Homeಮುಖಪುಟಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

ಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಬೆಟ್ ದ್ವಾರಕ ಜಿಲ್ಲಾ ಆಡಳಿತವು ಈ ವಾರದಲ್ಲಿ ದರ್ಗಾಗಳು (ಮುಸ್ಲಿಂ ದೇವಾಲಯ), ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಸುಮಾರು 335 ಕಟ್ಟಡಗಳನ್ನು ಕೆಡವಿದೆ. ಅವುಗಳನ್ನು “ಅತಿಕ್ರಮಣ” ಕಟ್ಟಡಗಳು ಎಂದು ಅದು ಘೋಷಿಸಿದೆ.

ಕಳೆದ ಶನಿವಾರದಿಂದ ಬೆಟ್ ದ್ವಾರಕ ದ್ವೀಪದ ಬಾಲಪರ್ ಗ್ರಾಮದಲ್ಲಿ ಬೃಹತ್ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಈ ಬೃಹತ್ ಮಟ್ಟದ ತೆರವು ಕಾರ್ಯಾಚರಣೆಯ ವೀಡಿಯೊಗಳನ್ನು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿಯವರು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

53,04,25,500 ರೂ. ಮೌಲ್ಯದ 1,00,642 ಚದರ ಮೀಟರ್ ಭೂಮಿಯಲ್ಲಿ ತೆರವುಗೊಳಿಸಲಾಗಿದೆ. ಇವುಗಳಲ್ಲಿ 314 ವಸತಿ ಕಟ್ಟಡಗಳು, 9 ವಾಣಿಜ್ಯ ಕಟ್ಟಡಗಳು ಮತ್ತು 12 ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳು ಸೇರಿವೆ ಎಂದು ಸಂಘವಿ ಹೇಳಿದ್ದಾರೆ.

ಗೌರವಾನ್ವಿತ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ನೇತೃತ್ವದಲ್ಲಿ ಈ ಭೂಮಿಯಲ್ಲಿ ಶೀಘ್ರದಲ್ಲೇ ಜನರಿಗೆ ಹೊಸ ಸೌಲಭ್ಯಗಳನ್ನು ಒದಗಿಸಲಿದ್ದೇವೆ. ಎಲ್ಲರ ಉತ್ತಮ ಭವಿಷ್ಯದತ್ತ ಒಂದು ಉತ್ತಮ ಹೆಜ್ಜೆ!” ಎಂದು ಅವರು ಹೇಳಿದರು.

ಆದಾಗ್ಯೂ, ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಸರ್ಕಾರವು ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಹೇಳಿದೆ.

“ಗುಜರಾತ್‌ನ ಬೆಟ್ ದ್ವಾರಕಾದಲ್ಲಿ ನಡೆಯುತ್ತಿರುವ ಬೃಹತ್ ಮತ್ತು ನಿರಂತರ ಧ್ವಂಸ ಕಾರ್ಯಾಚರಣೆಯಲ್ಲಿ, 13,12,72,000 ರೂ. ಮೌಲ್ಯದ ವಸತಿ ಆಸ್ತಿಗಳು ಮತ್ತು ಹಜರತ್ ಪಂಜ್ ಪೀರ್ ದರ್ಗಾವನ್ನು ಭಾನುವಾರ ಮಾತ್ರವೇ ಕೆಡವಲಾಯಿತು. ಇಲ್ಲಿ ಮುಸ್ಲಿಂ ಪೂಜಾ ಸ್ಥಳಗಳು ಮತ್ತು ಮುಸ್ಲಿಂ ಸ್ಮಾರಕಗಳು ಅನಿವಾರ್ಯವಾಗಿ ಗುರಿಯಾಗಿವೆ ಎಂದು ಹೇಳಬೇಕಾಗಿಲ್ಲ” ಎಂದು SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹೇಳಿದರು.

ಸರ್ಕಾರವು ವಿಶ್ವದ ಇತರ ಭಾಗಗಳಲ್ಲಿನ ನಿರ್ಮಾಣದ ಮೇಲೆ ಕೇಂದ್ರೀಕರಿಸಿದೆ. ಆದಾಗ್ಯೂ, ಮೋದಿ ಸರ್ಕಾರವು ತೆರವು ಮತ್ತು ವಿನಾಶಗಳ ಮೇಲೆ ಕೇಂದ್ರೀಕರಿಸಿದೆ ಎಂದು ಅವರು ಹೇಳಿದ್ದಾರೆ.

“ಬುಲ್ಡೋಜರ್ ಬಿಜೆಪಿ ಆಡಳಿತಗಾರರ ವಜ್ರಾಯುಧವಾಗಿದೆ ಮತ್ತು ‘ಅತಿಕ್ರಮಣ’ ಮತ್ತು ‘ಅನಧಿಕೃತ ಅಥವಾ ಅಕ್ರಮ ನಿರ್ಮಾಣವು ಅವರ ಟ್ರಂಪ್ ಕಾರ್ಡ್ ಆಗಿದೆ. ಬುಲ್ಡೋಜರ್‌ನಿಂದ ಹೊಡೆದುರುಳಿಸಲ್ಪಡುವವರು ಯಾವಾಗಲೂ ಮುಸ್ಲಿಮರು ಆಗಿದ್ದಾರೆ” ಎಂದು ಫರಂಗಿಪೇಟೆ ತಿಳಿಸಿದರು.

ಈ ಕಟ್ಟಡಗಳ ತೆರವು ಕಾರ್ಯಾಚರಣೆಯು ಭಾರೀ ಪೊಲೀಸ್ ಭದ್ರತೆಯಲ್ಲಿ ಪ್ರಾರಂಭವಾಗಿದೆ. ಇದಕ್ಕಾಗಿ ಇತರ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆತರಲಾಗಿದೆ ಮತ್ತು 1,000 ಸಿಬ್ಬಂದಿಯನ್ನು ಬೆಟ್ ದ್ವಾರಕದಲ್ಲಿ ನಿಯೋಜಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೇವಭೂಮಿ ದ್ವಾರಕ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಪಾಂಡೆ, “ಜಿಲ್ಲಾಡಳಿತವು ಬೆಟ್ ದ್ವಾರಕದ ಬಾಲಪರ್ ಪ್ರದೇಶದಲ್ಲಿ ಅಕ್ರಮ ನಿರ್ಮಾಣಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು SRP ಮತ್ತು ಮೆರಿನ್ ಟಾಸ್ಕ್ ಫೋರ್ಸ್ ಸೇರಿದಂತೆ ಸುಮಾರು 1,000 ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಕರಾವಳಿ ಭದ್ರತೆಯನ್ನು ಕಾಪಾಡಿಕೊಳ್ಳಲು, ಪೊಲೀಸ್ ದೋಣಿ ಗಸ್ತು ಮುಂದುವರೆಯಿತು ಮತ್ತು ನಾವು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಸಹ ಬಳಸುತ್ತಿದ್ದೇವೆ” ಎಂದಿದ್ದಾರೆ.

ತೆರವು ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಶುಕ್ರವಾರದಿಂದ ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಹೊರಗಿನವರನ್ನು ಒಳಗೆ ಬಿಡುತ್ತಿಲ್ಲವೆಂದು ವರದಿಗಳು ಹೇಳಿವೆ.

ಬೆಟ್ ದ್ವಾರಕವನ್ನು ಓಖಾ ಕರಾವಳಿಗೆ ಸಂಪರ್ಕಿಸುವ ಭಾರತದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯಾದ ಸುದರ್ಶನ ಸೇತುಗೆ ಕಳೆದ ವರ್ಷ ಫೆಬ್ರವರಿ 25ರಂದು ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಬೆಟ್ ದ್ವಾರಕಕ್ಕೆ ಭೇಟಿ ನೀಡುತ್ತಾರೆ ಮತ್ತು ಸೇತುವೆ ತೆರೆದ ನಂತರ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ.

ಈ ಹಿಂದೆ, ಅಕ್ಟೋಬರ್ 2022ರಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಗುಜರಾತ್‌ನ ಗಿರ್-ಸೋಮನಾಥ್ ಜಿಲ್ಲೆಯ ವೆರಾವಲ್ ಪ್ರದೇಶದಲ್ಲಿ ಅತಿಕ್ರಮಣಗಳನ್ನು ತೆರವುಗೊಳಿಸುವ  ಕಾರ್ಯಾಚರಣೆಯ ಭಾಗವಾಗಿ ಮಸೀದಿಗಳು ಮತ್ತು ದರ್ಗಾಗಳು ಸೇರಿದಂತೆ ಒಂಬತ್ತು ಧಾರ್ಮಿಕ ಸ್ಥಳಗಳನ್ನು ತೆರವುಗೊಳಿಸಲಾಗಿತ್ತು. ಆನಂತರ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ನೆಲಸಮ ಮಾಡಿದ್ದಕ್ಕಾಗಿ ಗುಜರಾತ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮಾಲೀಕರಿಗೆ 15 ದಿನಗಳ ಪೂರ್ವ ಸೂಚನೆ ಇಲ್ಲದೆ ಮತ್ತು ಕಾನೂನುಬದ್ಧ ಮಾರ್ಗಸೂಚಿಗಳನ್ನು ಅನುಸರಿಸದೆ ಯಾವುದೇ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸುವ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ.

ನೋಟಿಸ್ ಅನ್ನು ನೋಂದಾಯಿತ ಅಂಚೆ ಮೂಲಕ ಮಾಲೀಕರಿಗೆ ತಲುಪಿಸಬೇಕು ಮತ್ತು ಕಟ್ಟಡದ ಹೊರ ಭಾಗದಲ್ಲಿ ಅಂಟಿಸಬೇಕು. ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿರ್ದಿಷ್ಟ ಉಲ್ಲಂಘನೆಯ ವಿವರಗಳು ಮತ್ತು ತೆರವಿಗೆ ಕಾರಣಗಳನ್ನು ಒಳಗೊಂಡಿರಬೇಕು. ತೆರವು ಕಾರ್ಯಾಚರಣೆಯನ್ನು ವೀಡಿಯೊಗ್ರಾಫ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾನೂನು ಉಲ್ಲಂಘನೆಗಳು ಕಾನೂನುಬಾಹಿರತೆಯನ್ನು ಉತ್ತೇಜಿಸಬಹುದು ಮತ್ತು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾಗರಿಕ ಹಕ್ಕುಗಳ ರಕ್ಷಣೆ ಅತ್ಯಗತ್ಯ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...