Homeಮುಖಪುಟಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

ಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

- Advertisement -
- Advertisement -

ಗುಜರಾತ್‌ ವಕ್ಫ್ ಮಂಡಳಿಯಡಿಯಲ್ಲಿ ನೋಂದಾಯಿಸಲ್ಪಟ್ಟ, ಅಹಮದಾಬಾದ್ ಮೂಲದ ಎರಡು ಟ್ರಸ್ಟ್‌ಗಳ ಒಡೆತನದ ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡಗಳ ಟ್ರಸ್ಟಿಗಳು ಎಂಬಂತೆ ನಟಿಸಿ 17 ವರ್ಷಗಳ ಕಾಲ ಬಾಡಿಗೆ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಬಗ್ಗೆ ನಗರದ ಗಾಯಕ್ವಾಡ್ ಹವೇಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದು ವರದಿಯಾಗಿದೆ.

ಎಫ್‌ಐಆರ್ ಪ್ರಕಾರ, ಕಾಂಚ್ನಿ ಮಸೀದಿ ಟ್ರಸ್ಟ್ ಮತ್ತು ಶಾ ಬಡಾ ಕಸಮ್ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ಸುಮಾರು 100 ಮನೆಗಳು ಮತ್ತು ಅಂಗಡಿಗಳಿಂದ ವಂಚಕರು ಬಾಡಿಗೆ ಸಂಗ್ರಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

“ವಕ್ಫ್ ಮಂಡಳಿಯ ಅಡಿಯಲ್ಲಿ ನೋಂದಾಯಿಸಲಾದ ಟ್ರಸ್ಟ್‌ಗಳಿಗೆ ಸೇರಿದ ಆಸ್ತಿಗಳನ್ನು ಅವರು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಂಡುಬಂದ ನಂತರ ಅವರ ವಿರುದ್ಧ ವಂಚನೆ ಮತ್ತು ನಕಲಿ ದಾಖಲೆಗಳ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಡಿಸಿಪಿ ಭರತ್ ರಾಥೋಡ್ ಹೇಳಿದ್ದಾರೆ.

ವಕ್ಫ್ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗೆ ಮೀಸಲಿಡಲಾಗಿದೆ. ಅಂತಹ ಆಸ್ತಿಗಳಿಂದ ಬರುವ ಆದಾಯವನ್ನು ಸಾಮಾನ್ಯವಾಗಿ ಧಾರ್ಮಿಕ ಚಟುವಟಿಕೆಗಳು, ದತ್ತಿ ಕಾರ್ಯಗಳು ಅಥವಾ ಸಾರ್ವಜನಿಕ ಪ್ರಯೋಜನಕ್ಕಾಗಿ ಬಳಸಲಾಗುತ್ತದೆ.

ಆರೋಪಿಗಳು ಎರಡು ಟ್ರಸ್ಟ್‌ಗಳಿಗೆ ಸೇರಿದ 5,000 ಚದರ ಮೀಟರ್‌ಗಿಂತ ಹೆಚ್ಚು ಅಕ್ರಮ ನಿರ್ಮಾಣವನ್ನು ನಡೆಸುತ್ತಿದ್ದಾರೆ. ಅವರು ಸುಮಾರು 100 ಆಸ್ತಿಗಳನ್ನು (ಮನೆಗಳು ಮತ್ತು ಅಂಗಡಿಗಳು) ನಿರ್ಮಿಸಿದ್ದು, 2008 ಮತ್ತು 2025 ರ ನಡುವೆ ಮಾಸಿಕ ಬಾಡಿಗೆಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಂಧಿತ ಐವರು ಆರೋಪಿಗಳನ್ನು ಸಲೀಂ ಖಾನ್ ಪಠಾಣ್, ಮೊಹಮ್ಮದ್ ಯಾಸರ್ ಶೇಖ್, ಮಹಮೂದ್‌ಖಾನ್ ಪಠಾಣ್, ಫೈಜ್ ಮೊಹಮ್ಮದ್ ಚೋಬ್ದಾರ್ ಮತ್ತು ಶಾಹಿದ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಸಲೀಂ ಖಾನ್ ಪಠಾಣ್ ಒಬ್ಬ ರೌಡಿ ಶೀಟರ್‌ ಆಗಿದ್ದು, ಶಸ್ತ್ರಾಸ್ತ್ರ ಕಾಯ್ದೆ ಸಂಬಂಧಿಸಿದ ಒಟ್ಟು ಐದು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆರೋಪಿಗಳಲ್ಲಿ ಯಾರೂ ಕೂಡಾ ಯಾವುದೇ ಟ್ರಸ್ಟ್‌ನ ಸದಸ್ಯರಲ್ಲ ಎಂದು ದೂರುದಾರ ಮೊಹಮ್ಮದ್ ರಫೀಕ್ ಹೇಳಿದ್ದಾರೆ. ಅವರು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಬಾಡಿಗೆದಾರರಾಗಿದ್ದಾರೆ. ಬಾಡಿಗೆ ಹಣವನ್ನು ತಮ್ಮ ಲಾಭಕ್ಕಾಗಿ ಬಳಸುವುದರ ಜೊತೆಗೆ, ಶಾ ಬಡಾ ಕಾಸಿ ಟ್ರಸ್ಟ್‌ನ ದೇಣಿಗೆ ಪೆಟ್ಟಿಗೆಯಲ್ಲಿ ಸಂಗ್ರಹಿಸಿದ ಹಣದ ಮಾಲೀಕತ್ವ ತಮ್ಮದು ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆರೋಪಿಗಳು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ 15 ಅಂಗಡಿಗಳನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭೂಮಿಯನ್ನು ಹಿಂದೆ ಉರ್ದು ಶಾಲೆಗಾಗಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಗೆ ಹಸ್ತಾಂತರಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. 2001 ರ ಭೂಕಂಪದ ಸಮಯದಲ್ಲಿ, ಶಾಲಾ ಕಟ್ಟಡ ಶಿಥಿಲಗೊಂಡಿತ್ತು. ಎಎಂಸಿ 2009 ರಲ್ಲಿ ಶಾಲೆಯನ್ನು ಕೆಡವಿ ಹತ್ತಿರದ ಪ್ರದೇಶಕ್ಕೆ ಸ್ಥಳಾಂತರಿಸಿತು.

ಈ ಮಧ್ಯೆ, ನಕಲಿ ಟ್ರಸ್ಟಿಗಳು ಅಲ್ಲಿ ಹತ್ತು ಅಂಗಡಿಗಳನ್ನು ನಿರ್ಮಿಸಿದರು, ಅದರಲ್ಲಿ ಒಂದನ್ನು ಆರೋಪಿ ಸಲೀಂ ಖಾನ್ ತನ್ನ ಕಚೇರಿಯನ್ನಾಗಿ ಬಳಸುತ್ತಿದ್ದರು ಎಂದು ದೂರುದಾರರು ಹೇಳಿದ್ದಾರೆ. ಉಳಿದವುಗಳನ್ನು ಬಾಡಿಗೆಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳು ಸಂಗ್ರಹಿಸಿದ ಬಾಡಿಗೆಯನ್ನು ಟ್ರಸ್ಟ್‌ನ ಖಾತೆಯಲ್ಲಿ ಠೇವಣಿ ಮಾಡಿಲ್ಲ ಅಥವಾ ಎಎಂಸಿಗೆ ಹಸ್ತಾಂತರಿಸಿಲ್ಲ. ಈ ಮೂಲಕ ಅವರು ಎಎಂಸಿ ಮತ್ತು ವಕ್ಫ್ ಮಂಡಳಿಗೆ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  ಗುಜರಾತ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...