Homeಮುಖಪುಟಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

ಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

- Advertisement -
- Advertisement -

ಗುಜರಾತ್‌ ವಕ್ಫ್ ಮಂಡಳಿಯಡಿಯಲ್ಲಿ ನೋಂದಾಯಿಸಲ್ಪಟ್ಟ, ಅಹಮದಾಬಾದ್ ಮೂಲದ ಎರಡು ಟ್ರಸ್ಟ್‌ಗಳ ಒಡೆತನದ ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡಗಳ ಟ್ರಸ್ಟಿಗಳು ಎಂಬಂತೆ ನಟಿಸಿ 17 ವರ್ಷಗಳ ಕಾಲ ಬಾಡಿಗೆ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಬಗ್ಗೆ ನಗರದ ಗಾಯಕ್ವಾಡ್ ಹವೇಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದು ವರದಿಯಾಗಿದೆ.

ಎಫ್‌ಐಆರ್ ಪ್ರಕಾರ, ಕಾಂಚ್ನಿ ಮಸೀದಿ ಟ್ರಸ್ಟ್ ಮತ್ತು ಶಾ ಬಡಾ ಕಸಮ್ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ಸುಮಾರು 100 ಮನೆಗಳು ಮತ್ತು ಅಂಗಡಿಗಳಿಂದ ವಂಚಕರು ಬಾಡಿಗೆ ಸಂಗ್ರಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

“ವಕ್ಫ್ ಮಂಡಳಿಯ ಅಡಿಯಲ್ಲಿ ನೋಂದಾಯಿಸಲಾದ ಟ್ರಸ್ಟ್‌ಗಳಿಗೆ ಸೇರಿದ ಆಸ್ತಿಗಳನ್ನು ಅವರು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಂಡುಬಂದ ನಂತರ ಅವರ ವಿರುದ್ಧ ವಂಚನೆ ಮತ್ತು ನಕಲಿ ದಾಖಲೆಗಳ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಡಿಸಿಪಿ ಭರತ್ ರಾಥೋಡ್ ಹೇಳಿದ್ದಾರೆ.

ವಕ್ಫ್ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗೆ ಮೀಸಲಿಡಲಾಗಿದೆ. ಅಂತಹ ಆಸ್ತಿಗಳಿಂದ ಬರುವ ಆದಾಯವನ್ನು ಸಾಮಾನ್ಯವಾಗಿ ಧಾರ್ಮಿಕ ಚಟುವಟಿಕೆಗಳು, ದತ್ತಿ ಕಾರ್ಯಗಳು ಅಥವಾ ಸಾರ್ವಜನಿಕ ಪ್ರಯೋಜನಕ್ಕಾಗಿ ಬಳಸಲಾಗುತ್ತದೆ.

ಆರೋಪಿಗಳು ಎರಡು ಟ್ರಸ್ಟ್‌ಗಳಿಗೆ ಸೇರಿದ 5,000 ಚದರ ಮೀಟರ್‌ಗಿಂತ ಹೆಚ್ಚು ಅಕ್ರಮ ನಿರ್ಮಾಣವನ್ನು ನಡೆಸುತ್ತಿದ್ದಾರೆ. ಅವರು ಸುಮಾರು 100 ಆಸ್ತಿಗಳನ್ನು (ಮನೆಗಳು ಮತ್ತು ಅಂಗಡಿಗಳು) ನಿರ್ಮಿಸಿದ್ದು, 2008 ಮತ್ತು 2025 ರ ನಡುವೆ ಮಾಸಿಕ ಬಾಡಿಗೆಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಂಧಿತ ಐವರು ಆರೋಪಿಗಳನ್ನು ಸಲೀಂ ಖಾನ್ ಪಠಾಣ್, ಮೊಹಮ್ಮದ್ ಯಾಸರ್ ಶೇಖ್, ಮಹಮೂದ್‌ಖಾನ್ ಪಠಾಣ್, ಫೈಜ್ ಮೊಹಮ್ಮದ್ ಚೋಬ್ದಾರ್ ಮತ್ತು ಶಾಹಿದ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಸಲೀಂ ಖಾನ್ ಪಠಾಣ್ ಒಬ್ಬ ರೌಡಿ ಶೀಟರ್‌ ಆಗಿದ್ದು, ಶಸ್ತ್ರಾಸ್ತ್ರ ಕಾಯ್ದೆ ಸಂಬಂಧಿಸಿದ ಒಟ್ಟು ಐದು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆರೋಪಿಗಳಲ್ಲಿ ಯಾರೂ ಕೂಡಾ ಯಾವುದೇ ಟ್ರಸ್ಟ್‌ನ ಸದಸ್ಯರಲ್ಲ ಎಂದು ದೂರುದಾರ ಮೊಹಮ್ಮದ್ ರಫೀಕ್ ಹೇಳಿದ್ದಾರೆ. ಅವರು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಬಾಡಿಗೆದಾರರಾಗಿದ್ದಾರೆ. ಬಾಡಿಗೆ ಹಣವನ್ನು ತಮ್ಮ ಲಾಭಕ್ಕಾಗಿ ಬಳಸುವುದರ ಜೊತೆಗೆ, ಶಾ ಬಡಾ ಕಾಸಿ ಟ್ರಸ್ಟ್‌ನ ದೇಣಿಗೆ ಪೆಟ್ಟಿಗೆಯಲ್ಲಿ ಸಂಗ್ರಹಿಸಿದ ಹಣದ ಮಾಲೀಕತ್ವ ತಮ್ಮದು ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆರೋಪಿಗಳು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ 15 ಅಂಗಡಿಗಳನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭೂಮಿಯನ್ನು ಹಿಂದೆ ಉರ್ದು ಶಾಲೆಗಾಗಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಗೆ ಹಸ್ತಾಂತರಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. 2001 ರ ಭೂಕಂಪದ ಸಮಯದಲ್ಲಿ, ಶಾಲಾ ಕಟ್ಟಡ ಶಿಥಿಲಗೊಂಡಿತ್ತು. ಎಎಂಸಿ 2009 ರಲ್ಲಿ ಶಾಲೆಯನ್ನು ಕೆಡವಿ ಹತ್ತಿರದ ಪ್ರದೇಶಕ್ಕೆ ಸ್ಥಳಾಂತರಿಸಿತು.

ಈ ಮಧ್ಯೆ, ನಕಲಿ ಟ್ರಸ್ಟಿಗಳು ಅಲ್ಲಿ ಹತ್ತು ಅಂಗಡಿಗಳನ್ನು ನಿರ್ಮಿಸಿದರು, ಅದರಲ್ಲಿ ಒಂದನ್ನು ಆರೋಪಿ ಸಲೀಂ ಖಾನ್ ತನ್ನ ಕಚೇರಿಯನ್ನಾಗಿ ಬಳಸುತ್ತಿದ್ದರು ಎಂದು ದೂರುದಾರರು ಹೇಳಿದ್ದಾರೆ. ಉಳಿದವುಗಳನ್ನು ಬಾಡಿಗೆಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳು ಸಂಗ್ರಹಿಸಿದ ಬಾಡಿಗೆಯನ್ನು ಟ್ರಸ್ಟ್‌ನ ಖಾತೆಯಲ್ಲಿ ಠೇವಣಿ ಮಾಡಿಲ್ಲ ಅಥವಾ ಎಎಂಸಿಗೆ ಹಸ್ತಾಂತರಿಸಿಲ್ಲ. ಈ ಮೂಲಕ ಅವರು ಎಎಂಸಿ ಮತ್ತು ವಕ್ಫ್ ಮಂಡಳಿಗೆ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  ಗುಜರಾತ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...