Homeಮುಖಪುಟಗುಜರಾತ್: ಚಂಡಿಪುರ ವೈರಸ್‌ನಿಂದ 16 ಸಾವು, 50 ಹೊಸ ಪ್ರಕರಣಗಳು ಪತ್ತೆ

ಗುಜರಾತ್: ಚಂಡಿಪುರ ವೈರಸ್‌ನಿಂದ 16 ಸಾವು, 50 ಹೊಸ ಪ್ರಕರಣಗಳು ಪತ್ತೆ

- Advertisement -
- Advertisement -

ಗುಜರಾತ್‌ನಲ್ಲಿ ಹೆಚ್ಚುತ್ತಿರುವ ‘ಚಂಡಿಪುರ ವೈರಸ್’ ಪ್ರಕರಣಗಳ ಕುರಿತು ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಮಾತನಾಡಿ, ಇಡೀ ರಾಜ್ಯದಲ್ಲಿ 50 ಚಂಡಿಪುರ ವೈರಸ್ ಪ್ರಕರಣಗಳು ವರದಿಯಾಗಿವೆ ಮತ್ತು 16 ಜನರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಿಮ್ಮತ್‌ಪುರದಲ್ಲಿ 14 ಚಂಡೀಪುರ ವೈರಸ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಏಳು ರೋಗಿಗಳು ದಾಖಲಾಗಿದ್ದಾರೆ. ಮೂರು ಪ್ರಕರಣಗಳು ಇತರ ರಾಜ್ಯಗಳಿಂದ ಬಂದಿವೆ, ಇಡೀ ರಾಜ್ಯದಲ್ಲಿ 50 ಚಂಡಿಪುರ ವೈರಸ್ ಪ್ರಕರಣಗಳು ವರದಿಯಾಗಿವೆ ಮತ್ತು ಟ6 ಜನರು ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ರುಶಿಕೇಶ್ ಪಟೇಲ್ ಹೇಳಿದರು.

ಪ್ರತಿ ಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ ಮತ್ತು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳು, ಮುಖ್ಯ ಜಿಲ್ಲಾ ಆರೋಗ್ಯಾಧಿಕಾರಿ (ಸಿಡಿಎಚ್‌ಒ) ಮತ್ತು ವೈದ್ಯಕೀಯ ಕಾಲೇಜುಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಅವರು ಹೇಳಿದರು.

ಗುಜರಾತಿನಲ್ಲಿ ಚಂಡೀಪುರ ವೈರಸ್‌ನ ಲಕ್ಷಣಗಳು ಕಂಡು ಬಂದಿದ್ದು, ಇದು ಸ್ವಲ್ಪ ಭಯವನ್ನುಂಟು ಮಾಡಿದೆ. ಏಳು ಪ್ರಕರಣಗಳನ್ನು ಲ್ಯಾಬ್ ಪರೀಕ್ಷೆಗಾಗಿ ಪುಣೆಗೆ ಕಳುಹಿಸಲಾಗಿದೆ, ಅದರಲ್ಲಿ ಒಂದು ಪ್ರಕರಣ ಮಾತ್ರ ಚಂಡಿಪುರ ವೈರಸ್‌ನ ಪ್ರಕರಣ ಪತ್ತೆಯಾಗಿದೆ. ಇದು ಊತ ಮತ್ತು ಅತಿಸಾರದಂತಹ ಎಲ್ಲ ರೋಗಲಕ್ಷಣಗಳಿಗೆ ಕಾರಣವಾಗಿದೆ, ಇದು ವೈರಸ್‌ಗೆ ಸಂಬಂಧಿಸಿದ ಪ್ರಮುಖ ಮಾಹಿತಿಯು ಇಡೀ ರಾಜ್ಯದಲ್ಲಿ ಪ್ರಸಾರವಾಗಿದೆ.

ಇದಕ್ಕೂ ಮೊದಲು, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಚಂಡೀಪುರ ವೈರಸ್ ಮಧ್ಯೆ ರಾಜ್ಯದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಅವಲೋಕನ ನಡೆಸಿದರು.

ಗುಜರಾತ್ ಆರೋಗ್ಯ ಸಚಿವ ರಿಷಿಕೇಶ್ ಪಟೇಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಗುಜರಾತ್ ಆರೋಗ್ಯ ಇಲಾಖೆ ತಿಳಿಸಿದೆ.

ಸಿಎಂ ಪಟೇಲ್ ಅವರು ರಾಜ್ಯ ಮುನ್ಸಿಪಲ್ ಕಮಿಷನರ್‌ಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳು ಮತ್ತು ಮುಖ್ಯ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ತಮ್ಮ ಜಿಲ್ಲೆಯ ಕಾರ್ಯಕ್ಷಮತೆಯ ವಿವರಗಳನ್ನು ಪಡೆಯಲು ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ರೋಗ ತಡೆಗಟ್ಟಲು ಜಿಲ್ಲೆಗಳಲ್ಲಿ ಮಲಾಥಿಯಾನ್ ಪೌಡರ್ ಸಿಂಪಡಿಸುವ ಅಭಿಯಾನ ನಡೆಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ರೀತಿಯ ಜ್ವರದ ಸಂದರ್ಭದಲ್ಲಿ ರೋಗಿಗಳಿಗೆ ತಕ್ಷಣದ, ತೀವ್ರ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಗುಜರಾತ್ ಆರೋಗ್ಯ ಸಚಿವ, ಹೃಷಿಕೇಶ್ ಪಟೇಲ್, ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ನರ್ಸ್ ಸಹೋದರಿಯರಂತಹ ತಳಮಟ್ಟದ ಕಾರ್ಯಕರ್ತೆಯರು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು. ಗುಜರಾತಿನ ಹಲವು ಜಿಲ್ಲೆಗಳಲ್ಲಿ ಚಂಡಿಪುರ ವೈರಸ್ ಸೋಂಕಿನ ಶಂಕಿತ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ; ಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...