ ಆಚರಣೆಗಳಲ್ಲಿ ಜನ ಸೇರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜನರ ಒಗ್ಗೂಡುವಿಕೆ, ಬೃಹತ್ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ಗಣೇಶ ಚತುರ್ಥಿಯಲ್ಲಿ ಸರಳವಾಗಿ ದೇವಾಲಯದ ಒಳಗಡೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಟೆಂಟ್, ಶಾಮಿಯಾನ, ಪೆಂಡಾಲ್‌ಗಳನ್ನು ಹಾಕಿ ಸಾರ್ವಜನಿಕವಾಗಿ, ಹೊರಾಂಗಣದಲ್ಲಿ ಗೌರಿ, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ.
ಗಣೇಶ ಮೂರ್ತಿಯನ್ನು ತರುವಾಗ ಮತ್ತು ವಿಸರ್ಜಿಸುವಾಗ ಯಾವುದೇ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗಣೇಶ ಮೂರ್ತಿಯನ್ನು ಮನೆಯಲ್ಲೇ ವಿಸರ್ಜಿಸುವುದು ಅಥವಾ ಸ್ಥಳೀಯ ಆಡಳಿತ ಸಂಸ್ಥೆ ಸೂಚಿಸುವ ಜಾಗದಲ್ಲಿ ವಿಸರ್ಜಿವುದು.

ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ಇನ್ನು ಮೊಹರಂ ಆಚರಣೆಗೂ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು/ ಪಂಜಾವನ್ನು ಸ್ಥಾಪಿಸುವುದನ್ನು ನಿರ್ಬಂಧಿಸಲಾಗಿದೆ. ಪ್ರಾರ್ಥನಾ ಸಭೆ, ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಖಬರಸ್ಥಾನ ಸೇರಿದಂತೆ ಯಾವುದೇ ಖಾಲಿ ಸ್ಥಳದಲ್ಲಿ ಸಾರ್ವಜನಿಕ ಸಭೆ ನಡೆಸುವಂತಿಲ್ಲ.

ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ. 60 ವರ್ಷಕ್ಕಿಂತ ಮೇಲ್ಪಟ್ಟವರು 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮನೆಯಲ್ಲೇ ಪ್ರಾರ್ಥನೆ ಮಾಡಬೇಕು. ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ಮಸೀದಿಯಲ್ಲಿ ಪಾರ್ಥನೆ ಮಾಡಬಹುದು. ಹೆಚ್ಚಿನ ಜನರು ಆಗಮಿಸಿದ್ದಲ್ಲಿ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಹುದು. ಪಾರ್ಥನೆ ಮಾಡುವವರು ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ.


ಇದನ್ನೂ ಓದಿ: ಬಹುಜನ ಭಾರತ; ಈ ಜಾತಿ ದಾಂಧಲೆ ತೆಂಡೂಲ್ಕರ್ ಮನೆ ಮುಂದೆ ನಡೆದಿದ್ದರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....