Homeಮುಖಪುಟಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

ಗುಜರಾತ್‌ | 17 ವರ್ಷಗಳ ಕಾಲ ವಕ್ಫ್‌ ಆಸ್ತಿಯ ಬಾಡಿಗೆ ಸಂಗ್ರಹಿಸುತ್ತಿದ್ದ ನಕಲಿ ಟ್ರಸ್ಟಿಗಳ ಬಂಧನ

- Advertisement -
- Advertisement -

ಗುಜರಾತ್‌ ವಕ್ಫ್ ಮಂಡಳಿಯಡಿಯಲ್ಲಿ ನೋಂದಾಯಿಸಲ್ಪಟ್ಟ, ಅಹಮದಾಬಾದ್ ಮೂಲದ ಎರಡು ಟ್ರಸ್ಟ್‌ಗಳ ಒಡೆತನದ ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡಗಳ ಟ್ರಸ್ಟಿಗಳು ಎಂಬಂತೆ ನಟಿಸಿ 17 ವರ್ಷಗಳ ಕಾಲ ಬಾಡಿಗೆ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಬಗ್ಗೆ ನಗರದ ಗಾಯಕ್ವಾಡ್ ಹವೇಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದು ವರದಿಯಾಗಿದೆ.

ಎಫ್‌ಐಆರ್ ಪ್ರಕಾರ, ಕಾಂಚ್ನಿ ಮಸೀದಿ ಟ್ರಸ್ಟ್ ಮತ್ತು ಶಾ ಬಡಾ ಕಸಮ್ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ಸುಮಾರು 100 ಮನೆಗಳು ಮತ್ತು ಅಂಗಡಿಗಳಿಂದ ವಂಚಕರು ಬಾಡಿಗೆ ಸಂಗ್ರಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

“ವಕ್ಫ್ ಮಂಡಳಿಯ ಅಡಿಯಲ್ಲಿ ನೋಂದಾಯಿಸಲಾದ ಟ್ರಸ್ಟ್‌ಗಳಿಗೆ ಸೇರಿದ ಆಸ್ತಿಗಳನ್ನು ಅವರು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಂಡುಬಂದ ನಂತರ ಅವರ ವಿರುದ್ಧ ವಂಚನೆ ಮತ್ತು ನಕಲಿ ದಾಖಲೆಗಳ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಡಿಸಿಪಿ ಭರತ್ ರಾಥೋಡ್ ಹೇಳಿದ್ದಾರೆ.

ವಕ್ಫ್ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗೆ ಮೀಸಲಿಡಲಾಗಿದೆ. ಅಂತಹ ಆಸ್ತಿಗಳಿಂದ ಬರುವ ಆದಾಯವನ್ನು ಸಾಮಾನ್ಯವಾಗಿ ಧಾರ್ಮಿಕ ಚಟುವಟಿಕೆಗಳು, ದತ್ತಿ ಕಾರ್ಯಗಳು ಅಥವಾ ಸಾರ್ವಜನಿಕ ಪ್ರಯೋಜನಕ್ಕಾಗಿ ಬಳಸಲಾಗುತ್ತದೆ.

ಆರೋಪಿಗಳು ಎರಡು ಟ್ರಸ್ಟ್‌ಗಳಿಗೆ ಸೇರಿದ 5,000 ಚದರ ಮೀಟರ್‌ಗಿಂತ ಹೆಚ್ಚು ಅಕ್ರಮ ನಿರ್ಮಾಣವನ್ನು ನಡೆಸುತ್ತಿದ್ದಾರೆ. ಅವರು ಸುಮಾರು 100 ಆಸ್ತಿಗಳನ್ನು (ಮನೆಗಳು ಮತ್ತು ಅಂಗಡಿಗಳು) ನಿರ್ಮಿಸಿದ್ದು, 2008 ಮತ್ತು 2025 ರ ನಡುವೆ ಮಾಸಿಕ ಬಾಡಿಗೆಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಂಧಿತ ಐವರು ಆರೋಪಿಗಳನ್ನು ಸಲೀಂ ಖಾನ್ ಪಠಾಣ್, ಮೊಹಮ್ಮದ್ ಯಾಸರ್ ಶೇಖ್, ಮಹಮೂದ್‌ಖಾನ್ ಪಠಾಣ್, ಫೈಜ್ ಮೊಹಮ್ಮದ್ ಚೋಬ್ದಾರ್ ಮತ್ತು ಶಾಹಿದ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಸಲೀಂ ಖಾನ್ ಪಠಾಣ್ ಒಬ್ಬ ರೌಡಿ ಶೀಟರ್‌ ಆಗಿದ್ದು, ಶಸ್ತ್ರಾಸ್ತ್ರ ಕಾಯ್ದೆ ಸಂಬಂಧಿಸಿದ ಒಟ್ಟು ಐದು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆರೋಪಿಗಳಲ್ಲಿ ಯಾರೂ ಕೂಡಾ ಯಾವುದೇ ಟ್ರಸ್ಟ್‌ನ ಸದಸ್ಯರಲ್ಲ ಎಂದು ದೂರುದಾರ ಮೊಹಮ್ಮದ್ ರಫೀಕ್ ಹೇಳಿದ್ದಾರೆ. ಅವರು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಬಾಡಿಗೆದಾರರಾಗಿದ್ದಾರೆ. ಬಾಡಿಗೆ ಹಣವನ್ನು ತಮ್ಮ ಲಾಭಕ್ಕಾಗಿ ಬಳಸುವುದರ ಜೊತೆಗೆ, ಶಾ ಬಡಾ ಕಾಸಿ ಟ್ರಸ್ಟ್‌ನ ದೇಣಿಗೆ ಪೆಟ್ಟಿಗೆಯಲ್ಲಿ ಸಂಗ್ರಹಿಸಿದ ಹಣದ ಮಾಲೀಕತ್ವ ತಮ್ಮದು ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆರೋಪಿಗಳು ಕಾಂಚಿನಿ ಮಸೀದಿ ಟ್ರಸ್ಟ್‌ಗೆ ಸೇರಿದ ಭೂಮಿಯಲ್ಲಿ 15 ಅಂಗಡಿಗಳನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭೂಮಿಯನ್ನು ಹಿಂದೆ ಉರ್ದು ಶಾಲೆಗಾಗಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಗೆ ಹಸ್ತಾಂತರಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. 2001 ರ ಭೂಕಂಪದ ಸಮಯದಲ್ಲಿ, ಶಾಲಾ ಕಟ್ಟಡ ಶಿಥಿಲಗೊಂಡಿತ್ತು. ಎಎಂಸಿ 2009 ರಲ್ಲಿ ಶಾಲೆಯನ್ನು ಕೆಡವಿ ಹತ್ತಿರದ ಪ್ರದೇಶಕ್ಕೆ ಸ್ಥಳಾಂತರಿಸಿತು.

ಈ ಮಧ್ಯೆ, ನಕಲಿ ಟ್ರಸ್ಟಿಗಳು ಅಲ್ಲಿ ಹತ್ತು ಅಂಗಡಿಗಳನ್ನು ನಿರ್ಮಿಸಿದರು, ಅದರಲ್ಲಿ ಒಂದನ್ನು ಆರೋಪಿ ಸಲೀಂ ಖಾನ್ ತನ್ನ ಕಚೇರಿಯನ್ನಾಗಿ ಬಳಸುತ್ತಿದ್ದರು ಎಂದು ದೂರುದಾರರು ಹೇಳಿದ್ದಾರೆ. ಉಳಿದವುಗಳನ್ನು ಬಾಡಿಗೆಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳು ಸಂಗ್ರಹಿಸಿದ ಬಾಡಿಗೆಯನ್ನು ಟ್ರಸ್ಟ್‌ನ ಖಾತೆಯಲ್ಲಿ ಠೇವಣಿ ಮಾಡಿಲ್ಲ ಅಥವಾ ಎಎಂಸಿಗೆ ಹಸ್ತಾಂತರಿಸಿಲ್ಲ. ಈ ಮೂಲಕ ಅವರು ಎಎಂಸಿ ಮತ್ತು ವಕ್ಫ್ ಮಂಡಳಿಗೆ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  ಗುಜರಾತ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...