Homeಮುಖಪುಟಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

ಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಬೆಟ್ ದ್ವಾರಕ ಜಿಲ್ಲಾ ಆಡಳಿತವು ಈ ವಾರದಲ್ಲಿ ದರ್ಗಾಗಳು (ಮುಸ್ಲಿಂ ದೇವಾಲಯ), ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಸುಮಾರು 335 ಕಟ್ಟಡಗಳನ್ನು ಕೆಡವಿದೆ. ಅವುಗಳನ್ನು “ಅತಿಕ್ರಮಣ” ಕಟ್ಟಡಗಳು ಎಂದು ಅದು ಘೋಷಿಸಿದೆ.

ಕಳೆದ ಶನಿವಾರದಿಂದ ಬೆಟ್ ದ್ವಾರಕ ದ್ವೀಪದ ಬಾಲಪರ್ ಗ್ರಾಮದಲ್ಲಿ ಬೃಹತ್ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಈ ಬೃಹತ್ ಮಟ್ಟದ ತೆರವು ಕಾರ್ಯಾಚರಣೆಯ ವೀಡಿಯೊಗಳನ್ನು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿಯವರು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

53,04,25,500 ರೂ. ಮೌಲ್ಯದ 1,00,642 ಚದರ ಮೀಟರ್ ಭೂಮಿಯಲ್ಲಿ ತೆರವುಗೊಳಿಸಲಾಗಿದೆ. ಇವುಗಳಲ್ಲಿ 314 ವಸತಿ ಕಟ್ಟಡಗಳು, 9 ವಾಣಿಜ್ಯ ಕಟ್ಟಡಗಳು ಮತ್ತು 12 ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳು ಸೇರಿವೆ ಎಂದು ಸಂಘವಿ ಹೇಳಿದ್ದಾರೆ.

ಗೌರವಾನ್ವಿತ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ನೇತೃತ್ವದಲ್ಲಿ ಈ ಭೂಮಿಯಲ್ಲಿ ಶೀಘ್ರದಲ್ಲೇ ಜನರಿಗೆ ಹೊಸ ಸೌಲಭ್ಯಗಳನ್ನು ಒದಗಿಸಲಿದ್ದೇವೆ. ಎಲ್ಲರ ಉತ್ತಮ ಭವಿಷ್ಯದತ್ತ ಒಂದು ಉತ್ತಮ ಹೆಜ್ಜೆ!” ಎಂದು ಅವರು ಹೇಳಿದರು.

ಆದಾಗ್ಯೂ, ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಸರ್ಕಾರವು ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಹೇಳಿದೆ.

“ಗುಜರಾತ್‌ನ ಬೆಟ್ ದ್ವಾರಕಾದಲ್ಲಿ ನಡೆಯುತ್ತಿರುವ ಬೃಹತ್ ಮತ್ತು ನಿರಂತರ ಧ್ವಂಸ ಕಾರ್ಯಾಚರಣೆಯಲ್ಲಿ, 13,12,72,000 ರೂ. ಮೌಲ್ಯದ ವಸತಿ ಆಸ್ತಿಗಳು ಮತ್ತು ಹಜರತ್ ಪಂಜ್ ಪೀರ್ ದರ್ಗಾವನ್ನು ಭಾನುವಾರ ಮಾತ್ರವೇ ಕೆಡವಲಾಯಿತು. ಇಲ್ಲಿ ಮುಸ್ಲಿಂ ಪೂಜಾ ಸ್ಥಳಗಳು ಮತ್ತು ಮುಸ್ಲಿಂ ಸ್ಮಾರಕಗಳು ಅನಿವಾರ್ಯವಾಗಿ ಗುರಿಯಾಗಿವೆ ಎಂದು ಹೇಳಬೇಕಾಗಿಲ್ಲ” ಎಂದು SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹೇಳಿದರು.

ಸರ್ಕಾರವು ವಿಶ್ವದ ಇತರ ಭಾಗಗಳಲ್ಲಿನ ನಿರ್ಮಾಣದ ಮೇಲೆ ಕೇಂದ್ರೀಕರಿಸಿದೆ. ಆದಾಗ್ಯೂ, ಮೋದಿ ಸರ್ಕಾರವು ತೆರವು ಮತ್ತು ವಿನಾಶಗಳ ಮೇಲೆ ಕೇಂದ್ರೀಕರಿಸಿದೆ ಎಂದು ಅವರು ಹೇಳಿದ್ದಾರೆ.

“ಬುಲ್ಡೋಜರ್ ಬಿಜೆಪಿ ಆಡಳಿತಗಾರರ ವಜ್ರಾಯುಧವಾಗಿದೆ ಮತ್ತು ‘ಅತಿಕ್ರಮಣ’ ಮತ್ತು ‘ಅನಧಿಕೃತ ಅಥವಾ ಅಕ್ರಮ ನಿರ್ಮಾಣವು ಅವರ ಟ್ರಂಪ್ ಕಾರ್ಡ್ ಆಗಿದೆ. ಬುಲ್ಡೋಜರ್‌ನಿಂದ ಹೊಡೆದುರುಳಿಸಲ್ಪಡುವವರು ಯಾವಾಗಲೂ ಮುಸ್ಲಿಮರು ಆಗಿದ್ದಾರೆ” ಎಂದು ಫರಂಗಿಪೇಟೆ ತಿಳಿಸಿದರು.

ಈ ಕಟ್ಟಡಗಳ ತೆರವು ಕಾರ್ಯಾಚರಣೆಯು ಭಾರೀ ಪೊಲೀಸ್ ಭದ್ರತೆಯಲ್ಲಿ ಪ್ರಾರಂಭವಾಗಿದೆ. ಇದಕ್ಕಾಗಿ ಇತರ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆತರಲಾಗಿದೆ ಮತ್ತು 1,000 ಸಿಬ್ಬಂದಿಯನ್ನು ಬೆಟ್ ದ್ವಾರಕದಲ್ಲಿ ನಿಯೋಜಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೇವಭೂಮಿ ದ್ವಾರಕ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಪಾಂಡೆ, “ಜಿಲ್ಲಾಡಳಿತವು ಬೆಟ್ ದ್ವಾರಕದ ಬಾಲಪರ್ ಪ್ರದೇಶದಲ್ಲಿ ಅಕ್ರಮ ನಿರ್ಮಾಣಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು SRP ಮತ್ತು ಮೆರಿನ್ ಟಾಸ್ಕ್ ಫೋರ್ಸ್ ಸೇರಿದಂತೆ ಸುಮಾರು 1,000 ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಕರಾವಳಿ ಭದ್ರತೆಯನ್ನು ಕಾಪಾಡಿಕೊಳ್ಳಲು, ಪೊಲೀಸ್ ದೋಣಿ ಗಸ್ತು ಮುಂದುವರೆಯಿತು ಮತ್ತು ನಾವು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಸಹ ಬಳಸುತ್ತಿದ್ದೇವೆ” ಎಂದಿದ್ದಾರೆ.

ತೆರವು ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಶುಕ್ರವಾರದಿಂದ ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಹೊರಗಿನವರನ್ನು ಒಳಗೆ ಬಿಡುತ್ತಿಲ್ಲವೆಂದು ವರದಿಗಳು ಹೇಳಿವೆ.

ಬೆಟ್ ದ್ವಾರಕವನ್ನು ಓಖಾ ಕರಾವಳಿಗೆ ಸಂಪರ್ಕಿಸುವ ಭಾರತದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯಾದ ಸುದರ್ಶನ ಸೇತುಗೆ ಕಳೆದ ವರ್ಷ ಫೆಬ್ರವರಿ 25ರಂದು ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಬೆಟ್ ದ್ವಾರಕಕ್ಕೆ ಭೇಟಿ ನೀಡುತ್ತಾರೆ ಮತ್ತು ಸೇತುವೆ ತೆರೆದ ನಂತರ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ.

ಈ ಹಿಂದೆ, ಅಕ್ಟೋಬರ್ 2022ರಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಗುಜರಾತ್‌ನ ಗಿರ್-ಸೋಮನಾಥ್ ಜಿಲ್ಲೆಯ ವೆರಾವಲ್ ಪ್ರದೇಶದಲ್ಲಿ ಅತಿಕ್ರಮಣಗಳನ್ನು ತೆರವುಗೊಳಿಸುವ  ಕಾರ್ಯಾಚರಣೆಯ ಭಾಗವಾಗಿ ಮಸೀದಿಗಳು ಮತ್ತು ದರ್ಗಾಗಳು ಸೇರಿದಂತೆ ಒಂಬತ್ತು ಧಾರ್ಮಿಕ ಸ್ಥಳಗಳನ್ನು ತೆರವುಗೊಳಿಸಲಾಗಿತ್ತು. ಆನಂತರ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ನೆಲಸಮ ಮಾಡಿದ್ದಕ್ಕಾಗಿ ಗುಜರಾತ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮಾಲೀಕರಿಗೆ 15 ದಿನಗಳ ಪೂರ್ವ ಸೂಚನೆ ಇಲ್ಲದೆ ಮತ್ತು ಕಾನೂನುಬದ್ಧ ಮಾರ್ಗಸೂಚಿಗಳನ್ನು ಅನುಸರಿಸದೆ ಯಾವುದೇ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸುವ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ.

ನೋಟಿಸ್ ಅನ್ನು ನೋಂದಾಯಿತ ಅಂಚೆ ಮೂಲಕ ಮಾಲೀಕರಿಗೆ ತಲುಪಿಸಬೇಕು ಮತ್ತು ಕಟ್ಟಡದ ಹೊರ ಭಾಗದಲ್ಲಿ ಅಂಟಿಸಬೇಕು. ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿರ್ದಿಷ್ಟ ಉಲ್ಲಂಘನೆಯ ವಿವರಗಳು ಮತ್ತು ತೆರವಿಗೆ ಕಾರಣಗಳನ್ನು ಒಳಗೊಂಡಿರಬೇಕು. ತೆರವು ಕಾರ್ಯಾಚರಣೆಯನ್ನು ವೀಡಿಯೊಗ್ರಾಫ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾನೂನು ಉಲ್ಲಂಘನೆಗಳು ಕಾನೂನುಬಾಹಿರತೆಯನ್ನು ಉತ್ತೇಜಿಸಬಹುದು ಮತ್ತು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾಗರಿಕ ಹಕ್ಕುಗಳ ರಕ್ಷಣೆ ಅತ್ಯಗತ್ಯ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...